AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ಕೊಚ್ಚಿ ಹೋದ ಯುವಕ, 24 ಗಂಟೆ ಕಳೆದರೂ ಪತ್ತೆಯಾಗದ ಶವ

ಭಾರಿ ಮಳೆಗೆ ತುಂಬಿ ಹರಿಯುತ್ತಿರುವ ಹಳ್ಳವನ್ನು ದಾಟಲು ಮುಂದಾಗಿದ್ದ ಯುವಕ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದಾನೆ. ಕಳೆದ 24 ಗಂಟೆಗಳಿಂದ ಹಳ್ಳಕ್ಕೆ ಬಲೆ ಹಾಕಿ ಶವಕ್ಕೆ ಸಂಬಂಧಿಕರು ಹುಡುಕಾಟ ನಡೆಸುತ್ತಿದ್ದಾರೆ.

ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ಕೊಚ್ಚಿ ಹೋದ ಯುವಕ, 24 ಗಂಟೆ ಕಳೆದರೂ ಪತ್ತೆಯಾಗದ ಶವ
ಶಿವರಾಜ್ ನೀರು ಪಾಲದ ಯುವಕ
TV9 Web
| Edited By: |

Updated on: Oct 29, 2021 | 7:35 AM

Share

ದಾವಣಗೆರೆ: ಜಿಲ್ಲೆಯಲ್ಲಾದ ಭಾರಿ ಮಳೆಗೆ ಚಿರಡೋಣಿ ಹಾಗೂ ದೊಡ್ಡಘಟ್ಟ ಗ್ರಾಮಗಳ ನಡುವಿನ ಹಳ್ಳ ತುಂಬಿ ಹರಿಯುತ್ತಿದೆ. ಈ ಹಳ್ಳದಾಟಲು ಹೋಗಿ ಯುವಕ ಕೊಚ್ಚಿ ಹೋದ ಘಟನೆ ದಾವಣಗೆರೆಯಲ್ಲಿ ಸಂಭವಿಸಿದೆ. ಶಿವರಾಜ್ (23) ನೀರು ಪಾಲದ ಯುವಕ. ಘಟನೆ ಸಂಭವಿಸಿ 24 ಗಂಟೆ ಕಳೆದರೂ ಯುವಕನ ಶವ ಪತ್ತೆಯಾಗಿಲ್ಲ.

ಭಾರಿ ಮಳೆಗೆ ತುಂಬಿ ಹರಿಯುತ್ತಿರುವ ಹಳ್ಳವನ್ನು ದಾಟಲು ಮುಂದಾಗಿದ್ದ ಯುವಕ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದಾನೆ. ಕಳೆದ 24 ಗಂಟೆಗಳಿಂದ ಹಳ್ಳಕ್ಕೆ ಬಲೆ ಹಾಕಿ ಶವಕ್ಕೆ ಸಂಬಂಧಿಕರು ಹುಡುಕಾಟ ನಡೆಸುತ್ತಿದ್ದಾರೆ. ಸದ್ಯ ಆಗ್ನಿ ಶಾಮಕ ದಳ ಹಾಗೂ ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿದ್ದು ಶವಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾಠ ಕೇಳಲು ಹೋದ ಮಕ್ಕಳಿಗೆ ಜೀವಭಯ ವಾರದ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಭಾರಿ ಮಳೆಯಾಗಿದೆ. ಜಿಲ್ಲೆಯ ಇತಿಹಾಸದಲ್ಲೇ ಈ ಬಾರಿ ಕಂಡು ಕೇಳರಿಯದ ಮಳೆ ಸುರಿದಿದೆ. ಇದ್ರಿಂದ ಜಿಲ್ಲೆಯ ಬಹುತೇಕ ಶಾಲಾ ಕಾಲೇಜುಗಳ ಕಟ್ಟಡಗಳಿಗೆ ಹಾನಿಯಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಮಾಹಿತಿ ಪ್ರಕಾರ, ಜಿಲ್ಲೆಯಾದ್ಯಂತ 300ಕ್ಕೂ ಹೆಚ್ಚು ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಕಟ್ಟಡಗಳಿದ್ದು, ಈ ಪೈಕಿ 562 ಕೊಠಡಿಗಳು ಮಳೆಯಿಂದ ಹಾನಿಯಾಗಿ ಬೀಳುವ ಹಂತದಲ್ಲಿವೆ. ಇಂಥಾ ಕಟ್ಟಡಗಳಲ್ಲೇ ಮಕ್ಕಳು ಪಾಠ ಕೇಳುವಂತಾಗಿದೆ.

ಇನ್ನು, ಶಿಕ್ಷಣ ಇಲಾಖೆ ಮಾಹಿತಿ ಆಧಾರದ ಮೇಲೆ ಟಿವಿ9 ಟೀಂ, ಕುಪ್ಪಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡ್ತು. ಅಲ್ಲಿನ ವಾಸ್ತವ ಚಿತ್ರಣ ವೀಕ್ಷಿಸಿದಾಗ, ಕೆಲವು ಕೊಠಡಿಗಳಿಂದ ನೀರು ಜಿನುಗುತ್ತಿತ್ತು. ಮತ್ತೆ ಕೆಲವು ಗೋಡೆಗಳು ಬಿರುಕು ಬಿಟ್ಟಿವೆ. ಇನ್ನೂ ಕೆಲವು ಶಾಲೆಗಳ ಮೇಲ್ಚಾವಣಿ ಕುಸಿದು ಬೀಳ್ತಿದೆ. ಹೀಗಾಗಿ, 562 ಶಾಲಾ ಕೊಠಡಿಗಳಲ್ಲಿ ವಿದ್ಯಾರ್ಥಿಗಳಿಗೆ ಪಾಠ ನಿಲ್ಲಿಸಿ ಪರ್ಯಾಯ ಕೊಠಡಿಗಳ ವ್ಯವಸ್ಥೆ ಮಾಡ್ಲಾಗಿದೆ. ಸದ್ಯಕ್ಕೆ ವಿದ್ಯಾರ್ಥಿಗಳು ಕಡಿಮೆ ಸಂಖ್ಯೆಯಲ್ಲಿ ಶಾಲೆಗೆ ಬರ್ತಿದ್ದಾರೆ. ಸ್ಟೂಡೆಂಟ್ಸ್ ಸಂಖ್ಯೆಯಲ್ಲಿ ಹೆಚ್ಚಳವಾದ್ರೆ, ಪಾಠಕ್ಕೆ ತೊಂದ್ರೆ ಆಗಲಿದೆ. ಹೀಗಾಗಿ, ಶಾಲೆಗಳ ದುರಸ್ಥಿತಿಗೆ 7 ಕೋಟಿ ಅನುದಾನ ನೀಡುವಂತೆ ಶಿಕ್ಷಣ ಇಲಾಖೆ ಸರ್ಕಾರಕ್ಕೆ ಮನವಿ ಮಾಡಿದೆ.

ಇದನ್ನೂ ಓದಿ: ನರಕ ಚತುರ್ದಶಿ ದಿನ ಹನುಮ ಜಯಂತಿ: ಭಕ್ತರು ವಿಶೇಷವಾಗಿ ವಾಯುಪುತ್ರನನ್ನು ಆರಾಧಿಸಿದರೆ ಸಂಕಷ್ಟಗಳೆಲ್ಲ ದೂರ

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ