Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಲ್ಲೆಯಲ್ಲಿ ಪ್ರವಾಸಿ ಸ್ಥಳಗಳನ್ನು ಬಂದ್ ಮಾಡಲ್ಲ; ಮೈಸೂರು ಡಿಸಿ ರೋಹಿಣಿ ಸಿಂಧೂರಿ ಸ್ಪಷ್ಟನೆ

ಕೊರೊನಾ ಸೆಕೆಂಡರಿ ಸಂಪರ್ಕ ಹೊಂದಿದವರು ಟೆಸ್ಟಿಂಗ್ ಮಾಡಿಸಿಕೊಳ್ಳಲು ಮುಂದೆ ಬರುತ್ತಿಲ್ಲ .ಇದರಿಂದ ಮೈಸೂರಿನಲ್ಲಿ‌ ಕೊರೊನಾ‌ ಹೆಚ್ಚಾಗಿದೆ.

ಜಿಲ್ಲೆಯಲ್ಲಿ ಪ್ರವಾಸಿ ಸ್ಥಳಗಳನ್ನು ಬಂದ್ ಮಾಡಲ್ಲ; ಮೈಸೂರು ಡಿಸಿ ರೋಹಿಣಿ ಸಿಂಧೂರಿ ಸ್ಪಷ್ಟನೆ
ರೋಹಿಣಿ ಸಿಂಧೂರಿ
Follow us
guruganesh bhat
| Updated By: ಸಾಧು ಶ್ರೀನಾಥ್​

Updated on: Apr 03, 2021 | 1:55 PM

ಮೈಸೂರು: ಕೊರೊನಾ ಸೋಂಕು ಹೆಚ್ಚಾಗಿದ್ದರೂ ಮೈಸೂರಿನ ಪ್ರವಾಸಿತಾಣಗಳನ್ನು ಬಂದ್ ಮಾಡುವುದಿಲ್ಲ. ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಂದಲೂ ಈ ಬಗ್ಗೆ ಸೂಚನೆ ಬಂದಿದೆ. ನಾವು ಪ್ರವಾಸಿ ತಾಣಗಳನ್ನ ಮುಚ್ಚಿದರೆ ಅದನ್ನು ನಂಬಿದವರಿಗೆ ತೊಂದರೆ ಆಗುತ್ತದೆ. ಕಳೆದ ಬಾರಿ ಕೊರೊನಾ ಬಂದಾಗ ಎಲ್ಲವು ಲಾಕ್‌ಡೌನ್‌ ಆಗಿತ್ತು. ಅದರಿಂದ ಸಾಕಷ್ಟು ಜನರಿಗೆ ಆರ್ಥಿಕ ನಷ್ಟ ಉಂಟಾಗಿದೆ. ಈ ಬಾರಿ ಪ್ರವಾಸಿ ತಾಣ ಮುಚ್ಚಿ ಕೊರೊನಾ ಕಂಟ್ರೋಲ್ ಮಾಡುವ ಸ್ಥಿತಿಯಲ್ಲಿ ನಾವಿಲ್ಲ. ಎಲ್ಲವು ಓಪನ್ ಇರುವಾಗಲೇ ನಾವು ಕೊರೊನಾ ನಿಯಂತ್ರಣ ಮಾಡಬೇಕು. ಜನರು ಈ ಬಗ್ಗೆ ಎಚ್ಚೆತ್ತುಕೊಳ್ಳದಿದ್ದರೆ ನಾವು ಏನೂ ಮಾಡಲು ಸಾಧ್ಯವಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಎಚ್ಚರಿಕೆ ನೀಡಿದ್ದಾರೆ.

ದೇಶ, ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಇತ್ತ ಕೊರೊನಾ ಲಸಿಕೆ ವಿತರಣೆ ಪ್ರಕ್ರಿಯೆಗಳೂ ಭರದಿಂದ ಸಾಗುತ್ತದೆ. ಹಾಗಾದರೆ ಕೊರೊನಾ ಲಸಿಕೆ ಪಡೆದರೆ ಕೊರೊನಾ ಸೋಂಕು ತಗಲುವುದಿಲ್ಲವೇ ಎಂಬ ಅನುಮಾನ ಇನ್ನೂ ಹಲವರಿಗಿದೆ. ಈ ಪ್ರಶ್ನೆಗೆ ಹಲವು ತಜ್ಞರು, ಜನಪ್ರತಿನಿಧಿಗಳು ಉತ್ತರಿಸುತ್ತಲೇ ಇದ್ದಾರೆ. ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ‌ ಅವರು ಇಂದು ಕೊರೊನಾ ಲಸಿಕೆ ಪಡೆದವರಿಗೆ ಭರವಸೆ ತುಂಬುವ ಪ್ರಯತ್ನ ಮಾಡಿದ್ದಾರೆ.

ಈಗಾಗಲೇ ಕೊರೊನಾ ಲಸಿಕೆಯ ಎರಡು ಡೋಸೆಜ್ ಪಡೆದುಕೊಂಡವರಿಗೂ ತೆಗೆದುಕೊಂಡವರಿಗೂ ಪಾಸಿಟಿವ್ ಬರುವ ಸಾಧ್ಯತೆಯಿದೆ. ಲಸಿಕೆ ಪಡೆದೂ ಪಾಸಿಟಿವ್ ಬಂದರೆ ಅಂತವರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಪಾಸಿಟಿವ್ ಬಂದರೂ ಅಂತಹವರು ಆಸ್ಪತ್ರೆಗೆ ಹೋಗುವಂತಹ ಸಮಸ್ಯೆ ಉಂಟಾಗಿಲ್ಲ. ಜತೆಗೆ, ಎರಡು ಡೋಸೆಜ್ ತೆಗೆದುಕೊಂಡ 15 ದಿನದ ನಂತರ ಕೊರೊನಾ ಪಾಸಿಟಿವ್ ಬಂದ ಉದಾಹರಣೆ ಇಲ್ಲ. ಈ ಬಗ್ಗೆ ಯಾರಿಗು ಗೊಂದಲ ಬೇಡ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ‌ ವಿವರಿಸಿದರು.

ಕೊರೊನಾ ಸೆಕೆಂಡರಿ ಸಂಪರ್ಕ ಹೊಂದಿದವರು ಟೆಸ್ಟಿಂಗ್ ಮಾಡಿಸಿಕೊಳ್ಳಲು ಮುಂದೆ ಬರುತ್ತಿಲ್ಲ .ಇದರಿಂದ ಮೈಸೂರಿನಲ್ಲಿ‌ ಕೊರೊನಾ‌ ಹೆಚ್ಚಾಗಿದೆ. ಅದರಲ್ಲೂ ಯುವಕರಲ್ಲೇ ಅತಿ ಹೆಚ್ಚು ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ. ಇಂದು ಕೂಡ ಕೊರೊನಾ ಪಾಸಿಟಿವ್ ಪ್ರಕರಣ 170 ರ ಗಡಿ ದಾಟಿದೆ. ಇದರಲ್ಲಿ ನಗರ ಪ್ರದೇಶದಲ್ಲೆ ಹೆಚ್ಚು ಪ್ರಕರಣಗಳು ಕಂಡುಬಂದಿವೆ. ಸದ್ಯ ಪ್ರತಿದಿನ 6 ಸಾವಿರ ಜನರಿಗೆ ಕೊರೊನಾ‌ ಪರೀಕ್ಷೆ ಮಾಡಲಾಗುತ್ತಿದೆ. ಸಣ್ಣ ವಯಸ್ಸಿನವರಲ್ಲಿ ನಮಗೆ ಕೊರೊನಾ‌ ಬರಲ್ಲ ಎಂಬ ಅಸಡ್ಡೆ ಇದೆ. ಈ‌ ಕಾರಣದಿಂದ ಯುವಕರಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದೆ. ಸಾವಿನ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಅದರಲ್ಲೂ ಬೇರೆ ಕಾಯಿಲೆ ಇರುವವರು ಕೊರೊನಾ‌ ಸೋಂಕು ತಗುಲಿ ಸಾವನ್ನಪ್ಪುತ್ತಿದ್ದಾರೆ. ಪ್ರವಾಸಿ ತಾಣಗಳನ್ನು ಮುಚ್ಚುವ ಪ್ರಸ್ತಾಪವನ್ನು ನಾವು ರಾಜ್ಯ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಿಲ್ಲ. ಪ್ರವಾಸಿ ತಾಣಗಳಿಂದಲೆ ಕೊರೊನಾ‌ ಹೆಚ್ಚಾಗುತ್ತಿದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿವರಿಸಿದರು.‘

ಇದನ್ನೂ ಓದಿ: ಮೈಸೂರು ಜಿಲ್ಲೆಯ ಆರೋಗ್ಯ ಸಿಬ್ಬಂದಿಗೆ ಏಪ್ರಿಲ್ 30ರವರೆಗೆ ಎಲ್ಲಾ ರಜೆ ರದ್ದು; ಕೆಲಸದ ಸ್ಥಳದಲ್ಲೇ ಊಟ, ತಿಂಡಿ

ಮೈಸೂರು ರಿಂಗ್ ರಸ್ತೆ ಅಪಘಾತ ಪ್ರಕರಣ: ಕಾರ್ಯನಿರತ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪೊಲೀಸ್ ಆಯುಕ್ತರಿಂದ ಪ್ರಶಂಸನಾ ಪತ್ರ

ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?