AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Davanagere: ಚೋರ್​​ ಮಗ ಚಂಡಾಳ್​​ ಅಪ್ಪ; ದೇಗುಲದಲ್ಲಿ ಕದ್ದು ಸಿಕ್ಕಿಬಿದ್ದ ಐನಾತಿಗಳು!

ದಾವಣಗೆರೆ ಹರಿಹರ ತಾಲೂಕಿನ ದೊಗ್ಗಳ್ಳಿ ಆಂಜನೇಯ ದೇವಾಲಯದಲ್ಲಿ ನಡೆದ ಚಿನ್ನ-ಬೆಳ್ಳಿ ಆಭರಣ ಕಳ್ಳತನ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ತಂದೆ-ಮಗ ಸೇರಿ ದೇವಸ್ಥಾನಗಳನ್ನು ಗುರಿಯಾಗಿಸಿ ಕಳ್ಳತನ ನಡೆಸುತ್ತಿದ್ದರು. ಇವರಿಗೆ ಒಬ್ಬ ಸಹಾಯಕನೂ ಇದ್ದ ಎಂಬುದು ಗೊತ್ತಾಗಿದೆ. ಹಬ್ಬ, ಜಾತ್ರೆಗಳ ನಂತರ ದೇಗುಲಗಳಲ್ಲಿ ಕದಿಯುವುದು ಅವರ ಕಾಯಕವಾಗಿತ್ತು ಎಂಬ ವಿಷಯ ತನಿಖೆ ವೇಳೆ ಬಯಲಾಗಿದೆ.

Davanagere: ಚೋರ್​​ ಮಗ ಚಂಡಾಳ್​​ ಅಪ್ಪ; ದೇಗುಲದಲ್ಲಿ ಕದ್ದು ಸಿಕ್ಕಿಬಿದ್ದ ಐನಾತಿಗಳು!
ಜಪ್ತಿ ಮಾಡಲಾದ ವಸ್ತುಗಳ ಜೊತೆ ಪೊಲೀಸರು
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Jan 18, 2026 | 8:53 AM

Share

ದಾವಣಗೆರೆ, ಜನವರಿ 18: ಹರಿಹರ ತಾಲೂಕಿನ ದೊಗ್ಗಳ್ಳಿ ಗ್ರಾಮದ ಆಂಜನೇಯ ಸ್ವಾಮೀ ದೇವಸ್ಥಾನದಲ್ಲಿ ನಡೆದಿದ್ದ ದರೋಡೆ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಆ ಪೈಕಿ ಇಬ್ಬರು ತಂದೆ ಮತ್ತು ಮಗ ಎಂಬುದು ಗೊತ್ತಾಗಿದ್ದು, ತಮಗೆ ಸಹಾಯಕನೋರ್ವನನ್ನು ಇವರು ನೇಮಿಸಿಕೊಂಡಿದ್ದರು ಎಂಬ ಮಾಹಿತಿ ವಿಚಾರಣೆ ವೇಳೆ ಬಯಲಾಗಿದೆ.

ಶನಿವಾರ ಆಂಜನೇಯ ದೇಗುಲದಲ್ಲಿ ಕೈಚಳಕ ತೋರಿಸಿದ್ದ ಆಸಾಮಿಗಳು, ರಾತ್ರಿ ವೇಳೆ ದೇವಸ್ಥಾನಕ್ಕೆ ನುಗ್ಗಿ ಹತ್ತು ಲಕ್ಷ ರೂಪಾಯಿ ಮೌಲ್ಯದ ಬೆಳ್ಳಿ ಮತ್ತು ಚಿನ್ನದ ಆಭರಣ ಎತ್ತಿಕೊಂಡು ಪರಾರಿಯಾಗಿದ್ದರು. ಘಟನೆ ಬಗ್ಗೆ ಪ್ರಕರಣ ದಾಖಲಾಗುತ್ತಿದ್ದಂತೆ ಹರಿಹರ ಗ್ರಾಮಾಂತರ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಆರೋಪಿಗಳು ತಗಲಾಕಿಕೊಂಡಿದ್ದಾರೆ. ವೀರೇಶ್​​ (64), ಶಿವಕುಮಾರ್​​ (26) ಮತ್ತು ಮಂಜುನಾಥ್ (40) ಬಂಧಿತರಾಗಿದ್ದು, ಆರೋಪಿಗಳಿಂದ 10.90 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವರು ದೇಗುಲಗಳನ್ನೇ ಟಾರ್ಗೆಟ್​​ ಮಾಡಿ ಕದಿಯುತ್ತಿದ್ದರು ಎನ್ನಲಾಗಿದ್ದು, ಮಲೇಬೆನ್ನೂರಿನ ಶ್ರೀರಾಮ ದೇವಸ್ಥಾನ ಸೇರಿದಂತೆ ಹತ್ತಾರು ದೇವಸ್ಥಾನ ಗಳಲ್ಲಿ ಕಳ್ಳತನ ಮಾಡಿದ್ದು ಪೊಲೀಸ್ ತನಿಖೆಯಿಂದ ಗೊತ್ತಾಗಿದೆ.

ಇದನ್ನೂ ಓದಿ: ಎರಡು ವರ್ಷಗಳ ಹಿಂದೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಯುವತಿ ಸಾವು

ಇನ್ನು ಆರೋಪಿಗಳು ಕಳ್ಳತನ ಮಾಡಿದ ಬೆಳ್ಳಿಯನ್ನು ಕರಗಿಸಲು ಪ್ರಯತ್ನಿಸಿದ್ದು, ಈ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಪ್ರಕರಣ ಸಂಬಂಧ ಮಂಜುನಾಥ್​​ನನ್ನು ಮೊದಲು ಲಾಕ್​​ ಮಾಡಿದ್ದ ಪೊಲೀಸರು, ಆತನನ್ನು ತಮ್ಮದೇ ಸ್ಟೈಲ್​​ನಲ್ಲಿ ವಿಚಾರಿಸಿದಾಗ ಸತ್ಯ ಬಾಯ್ಬಿಟ್ಟಿದ್ದ. ಹಬ್ಬ ಅಥವಾ ಜಾತ್ರೆಗಳ ಮರುದಿನ ದೇಗುಲಗಳಲ್ಲಿ ದರೋಡೆ ಮಾಡೋದು ಇವರ ಕಾಯಕವಾಗಿದ್ದು, ಇವರ ಪ್ರಕಾರ ದೇವಸ್ಥಾನ ಕಳ್ಳತನ ಸ್ವಲ್ಪ ಸರಳ. ಭಕ್ತರ ವೇಷದಲ್ಲಿ ಹೋದರೆ ಆಯಿತು. ಯಾವುದನ್ನೂ ಹುಡುಕುವ ಅಗತ್ಯ ಇಲ್ಲ. ಆಭರಣಗಳು ದೇವರ ಮೈಮೇಲೆಯೇ ಇದ್ದರೆ, ಹುಂಡಿಯೂ ಕಣ್ಣಿಗೆ ಕಾಣುವ ರೀತಿ ಇರುತ್ತೆ ಎಂಬುದು ಆರೋಪಿಗಳ ಲೆಕ್ಕಾಚಾರವಾಗಿತ್ತು ಎನ್ನಲಾಗಿದೆ. ಆರೋಪಿಗಳು ಮೂಲತಃ ಹರಿಹರ ತಾಲೂಕಿನ ಶಂಷಿಪುರ ಗ್ರಾಮದವರಾಗಿದ್ದು, ಹಾಲಿ ದಾವಣಗೆರೆಯಲ್ಲಿ ವಾಸವಿದ್ದರು ಎಂಬುದು ಗೊತ್ತಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Basavaraj Doddamani
Basavaraj Doddamani

ಬಸವರಾಜ ದೊಡ್ಡಮನಿ ಟಿವಿ9 ಕನ್ನಡ ವರದಿಗಾರರಾಗಿದ್ದು, ವಿಶೇಷವಾಗಿ ದಾವಣಗೆರೆ ಜಿಲ್ಲಾ ಪ್ರಾದೇಶಿಕ ಸುದ್ದಿಗಳ ಮೇಲೆ ಕೇಂದ್ರೀಕರಿಸುತ್ತಾರೆ.

Read More
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ
ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ
ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ