AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇ ವಿಧಿಯಾಟ: ತಂಗಿ ಶವಸಂಸ್ಕಾರಕ್ಕೆ ಬಂದವರು ಅಕ್ಕನ ಅಂತ್ಯಸಂಸ್ಕಾರ ಮಾಡಬೇಕಾಯ್ತು!

ಸಾವು ಯಾವಾಗ? ಯಾವ ರೀತಿ ಬರುತ್ತೆ ಅಂತ ಯೋಚನೆ ಸಹ ಮಾಡುವುದಕ್ಕೂ ಆಗುತ್ತಿಲ್ಲ. ಮನೆಯಿಂದ ಆಚೆ ಹೋದವರು ವಾಪಸ್ ಬರ್ತಾರೆ ಎನ್ನುವದೇ ಗ್ಯಾರಂಟಿ ಇಲ್ಲ. ಇನ್ನು ರಾತ್ರಿ ಮಲಗಿದ್ದವರು ಬೆಳಗ್ಗೆ ಎದ್ದೇಳುತ್ತಾರೆ ಎನ್ನುವುದು ಗೊತ್ತಿಲ್ಲ. ಅದರಂತೆ ತಂಗಿ ಅಂತ್ಯಸಂಸ್ಕಾರಕ್ಕೆಂದು ಹೊರಟ್ಟಿದ್ದ ಅಕ್ಕನೂ ಸಹ ಮಸಣ ಸೇರುವಂತಾಗಿದೆ. ತಂಗಿ ಶವ ಸಂಸ್ಕಾರದ ಬಳಿಕ ಸಂಬಂಧಿಕರು ಅಕ್ಕನ ಅಂತ್ಯಸಂಸ್ಕಾರವನ್ನ ನೆರವೇರಿಸಿದ್ದಾರೆ.

ಇದೇ ವಿಧಿಯಾಟ: ತಂಗಿ ಶವಸಂಸ್ಕಾರಕ್ಕೆ ಬಂದವರು ಅಕ್ಕನ ಅಂತ್ಯಸಂಸ್ಕಾರ ಮಾಡಬೇಕಾಯ್ತು!
Davanagere Sisters
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Jun 20, 2025 | 4:50 PM

Share

ದಾವಣಗೆರೆ, (ಜೂನ್ 20): ವಿಧಿಯಾಟವನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಇದಕ್ಕೆ ಪೂರಕವೆಂಬಂತೆ ತಂಗಿಯ ಅಂತ್ಯಕ್ರಿಯೆಗೆ (Sister funeral )ತೆರಳುತ್ತಿದ್ದ ಅಕ್ಕ ಅಪಘಾತದಲ್ಲಿ ಸಾವನ್ನಪ್ಪಿದ್ದಾಳೆ. ಜಿಗಳಿ ಗ್ರಾಮದ ಕಂಬಳಿ ಚನ್ನಬಸಮ್ಮ (68) ನಿಧನರಾಗಿದ್ದು, ಇವರ ಅಂತ್ಯಸಂಸ್ಕಾರಕ್ಕೆಂದು ಹೊರಟ್ಟಿದ್ದ ಮೃತ ಚನ್ನಬಸಮ್ಮಳ ಅಕ್ಕ ಹರಳಹಳ್ಳಿ ನೀಲಮ್ಮ ಸಹ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾಳೆ.  ದಾವಣಗೆರೆ (Davanagere) ಜಿಲ್ಲೆ ಹರಿಹರ ತಾಲೂಕಿನ ಜಿಗಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಂಗಿ ಅಂತ್ಯಸಂಸ್ಕರಕ್ಕೆ ಬಂದಿದ್ದ ಸಂಬಂಧಿಕರು ಅಕ್ಕನ ಅಂತ್ಯಕ್ರಿಯೆಯಲ್ಲೂ ಪಾಲ್ಗೊಳ್ಳಬೇಕಾಯ್ತು.

ತಂಗಿ ಚನ್ನಬಸಮ್ಮ ಅಂತ್ಯಸಂಸ್ಕಾರಕ್ಕೆಂದು ಅಕ್ಕ ನೀಲಮ್ಮ ಬೈಕ್​ ನಲ್ಲಿ ಜಿಗಳಿ ಗ್ರಾಮಕ್ಕೆ ಹೊರಟ್ಟಿದ್ದರು. ಆದ್ರೆ, ಹರಿಹರ ತಾಲೂಕಿನ ಜಿಗಳಿ ಗ್ರಾಮದಲ್ಲಿ ನೀಲಮ್ಮ ಇದ್ದ ಬೈಕ್​​ ಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ನೀಲಮ್ಮ ಸಾವನ್ನಪ್ಪಿದ್ದು, ಸಂಬಂಧಿಕರು ಮೊದಲು ತಂಗಿ ಚನ್ನಬಸಮ್ಮಳ ಅಂತ್ಯಕ್ರಿಯೆ ಮುಗಿಸಿ ಬಳಿಕ ಅಕ್ಕ ನೀಲಮ್ಮಳ ಅಂತ್ಯಸಂಸ್ಕಾರವನ್ನು ಹರಳಹಳ್ಳಿಯಲ್ಲಿ ನೆರವೇರಿಸಿದರು.

ಇದನ್ನೂ ನೋಡಿ: ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ

ಕೆಎ 14, ಎಂಎ 0209 ನಂಬರಿನ ಭದ್ರಾವತಿ ಮೂಲದ ಅರುಣ್ ಕುಮಾರ್ ಎಂಬಾತ ಅಜಾಗರೂಕತೆಯಿಂದ ಕಾರು ಚಲಾಯಿಸಿದ್ದೆ ಈ ದುರ್ಘಟನೆ ಕಾರಣ ಎಂದು ತಿಳಿದುಬಂದಿದೆ. ಈ ಸಂಬಂಧ ಮಲೇಬೆನ್ನೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಗಿನ ಅರ್ಪಿಸಲು ನದಿಗೆ ಇಳಿದ ಮಹಿಳೆ ನೀರು ಪಾಲು

ಸತತ ಮಳೆಯಿಂದ ತುಂಬಿ ಹರಿಯುತ್ತಿರುವ ಕೃಷ್ಣ ನದಿಗೆ ಬಾಗಿಲ ಅರ್ಪಿಸಲು ಹೋಗಿದ್ದ ಮಹಿಳೆ ಕೊಚ್ಚಿಕೊಂಡು ಹೋಗಿದ್ದಾಳೆ. ಈ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಅಂಕಲಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ್ದಿದ್ದು, ಮಾಂಜರಿ ಗ್ರಾಮದ ಸಂಗೀತಾ ಮಾಂಜರೇಕರ್(40) ನೀರುಪಾಲಾಗಿದ್ದ ಮಹಿಳೆ. ಜೂನ್ 17ರಂದೇ ಕೊಚ್ಚಿಕೊಂಡು ಹೋಗಿದ್ದು ಇದುವರೆಗೂ ಶವ ಸಿಕ್ಕಿಲ್ಲ. ಹೀಗಾಗಿ ನಾಲ್ಕನೇ ದಿನವೂ ಮಹಿಳೆಗಾಗಿ ಶೋಧ ಕಾರ್ಯ ಮುಂದುವರೆದಿದೆ. ಕೃಷ್ಣಾ ನದಿಯಲ್ಲಿ 6 ಕಿಮೀ ದೂರದ ವರೆಗೂ ಎಸ್‌ಡಿಆರ್‌ಎಫ್ ಸಿಬ್ಬಂದಿಯಿಂದ ಶೋಧ ಕಾರ್ಯಾ ನಡೆಸಿದರೂ ಸಹ ಸಿಕ್ಕಿಲ್ಲ.

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ