AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕೊರೊನಾ ಸಾವಿನಾರ್ಭಟ ಶುರು.. ದಿನದಿಂದ ದಿನಕ್ಕೆ ಏರುತ್ತಿದೆ ಸೋಂಕಿಗೆ ಬಲಿಯಾಗುವವರ ಸಂಖ್ಯೆ

Corona Death ಜನವರಿಯ ಇಡೀ ತಿಂಗಳಿನಲ್ಲಿ 66 ಜನ ಸೋಂಕಿತರು ಸಾವನ್ನಪ್ಪಿದ್ದರು. ಫೆಬ್ರವರಿ ತಿಂಗಳಲ್ಲಿ 88 ಜನ ಮೃತಪಟ್ಟಿದ್ದರು. ಹಾಗೂ ಮಾರ್ಚ್ ಇಡೀ ತಿಂಗಳಿನಲ್ಲಿ 147 ಜನ ಸೋಂಕಿತರು ಬಲಿಯಾಗಿದ್ದರು. ಆದರೆ ಏಪ್ರಿಲ್ ತಿಂಗಳ 13ಕ್ಕೆ ಅಂದ್ರೆ ಕೇವಲ 13 ದಿನದಲ್ಲಿ 280 ಜನ ಸೋಂಕಿತರು ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಕೊರೊನಾ ಸಾವಿನಾರ್ಭಟ ಶುರು.. ದಿನದಿಂದ ದಿನಕ್ಕೆ ಏರುತ್ತಿದೆ ಸೋಂಕಿಗೆ ಬಲಿಯಾಗುವವರ ಸಂಖ್ಯೆ
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
|

Updated on: Apr 14, 2021 | 7:33 AM

Share

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಆರ್ಭಟದ ನಡುವೆ ಜೀವ ಭಯ ಶುರುವಾಯಿದೆ. ಎರಡನೇ ಅಲೆಯಿಂದ ಯಾವುದೇ ಸಾವು ನೋವು ಆಗಲ್ಲವೆಂದು ಸೈಲೆಂಟ್ ಆಗಿದ್ದ ಅಧಿಕಾರಿಗಳಿಗೆ ನಡುಕ ಶುರುವಾಗಿದೆ. ನಗರದಲ್ಲಿ ಸೋಂಕಿತರ ಜೊತೆ ಜೊತೆಗೆ ಸಾವಿನ ಸಂಖ್ಯೆಯಲ್ಲೂ ಏರಿಕೆಯಾಗುತ್ತಿದೆ. ಏಪ್ರೀಲ್ 2 ನೇ ತಾರೀಖಿನಂದು 5 ಜನ, ಏ.3 ರಂದು 6 ಜನ ಸೋಂಕಿತರು ಸಾವನ್ನಪ್ಪಿದ್ರು. ಆದ್ರೆ ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲಿ ಸಾವಿನಾರ್ಭಟ ಜೋರಾಗಿದೆ.

ಜನವರಿಯ ಇಡೀ ತಿಂಗಳಿನಲ್ಲಿ 66 ಜನ ಸೋಂಕಿತರು ಸಾವನ್ನಪ್ಪಿದ್ದರು. ಫೆಬ್ರವರಿ ತಿಂಗಳಲ್ಲಿ 88 ಜನ ಮೃತಪಟ್ಟಿದ್ದರು. ಹಾಗೂ ಮಾರ್ಚ್ ಇಡೀ ತಿಂಗಳಿನಲ್ಲಿ 147 ಜನ ಸೋಂಕಿತರು ಬಲಿಯಾಗಿದ್ದರು. ಆದರೆ ಏಪ್ರಿಲ್ ತಿಂಗಳ 13ಕ್ಕೆ ಅಂದ್ರೆ ಕೇವಲ 13 ದಿನದಲ್ಲಿ 280 ಜನ ಸೋಂಕಿತರು ಮೃತಪಟ್ಟಿದ್ದಾರೆ. ತಿಂಗಳಾಂತ್ಯಕ್ಕೆ ಸಾವಿನ ಸಂಖ್ಯೆ ಒಂದು ಸಾವಿರ ಸೋಂಕಿತರು ಬಲಿಯಾಗಬಹುದೆಂದು ಅಂದಾಜಿಸಲಾಗಿದೆ.

ದಿನದಿಂದ ದಿನಕ್ಕೆ ಸಾವಿನ ಸಂಖ್ಯೆಯಲ್ಲಿ ಏರಿಕೆ ಏಪ್ರೀಲ್ 7 ರಂದು 25 ಜನ ಸೋಂಕಿತರು ಸಾವು. ಏಪ್ರೀಲ್ 8 ರಂದು 22 ಜ‌ನ ಸೋಂಕಿತರು ಸಾವು. ಏಪ್ರೀಲ್ 9 ರಂದು 29 ಜನ ಸೋಂಕಿತರು ಸಾವು ಏಪ್ರೀಲ್ 10 ರಂದು 19 ಜನ ಸೋಂಕಿತರು ಸಾವು. ಏಪ್ರೀಲ್ 11 ರಂದು 27 ಜನ ಸೋಂಕಿತರು ಸಾವು ಏಪ್ರೀಲ್ 12 ರಂದು 40 ಜನ ಸೋಂಕಿತರು ಸಾವು ಏಪ್ರೀಲ್ 13 ರಂದು 55 ಜನ ಸೋಂಕಿತರು ಸಾವು. ಈ ರೀತಿ ದಿನದಿಂದ ದಿನಕ್ಕೆ ಕೊರೊನಾದಿಂದ ಬಲಿಯಾದವರ ಸಂಖ್ಯೆ ಹೆಚ್ಚುತ್ತಿದೆ. ಇಂದು ಎಷ್ಟು ಜನರನ್ನ ಬಲಿ ಪಡೆಯಲಿದೆ ಕೊರೊನಾ ಎಂಬ ಆತಂಕ ಶುರುವಾಗಿದೆ. ಇನ್ನು ಏಪ್ರಿಲ್ ತಿಂಗಳ ಆರಂಭದಿಂದ ಇಲ್ಲಿವರೆಗೂ ಅಂದ್ರೆ 13 ದಿನದಲ್ಲಿ 56,136 ಜನ ಸೋಂಕಿತರು ಪತ್ತೆಯಾಗಿದ್ದಾರೆ. ಮಾರ್ಚ್​ನಲ್ಲಿ 31,886ಜನ ಸೋಂಕಿತರು ಪತ್ತೆಯಾಗಿದ್ರು. ಫೆಬ್ರವರಿಯಲ್ಲಿ 6,813 ಜನ ಸೋಂಕಿತರು ಪತ್ತೆಯಾಗಿದ್ರು. ಆದ್ರೆ ಏಪ್ರಿಲ್ ತಿಂಗಳ ಆರಂಭದಲ್ಲೇ ಕೊರೊನಾರ್ಭಟ ಜೋರಾಗಿದೆ. ಇದನ್ನು ಕಟ್ಟಿಹಾಕಲು ಅನೇಕ ಪ್ರಯತ್ನಗಳು ಸರ್ಕಾರದಿಂದ ನಡೆಯುತ್ತಿದೆ. ಇದರಂತೆಯೇ ಸಾರ್ವಜನಿಕರೂ ಸಹ ನಿರ್ಲಕ್ಷ್ಯ ಮಾಡದೆ ಕೊರೊನಾ ರೂಲ್ಸ್​​ಗಳನ್ನು ಪಾಲಿಸಬೇಕಿದೆ. ಹಾಗೂ ಸರ್ಕಾರ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಿದೆ. ಬೆಂಗಳೂರಲ್ಲಿ ಒಟ್ಟು 57,575 ಸಕ್ರಿಯ ಸೋಂಕಿತರಿದ್ದು, ಕೆಲವರಿಗೆ ಬೆಡ್ ಇಲ್ಲದೆ ನರಳಾಡುತ್ತಿದ್ದಾರೆ.

ಇದನ್ನೂ ಓದಿ: Covid-19 Karnataka Update: ಕರ್ನಾಟಕದಲ್ಲಿ 8778 ಮಂದಿಗೆ ಕೊರೊನಾ ದೃಢ, 67 ಸಾವು

(Day by Day Corona Death Rate is Increasing In Bengaluru)

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ