AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ಕೊಚ್ಚಿ ಹೋದ ಯುವಕ, 24 ಗಂಟೆ ಕಳೆದರೂ ಪತ್ತೆಯಾಗದ ಶವ

ಭಾರಿ ಮಳೆಗೆ ತುಂಬಿ ಹರಿಯುತ್ತಿರುವ ಹಳ್ಳವನ್ನು ದಾಟಲು ಮುಂದಾಗಿದ್ದ ಯುವಕ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದಾನೆ. ಕಳೆದ 24 ಗಂಟೆಗಳಿಂದ ಹಳ್ಳಕ್ಕೆ ಬಲೆ ಹಾಕಿ ಶವಕ್ಕೆ ಸಂಬಂಧಿಕರು ಹುಡುಕಾಟ ನಡೆಸುತ್ತಿದ್ದಾರೆ.

ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ಕೊಚ್ಚಿ ಹೋದ ಯುವಕ, 24 ಗಂಟೆ ಕಳೆದರೂ ಪತ್ತೆಯಾಗದ ಶವ
ಶಿವರಾಜ್ ನೀರು ಪಾಲದ ಯುವಕ
TV9 Web
| Edited By: ಆಯೇಷಾ ಬಾನು|

Updated on: Oct 29, 2021 | 7:35 AM

Share

ದಾವಣಗೆರೆ: ಜಿಲ್ಲೆಯಲ್ಲಾದ ಭಾರಿ ಮಳೆಗೆ ಚಿರಡೋಣಿ ಹಾಗೂ ದೊಡ್ಡಘಟ್ಟ ಗ್ರಾಮಗಳ ನಡುವಿನ ಹಳ್ಳ ತುಂಬಿ ಹರಿಯುತ್ತಿದೆ. ಈ ಹಳ್ಳದಾಟಲು ಹೋಗಿ ಯುವಕ ಕೊಚ್ಚಿ ಹೋದ ಘಟನೆ ದಾವಣಗೆರೆಯಲ್ಲಿ ಸಂಭವಿಸಿದೆ. ಶಿವರಾಜ್ (23) ನೀರು ಪಾಲದ ಯುವಕ. ಘಟನೆ ಸಂಭವಿಸಿ 24 ಗಂಟೆ ಕಳೆದರೂ ಯುವಕನ ಶವ ಪತ್ತೆಯಾಗಿಲ್ಲ.

ಭಾರಿ ಮಳೆಗೆ ತುಂಬಿ ಹರಿಯುತ್ತಿರುವ ಹಳ್ಳವನ್ನು ದಾಟಲು ಮುಂದಾಗಿದ್ದ ಯುವಕ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದಾನೆ. ಕಳೆದ 24 ಗಂಟೆಗಳಿಂದ ಹಳ್ಳಕ್ಕೆ ಬಲೆ ಹಾಕಿ ಶವಕ್ಕೆ ಸಂಬಂಧಿಕರು ಹುಡುಕಾಟ ನಡೆಸುತ್ತಿದ್ದಾರೆ. ಸದ್ಯ ಆಗ್ನಿ ಶಾಮಕ ದಳ ಹಾಗೂ ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿದ್ದು ಶವಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾಠ ಕೇಳಲು ಹೋದ ಮಕ್ಕಳಿಗೆ ಜೀವಭಯ ವಾರದ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಭಾರಿ ಮಳೆಯಾಗಿದೆ. ಜಿಲ್ಲೆಯ ಇತಿಹಾಸದಲ್ಲೇ ಈ ಬಾರಿ ಕಂಡು ಕೇಳರಿಯದ ಮಳೆ ಸುರಿದಿದೆ. ಇದ್ರಿಂದ ಜಿಲ್ಲೆಯ ಬಹುತೇಕ ಶಾಲಾ ಕಾಲೇಜುಗಳ ಕಟ್ಟಡಗಳಿಗೆ ಹಾನಿಯಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಮಾಹಿತಿ ಪ್ರಕಾರ, ಜಿಲ್ಲೆಯಾದ್ಯಂತ 300ಕ್ಕೂ ಹೆಚ್ಚು ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಕಟ್ಟಡಗಳಿದ್ದು, ಈ ಪೈಕಿ 562 ಕೊಠಡಿಗಳು ಮಳೆಯಿಂದ ಹಾನಿಯಾಗಿ ಬೀಳುವ ಹಂತದಲ್ಲಿವೆ. ಇಂಥಾ ಕಟ್ಟಡಗಳಲ್ಲೇ ಮಕ್ಕಳು ಪಾಠ ಕೇಳುವಂತಾಗಿದೆ.

ಇನ್ನು, ಶಿಕ್ಷಣ ಇಲಾಖೆ ಮಾಹಿತಿ ಆಧಾರದ ಮೇಲೆ ಟಿವಿ9 ಟೀಂ, ಕುಪ್ಪಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡ್ತು. ಅಲ್ಲಿನ ವಾಸ್ತವ ಚಿತ್ರಣ ವೀಕ್ಷಿಸಿದಾಗ, ಕೆಲವು ಕೊಠಡಿಗಳಿಂದ ನೀರು ಜಿನುಗುತ್ತಿತ್ತು. ಮತ್ತೆ ಕೆಲವು ಗೋಡೆಗಳು ಬಿರುಕು ಬಿಟ್ಟಿವೆ. ಇನ್ನೂ ಕೆಲವು ಶಾಲೆಗಳ ಮೇಲ್ಚಾವಣಿ ಕುಸಿದು ಬೀಳ್ತಿದೆ. ಹೀಗಾಗಿ, 562 ಶಾಲಾ ಕೊಠಡಿಗಳಲ್ಲಿ ವಿದ್ಯಾರ್ಥಿಗಳಿಗೆ ಪಾಠ ನಿಲ್ಲಿಸಿ ಪರ್ಯಾಯ ಕೊಠಡಿಗಳ ವ್ಯವಸ್ಥೆ ಮಾಡ್ಲಾಗಿದೆ. ಸದ್ಯಕ್ಕೆ ವಿದ್ಯಾರ್ಥಿಗಳು ಕಡಿಮೆ ಸಂಖ್ಯೆಯಲ್ಲಿ ಶಾಲೆಗೆ ಬರ್ತಿದ್ದಾರೆ. ಸ್ಟೂಡೆಂಟ್ಸ್ ಸಂಖ್ಯೆಯಲ್ಲಿ ಹೆಚ್ಚಳವಾದ್ರೆ, ಪಾಠಕ್ಕೆ ತೊಂದ್ರೆ ಆಗಲಿದೆ. ಹೀಗಾಗಿ, ಶಾಲೆಗಳ ದುರಸ್ಥಿತಿಗೆ 7 ಕೋಟಿ ಅನುದಾನ ನೀಡುವಂತೆ ಶಿಕ್ಷಣ ಇಲಾಖೆ ಸರ್ಕಾರಕ್ಕೆ ಮನವಿ ಮಾಡಿದೆ.

ಇದನ್ನೂ ಓದಿ: ನರಕ ಚತುರ್ದಶಿ ದಿನ ಹನುಮ ಜಯಂತಿ: ಭಕ್ತರು ವಿಶೇಷವಾಗಿ ವಾಯುಪುತ್ರನನ್ನು ಆರಾಧಿಸಿದರೆ ಸಂಕಷ್ಟಗಳೆಲ್ಲ ದೂರ

Follow Us
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು