AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಬೈಕ್​ನಲ್ಲಿ ಹಳ್ಳ ದಾಟುವಾಗ ನೀರಲ್ಲಿ ಕೊಚ್ಚಿಹೋದ ಯುವಕ!

ಹಳ್ಳದ ನೀರಿನ ರಭಸಕ್ಕೆ ಕುಳಗಟ್ಟ ಗ್ರಾಮದ ಯುವಕ ಶಿವರಾಜ್ ಕೊಚ್ಚಿ ಹೋಗಿದ್ದಾರೆ. ಕತ್ತಲು ಆವರಿಸಿದ ಹಿನ್ನೆಲೆ ಶೋಧ ಕಾರ್ಯದಲ್ಲಿ ವಿಳಂಬವಾಗಿದೆ.

ದಾವಣಗೆರೆ: ಬೈಕ್​ನಲ್ಲಿ ಹಳ್ಳ ದಾಟುವಾಗ ನೀರಲ್ಲಿ ಕೊಚ್ಚಿಹೋದ ಯುವಕ!
ಯುವಕ ಕೊಚ್ಚಿ ಹೋದ ಹಳ್ಳ
TV9 Web
| Edited By: |

Updated on: Oct 28, 2021 | 9:15 AM

Share

ದಾವಣಗೆರೆ: ಬೈಕ್ನಲ್ಲಿ ಹಳ್ಳ ದಾಟುತ್ತಿದ್ದಾಗ ಯುವಕನೊಬ್ಬ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಈ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಚಿರಡೋಣಿ-ದೊಡ್ಡಘಟ್ಟದ ಮಧ್ಯೆ ಇರುವ ಹಳ್ಳದಲ್ಲಿ ನಡೆದಿದೆ. ಸಿ ಶಿವರಾಜ್ ಎಂಬುವವರು ನೀರುಪಾಲಾದ ಯುವಕ. ಯುವಕನ ಮೃತದೇಹಕ್ಕಾಗಿ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರಿಂದ ಶೋಧಕಾರ್ಯ ನಡೆಯುತ್ತಿದೆ. ಬಸವಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಹಳ್ಳ ಸೂಳೆಕೆರೆಗೆ ಕೊಡಿ ಬಿದ್ದು ತುಂಬಿ ಹರಿಯುತ್ತಿದೆ. ಹಳ್ಳದ ನೀರಿನ ರಭಸಕ್ಕೆ ಕುಳಗಟ್ಟ ಗ್ರಾಮದ ಯುವಕ ಶಿವರಾಜ್ ಕೊಚ್ಚಿ ಹೋಗಿದ್ದಾರೆ. ಕತ್ತಲು ಆವರಿಸಿದ ಹಿನ್ನೆಲೆ ಶೋಧ ಕಾರ್ಯದಲ್ಲಿ ವಿಳಂಬವಾಗಿದೆ.

ಕೆಆರ್​ಎಸ್​ ಜಲಾಶಯ ಭರ್ತಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್​ ಜಲಾಶಯ ಭರ್ತಿಯಾಗಿದೆ. 11 ವರ್ಷಗಳ ನಂತರ ಅಕ್ಟೋಬರ್​ನಲ್ಲಿ ಡ್ಯಾಂ ಭರ್ತಿಯಾಗಿದೆ. 2010ರಲ್ಲಿ ಅಕ್ಟೋಬರ್​ನಲ್ಲಿ ಕೆಆರ್​ಎಸ್​ ಡ್ಯಾಂ ಭರ್ತಿಯಾಗಿತ್ತು. ನ.2ರಂದು ಸಿಎಂ ಬಸವರಾಜ ಬೊಮ್ಮಾಯಿ ಬಾಗಿನ ಅರ್ಪಿಸಿದ್ದರು. ಕೆಆರ್​ಎಸ್​ ಜಲಾಶಯದ ಇಂದಿನ ಮಟ್ಟ 124.50 ಅಡಿಯಿದೆ. ಜಲಾಶಯದ ಗರಿಷ್ಠ ಮಟ್ಟ 124.80 ಅಡಿ, ಒಳ ಹರಿವು 11,345 ಕ್ಯೂಸೆಕ್, ಹೊರಹರಿವು 3661 ಕ್ಯೂಸೆಕ್ ಇದೆ.

ಶಾರ್ಟ್ಸರ್ಕ್ಯೂಟ್​ನಿಂದ ಹಸು, ಎಮ್ಮೆ ಸಾವು ಶಾರ್ಟ್​ಸರ್ಕೂಟ್​ನಿಂದ ಕೊಟ್ಟಿಗೆಯಲ್ಲೇ ಹಸು ಮತ್ತು ಎಮ್ಮೆ ಮೃತಪಟ್ಟಿವೆ. ಚನ್ನಗಿರಿ ತಾಲೂಕಿನ ನವಲೇಹಾಳು ಗ್ರಾಮದ ಮಂಜುನಾಥ್ಗೆ ಸೇರಿದ ಜಾನುವಾರು ಸಾವನ್ನಪ್ಪಿವೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿದ್ಯುತ್ ಪ್ರವಹಿಸಿ ಅವಘಡ ಸಂಭವಿಸಿದೆ. 1 ಲಕ್ಷ 40 ಸಾವಿರ ಬೆಲೆಯ 2 ಜರ್ಸಿ ಆಕಳು, 10 ಸಾವಿರ 1 ಕರು 50 ಸಾವಿರದ 1 ಎಮ್ಮೆ ಸಾವನ್ನಪ್ಪಿವೆ. ಜಾನುವಾರಗಳ ಸಾವಿಗೆ ಮಾಲೀಕ ಮಂಜುನಾಥ್ ಕುಟುಂಬ ಕಣ್ಣೀರು ಹಾಕಿದೆ.

ಇದನ್ನೂ ಓದಿ

ರೈಲ್ವೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚಿಸಿದ್ದ ಇಬ್ಬರು ಆರೋಪಿಗಳು ಅರೆಸ್ಟ್!

ಭಾರತದಲ್ಲಿ ಟ್ಯಾಬ್ಲೆಟ್ ಪೋರ್ಟ್​ಫೋಲಿಯೋ ಹೆಚ್ಚಿಸಿಕೊಳ್ಳುತ್ತಿರುವ ಲೆನೊವೊ ಹೊಸ ಟ್ಯಾಬ್ ಕೆ10 ಲಾಂಚ್ ಮಾಡಿದೆ

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ