AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಕ್ಕಾಲು ಎಕರೆ ಭೂಮಿಯಲ್ಲಿ ಡ್ರ್ಯಾಗನ್ ಫ್ರೂಟ್ ಬೆಳೆದು ಆದಾಯ ಗಳಿಸಿದ ರೈತ; ಬಿಬಿಎಂ ಪದವೀಧರನ ಕೃಷಿ ಒಲವು

ಮೊದಲ ವರ್ಷ ಮಾರಾಟ ಮಾಡುವಷ್ಟು ಬೆಳೆ ಬಂದಿರಲಿಲ್ಲ. ಆದರೆ ಎರಡನೇ ವರ್ಷದಿಂದ ಉತ್ತಮ ಬೆಳೆ ಬರಲು ಶುರುವಾಗಿದೆ. ಮೊದಲು ಒಂದು ಗಿಡಕ್ಕೆ 10 ಕೆಜಿಯಂತೆ ಫಲ ಸಿಗುತ್ತದೆ. ಆ ನಂತರದ ವರ್ಷದಿಂದ ಪ್ರತಿ ಗಿಡ ಮೂರು ಪಟ್ಟು ಅಂದರೆ ಒಂದು ಗಿಡಕ್ಕೆ 30 ಕೆಜಿಯಂತೆ ಫಲ ಬರತೊಡಗುತ್ತದೆ.

ಮುಕ್ಕಾಲು ಎಕರೆ ಭೂಮಿಯಲ್ಲಿ ಡ್ರ್ಯಾಗನ್ ಫ್ರೂಟ್ ಬೆಳೆದು ಆದಾಯ ಗಳಿಸಿದ ರೈತ; ಬಿಬಿಎಂ ಪದವೀಧರನ ಕೃಷಿ ಒಲವು
ಡ್ರ್ಯಾಗನ್ ಫ್ರೂಟ್
Follow us
TV9 Web
| Updated By: preethi shettigar

Updated on: Jul 10, 2021 | 12:41 PM

ದಾವಣಗೆರೆ: ಕಷ್ಟಗಳಿವೆ ಎಂದು ಕೈ ಕಟ್ಟಿ ಕುಳಿತುಕೊಂಡರೆ ಏನು ಮಾಡಲು ಸಾಧ್ಯವಿಲ್ಲ. ದಿಟ್ಟ ನಿರ್ಧಾರದಿಂದ ಒಂದಿಲ್ಲೊಂದು ಪ್ರಯೋಗ ಮಾಡುತ್ತಲೇ ಇರಬೇಕು. ಆಗ ಮಾತ್ರ ಜಯ ಗಳಿಸಲು ಸಾಧ್ಯ ಎಂಬ ಮಾತಿದೆ. ಈ ಮಾತಿಗೆ ನಿದರ್ಶನ ಎನ್ನುವಂತೆ ಕೇವಲ ಮುಕ್ಕಾಲು ಎಕರೆ ಜಮೀನಲ್ಲಿ ಅಪರೂಪದ ಬೆಳೆ ಬೆಳೆದು ಬಿಬಿಎಂ ಓದಿದ ಯುವ ರೈತರೊಬ್ಬರು ಸಾಧನೆ ಮಾಡಿದ್ದಾರೆ. ಮೂರು ಲಕ್ಷ ರೂಪಾಯಿ ಬಂಡವಾಳ ಹಾಕಿ, 10 ರಿಂದ 15 ಲಕ್ಷ ಆದಾಯ ಗಳಿಸಿದ್ದು, ಖಾಸಗಿ ಕಂಪನಿಗಳ ಕಚೇರಿಗೆ ಉದ್ಯೋಗಕ್ಕಾಗಿ ಅಲೆದಾಡುವ ಯುವಕರಿಗೆ ಮಾದರಿಯಾಗಿ ನಿಂತಿದ್ದಾರೆ.

ದಾವಣಗೆರೆ ತಾಲೂಕಿನ ಸಿದ್ದನೂರು ಗ್ರಾಮದ ರೈತ ಮಲ್ಲಿಕಾರ್ಜುನ ಕೃಷಿ ಎಂದರೆ ನಷ್ಟ ಎಂಬ ಮಾತನ್ನು ಸುಳ್ಳು ಮಾಡಿದ್ದಾರೆ. ಗುಡ್ಡದಂತಿರುವ ತಮ್ಮ ಮುಕ್ಕಾಲು ಎಕರೆ ಜಮೀನಿನಲ್ಲಿ ಡ್ರ್ಯಾಗನ್​ ಫ್ರೂಟ್ ಬೆಳೆದಿದ್ದಾರೆ. ಈ ಹಣ್ಣು ತಿಂದರೆ ಒಂದು ರೀತಿಯಲ್ಲಿ ಐಸ್​ಕ್ರೀಂ ತಿಂದಂತಾಗುತ್ತದೆ ಮತ್ತು ಅಷ್ಟೇ ರುಚಿ ಕೂಡ. ಸದ್ಯ ಬೆಂಗಳೂರು, ಮುಂಬಯಿ ಸೇರಿದಂತೆ ದೇಶದ ವಿವಿಧ ಭಾಗಗಳಿಗೆ ಈ ರೈತ ಬೆಳೆದ ಹಣ್ಣುಗಳು ಮಾರಾಟ ಆಗುತ್ತದೆ. 2018 ಡಿಸೆಂಬರ್‌ನಲ್ಲಿ ಮಲ್ಲಿಕಾರ್ಜುನ ಈ ಹಣ್ಣಿನ ಗಿಡ ಹಾಕಿದ್ದಾರೆ. ಗಿಡ ನೆಟ್ಟಗೆ ನಿಂತು ಹರಡಿಕೊಳ್ಳಲು ಕಲ್ಲಿನ ಕಂಬ ಹಾಕಿ ಅದರ ಮೇಲೆ ಟೈರ್‌ ಅಳವಡಿಸಿದ್ದಾರೆ. ಅದಕ್ಕೆ ಕ್ಲಾಂಪಿಂಗ್‌, ನೀರಿನ ವ್ಯವಸ್ಥೆ ಮಾಡಿದ್ದಾರೆ. ಒಂದು ಗಿಡಕ್ಕೆ 600ಕ್ಕೂ ಅಧಿಕ ವೆಚ್ಚ ಮಾಡಿದ್ದು, ಎಕರೆಗೆ 380 ಗಿಡಗಳು ಕೂತುಕೊಳ್ಳುತ್ತವೆ. ಹೀಗಾಗಿ ಎಕರೆಗೆ ಸುಮಾರು 2.80 ಲಕ್ಷ ವೆಚ್ಚವಾಗಿದೆ.

ಡ್ರ್ಯಾಗನ್​ ಫ್ರೂಟ್ ಕ್ಯಾಕ್ಟಸ್‌ಗೆ ಸೇರಿದ ಗಿಡವಾಗಿರುವುದರಿಂದ ಒಮ್ಮೆ ನೆಟ್ಟರೆ ಸಾಯುವುದಿಲ್ಲ. ಗಿಡ ನೆಡುವಾಗ ಮಾತ್ರ ಹೆಚ್ಚು ಖರ್ಚಾಗುತ್ತದೆ. ಬಳಿಕ ಪ್ರತಿ ವರ್ಷ ಎಕರೆಗೆ ಹೆಚ್ಚೆಂದರೆ 15 ಸಾವಿರ ವೆಚ್ಚವಾಗಬಹುದು. ನಿರಂತರ 20 ವರ್ಷ ಈ ಹಣ್ಣಿನಿಂದ ಆದಾಯ ಬರುತ್ತದೆ. ಬಳಿಕವೂ ಗಿಡ ಇರುತ್ತದೆ. ಆದರೆ ಹಣ್ಣು ಬಿಡುವುದು ಕಡಿಮೆಯಾಗುತ್ತದೆ. ಇಂತಹ ಅಪರೂಪದ ಬೆಳೆ ಬೆಳೆಯಲು ಮಲ್ಲಿಕಾರ್ಜುನ ಅವರಿಗೆ ಸಲಹೆ ನೀಡಿದ್ದು, ಡಾ. ಸುನಿಲ್. ಈ ಹಿಂದೆ ದಾಳಿಂಬೆ ಬೆಳೆಯುವ ಸಮಯದಲ್ಲಿ ಸಲಹೆ ನೀಡಲು ಬರುತ್ತಿದ್ದ ಡಾ. ಸುನಿಲ್‌ ಅವರು ಡ್ರ್ಯಾಗನ್‌ ಫ್ರೂಟ್ಸ್‌ ಬೆಳೆಯಲು ಮಲ್ಲಿಕಾರ್ಜುನಾ ಅವರಿಗೆ ಸಲಹೆ ನೀಡಿದರು. ಬಳಿಕ ಆನಗೋಡು ಹೋಬಳಿಯ ಸಹಾಯಕ ತೋಟಗಾರಿಕಾ ಅಧಿಕಾರಿ ರವಿ ಪ್ರೋತ್ಸಾಹ ನೀಡಿದರು. ಮೇಲಾಗಿ ಈ ಬೆಳೆಯ ಬಗ್ಗೆ ಯುಟ್ಯೂಬ್​ನಲ್ಲಿ ನೋಡಿದ್ದ ಮಲ್ಲಿಕಾರ್ಜುನ್ ಗಿಡ ನೆಟ್ಟು 8 ತಿಂಗಳಿಗೆ ಮೊದಲ ಬೆಳೆ ಬಂದಿದೆ.

dragon fruit

ಮುಕ್ಕಾಲು ಎಕರೆ ಭೂಮಿಯಲ್ಲಿ ಡ್ರ್ಯಾಗನ್ ಫ್ರೂಟ್

ಮೊದಲ ವರ್ಷ ಮಾರಾಟ ಮಾಡುವಷ್ಟು ಬೆಳೆ ಬಂದಿರಲಿಲ್ಲ. ಆದರೆ ಎರಡನೇ ವರ್ಷದಿಂದ ಉತ್ತಮ ಬೆಳೆ ಬರಲು ಶುರುವಾಗಿದೆ. ಮೊದಲು ಒಂದು ಗಿಡಕ್ಕೆ 10 ಕೆಜಿಯಂತೆ ಫಲ ಸಿಗುತ್ತದೆ. ಆ ನಂತರದ ವರ್ಷದಿಂದ ಪ್ರತಿ ಗಿಡ ಮೂರು ಪಟ್ಟು ಅಂದರೆ ಒಂದು ಗಿಡಕ್ಕೆ 30 ಕೆಜಿಯಂತೆ ಫಲ ಬರತೊಡಗುತ್ತದೆ. ಕೆಜಿಗೆ ನೂರರಿಂದ ಇನ್ನೂರು ವರೆಗೆ ದರ ಸಿಗುತ್ತದೆ. ಮುಕ್ಕಾಲು ಎಕರೆ ಪ್ರದೇಶದಲ್ಲಿ ವರ್ಷಕ್ಕೆ ಹತ್ತರಿಂದ 15 ಲಕ್ಷ ಆದಾಯ ಖಚಿತ. ಮಲ್ಲಿಕಾರ್ಜುನಾ ಅವರನ್ನು ನೋಡಿ ಗ್ರಾಮದಲ್ಲಿ ಇನ್ನಷ್ಟು ರೈತರು ಈ ಹಣ್ಣು ಬೆಳೆಯಲು ಮುಂದಾಗಿದ್ದಾರೆ.

ನಾನು ಈ ಕೃಷಿಗೆ ಮಾಡಿದ ವೆಚ್ಚ ಮೊದಲ ವರ್ಷ ಮಾತ್ರ. ನಂತರ 20 ವರ್ಷದ ವರೆಗೆ ಆದಾಯ ನಿರಂತರವಾಗಿರುತ್ತದೆ. ಇದಕ್ಕೆ ಹೆಚ್ಚು ನೀರು ಬೇಕಾಗಿಲ್ಲ. ಸ್ವಲ್ಪ ನೀರು ಕೊಟ್ಟರೇ ಸಾಕು ಬದುಕುತ್ತದೆ. ನೀರು ಇಲ್ಲಾ ಅಂದರೆ ಸತ್ತು ಹೋಗಲ್ಲ. ಬೇಸಿಗೆ ಕಾಲದಲ್ಲಿ ಒಂದು ಗಿಡಕ್ಕೆ ವಾರಕ್ಕೆ 10 ಲೀಟರ್‌ ನೀರು ಸಾಕಾಗುತ್ತದೆ. ಮೇ ತಿಂಗಳಿನಿಂದ ಸೆಪ್ಟೆಂಬರ್‌ ವರೆಗೆ ಬೆಳೆ ಬರುತ್ತದೆ. ಒಮ್ಮೆ ನೆಡುವುದು ಕಷ್ಟದ ಕೆಲಸ. ಬಳಿಕ ನಿರ್ವಹಣೆ ಸುಲಭ. ಮಹಾರಾಷ್ಟ್ರದ ಸಾಂಗ್ಲಿಯಿಂದ ಈ ಗಿಡ ತಂದು ನೆಟ್ಟಿದ್ದೇನೆ ಈಗ ಯಾರಿಗೆ ಬೇಕಾದರೂ ನೀಡುವಷ್ಟು ಸಸಿಗಳನ್ನು ಹೊಂದಿದ್ದೇನೆ. ಮೆಕ್ಕೆಜೋಳ ಬೆಳೆದು ಮಳೆಗೆ ಕಾದು ಸುಸ್ತಾಗುವ ಬದಲು ಇಂತಹ ಪರ್ಯಾಯ ಬೆಳೆಗಳ ಕಡೆ ಗಮನ ಹರಿಸಬೇಕಾಗಿದೆ ಎಂದು ರೈತ ಮಲ್ಲಿಕಾರ್ಜುನ ತಿಳಿಸಿದ್ದಾರೆ.

ಇದನ್ನೂ ಓದಿ: 80 ಕಿ.ಮೀ ಪ್ರಯಾಣ ಬೆಳೆಸಿ ಮಾಡಿದ ಕೃಷಿಯಿಂದ ಲಕ್ಷಗಟ್ಟಲೆ ಆದಾಯಗಳಿಸಿದ ನಿವೃತ್ತ ಅಧಿಕಾರಿ

ಜಿಂಕೆಗಳ ಕಾಟಕ್ಕೆ ಹೊಲದಲ್ಲಿದ್ದ ಬೆಳೆ ನಾಶ; ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೀದರ್​ ರೈತರ ಆಕ್ರೋಶ

ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್