AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಅಮಲು ಬರುವ ಸಿರಪ್​ನ ಅಕ್ರಮ ಮಾರಾಟ; ಐವರ ಬಂಧನ

ರಾಜ್ಯದಲ್ಲಿ ಮಾರಕ ಕಫ್ ಸಿರಪ್​ನಿಂದಾದ ಮಕ್ಕಳ ಸರಣಿ ಸಾವು ಬೆನ್ನಲ್ಲೇ ಮತ್ತೊಮ್ಮೆ ಅಕ್ರಮ ಸಿರಪ್ ಮಾರಾಟದ ಪ್ರಕರಣ ಕಂಡು ಬಂದಿದೆ. ದಾವಣಗೆರೆಯಲ್ಲಿ ವ್ಯಸನಿಗಳಿಗೆ ಮತ್ತು ಯುವಕರಿಕೆ ಅಮಲು ಬರುವ ಸಿರಪ್​ ಮಾರಾಟ ಮಾಡಲಾಗುತ್ತಿತ್ತು. ಈಗ ಈ ಅಕ್ರಮ ದಂಧೆಗೆ ತೆರೆ ಬಿದ್ದಿದೆ. ಬಸವನಗರದ ಪೊಲೀಸರು ಐವರು ಆರೋಪಿಗಳನ್ನು ವಶಪಡಿಸಿಕೊಂಡಿದ್ದು, 1.24 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಸೀಜ್ ಮಾಡಲಾಗಿದೆ.

ದಾವಣಗೆರೆ: ಅಮಲು ಬರುವ ಸಿರಪ್​ನ ಅಕ್ರಮ ಮಾರಾಟ; ಐವರ ಬಂಧನ
ದಾವಣಗೆರೆಯಲ್ಲಿ 1.24 ಲಕ್ಷ ಮೌಲ್ಯದ ಅಮಲಿನ ಸಿರಪ್ ವಶಕ್ಕೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಭಾವನಾ ಹೆಗಡೆ|

Updated on: Oct 14, 2025 | 8:49 AM

Share

ದಾವಣಗೆರೆ, ಅಕ್ಟೋಬರ್ 14: ಕೆಲ ದಿನಗಳ ಹಿಂದೆಯಷ್ಟೇ ಮಾರಕ ಕಫ್ ಸಿರಪ್ (Coldrif syrup) ಸೇವಿಸಿದ ಮಧ್ಯಪ್ರದೇಶ ಮತ್ತು ರಾಜಸ್ಥಾನದ 11 ಮಕ್ಕಳ ಸಾವು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಈ ಮಹಾಮಾರಿ ಸಿರಪ್​ ಈಗ ಬ್ಯಾನ್​ ಆಗಿದೆ. ಆದರೆ ರಾಜ್ಯದಲ್ಲಿ ಇನ್ನೊಮ್ಮೆ ಸಿರಪ್ ಗದ್ದಲ ಕೇಳಿ ಬಂದಿದೆ. ದಾವಣಗೆರೆಯಲ್ಲಿ ಅಮಲು ಬರುವ ಸಿರಫ್​ಗಳನ್ನು ಮಾರುತ್ತಿದ್ದವರು ಸಿಕ್ಕಿಬಿದ್ದಿದ್ದಾರೆ. ಈ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಬಸವನಗರ ಪೊಲೀಸರು ಬಂಧಿಸಿದ್ದು, 1.24 ಲಕ್ಷ ರೂ.ಮೌಲ್ಯದ ಸಿರಫ್  ವಶಪಡಿಸಿಕೊಂಡಿದ್ದಾರೆ.

ಅಮಲು ಬರುವ ಸಿರಪ್​ನ ಅಕ್ರಮ ಮಾರಾಟ

ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಮಕ್ಕಳ ಸಾವಿಗೆ ಕಾರಣವೆಂದು ಶಂಕಿಸಲಾಗಿರುವ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಕೋಲ್ಡ್ರಿಫ್ ಕಾಫ್ ಸಿರಪ್​​ ಅನ್ನು ಕರ್ನಾಟಕ ರಾಜ್ಯದಲ್ಲೂ ನಿಷೇಧ ಮಾಡಲಾಗಿದೆ. ಕರ್ನಾಟಕ ಫಾರ್ಮಾ ರಿಟೈಲರ್ಸ್ ಮತ್ತು ಡಿಸ್ಟ್ರಿಬ್ಯೂಟರ್ಸ್ ಸಂಸ್ಥೆ ಪತ್ರ ಬರೆಯುವ ಮೂಲಕ ರಾಜ್ಯದ ಎಲ್ಲಾ ಔಷಧಿ ಮಾರಾಟಗಾರರು ಹಾಗೂ ವಿತರಕರಿಗೆ ಮಾರಾಟ ಮಾಡದಂತೆ ಸೂಚನೆ ನೀಡಿದೆ. ಹೀಗಿರುವಾಗ ಮತ್ತೊಮ್ಮೆ ರಾಜ್ಯದಲ್ಲಿ ಅಕ್ರಮ ಸಿರಫ್ ಮಾರಾಟದ ಪ್ರಕರಣ ಬೆಳಕಿಗೆ ಬಂದಿದೆ.

ದಾವಣಗೆರೆ ನಗರದ ದೇವರಾಜ ಅರಸ್ ಬಡಾವಣೆ ಫ್ಲೈಓವರ್ ಪಕ್ಕದ ಸರ್ವೀಸ್ ರಸ್ತೆಯಲ್ಲಿ ಅಮಲು ಬರುವ ಸಿರಫ್ ಅನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿತ್ತು. ವೈದ್ಯರ ಸಲಹೆಯಿಲ್ಲದೇ, ಪ್ರಿಸ್ಕ್ರಿಪ್ಷನ್ ಇಲ್ಲದೆಯೇ ಯುವ ಸಮೂಹಕ್ಕೆ ಮತ್ತು ವ್ಯಸನಿಗಳಿಗೆ ಈ ಸಿರಫ್  ಮಾರಾಟ ಮಾಡುತ್ತಿದ್ದರು. ಈ ವೇಳೆ ದಾವಣಗೆರೆ ಎಸ್ಪಿ ಕಚೇರಿಯ ಮಾದಕ ದ್ರವ್ಯ ನಿಗ್ರಹ ಪಡೆ ಕಾರ್ಯಾಚರಣೆ ನಡೆಸಿದ್ದು, ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಬಸವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ Coldrif Syrup Ban: ಮಕ್ಕಳ ಸರಣಿ ಸಾವು; ಕರ್ನಾಟಕದಲ್ಲೂ ಕೋಲ್ಡ್ರಿಫ್ ಸಿರಪ್​​​ ನಿಷೇಧ!

1.24 ಲಕ್ಷ ಮೌಲ್ಯದ ವಸ್ತುಗಳು ಪೊಲೀಸರ ವಶಕ್ಕೆ

ದಾವಣಗೆರೆ ಎಸ್ಪಿಎಸ್ ನಗರದ ಶಿವಕುಮಾರ (38), ಮಹಬೂಬ್ ನಗರದ ಅಜಿಮುದ್ದೀನ್ (37), ದೇವರಾಜ್ ಅರಸ ಬಡಾವಣೆಯ ಮಹಮದ್ ಶಾರೀಕ್ (35), ಚನ್ನಗಿರಿ ತಾಲೂಕಿನ ಹೊನ್ನೆಬಾಗಿ ಗ್ರಾಮದ ಸೈಯದ್ ಬಾಬು ಅಲಿಯಾಸ್ ಯೂನೂಸ್ (38), ಚನ್ನಗಿರಿ ಟೌನ್ ನಿವಾಸಿ ಅಬ್ದುಲ್ ಗಫರ್ ( 48) ಇವರೆಲ್ಲರೂ ಬಂಧಿತ ಆರೋಪಿಗಳು.

ಪೊಲೀಸರು ಆರೋಪಿಗಳಿಂದ 100 ಎಂ.ಎಲ್ ನ ಒಟ್ಟು 340 ಬ್ರಾಂಕೋಫ್-ಸಿ ಕೆಮ್ಮು ಸಿರಪ್ ಬಾಟಲ್‌ಗಳು, 100 ಎಂ.ಎಲ್ ನ 15 EDEX-CT ಕೆಮ್ಮು ಸಿರಪ್ ಬಾಟಲ್‌ಗಳು, 20 ಸಣ್ಣ ಬಾಕ್ಸ್ ಗಳಲ್ಲಿರುವ ಅಸೆಕ್ಲೋಫೆನಾಕ್ ಪ್ಯಾರೆಸಿಟಮಾಲ್ ಮತ್ತು ಸೆರಾಟಿಯೊಪೆಪ್ಟಿಡೇಸ್ ಮಾತ್ರೆಗಳು, ಒಂದು ಹೊಂಡಾ ಆಕ್ಟಿವಾ ಬೈಕು ಹಾಗೂ 1200 ನಗದನ್ನು ವಶಪಡಿಸಿಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ