AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಲ್ಲೆಯಲ್ಲಿ ಪ್ರವಾಸಿ ಸ್ಥಳಗಳನ್ನು ಬಂದ್ ಮಾಡಲ್ಲ; ಮೈಸೂರು ಡಿಸಿ ರೋಹಿಣಿ ಸಿಂಧೂರಿ ಸ್ಪಷ್ಟನೆ

ಕೊರೊನಾ ಸೆಕೆಂಡರಿ ಸಂಪರ್ಕ ಹೊಂದಿದವರು ಟೆಸ್ಟಿಂಗ್ ಮಾಡಿಸಿಕೊಳ್ಳಲು ಮುಂದೆ ಬರುತ್ತಿಲ್ಲ .ಇದರಿಂದ ಮೈಸೂರಿನಲ್ಲಿ‌ ಕೊರೊನಾ‌ ಹೆಚ್ಚಾಗಿದೆ.

ಜಿಲ್ಲೆಯಲ್ಲಿ ಪ್ರವಾಸಿ ಸ್ಥಳಗಳನ್ನು ಬಂದ್ ಮಾಡಲ್ಲ; ಮೈಸೂರು ಡಿಸಿ ರೋಹಿಣಿ ಸಿಂಧೂರಿ ಸ್ಪಷ್ಟನೆ
ರೋಹಿಣಿ ಸಿಂಧೂರಿ
guruganesh bhat
| Edited By: |

Updated on: Apr 03, 2021 | 1:55 PM

Share

ಮೈಸೂರು: ಕೊರೊನಾ ಸೋಂಕು ಹೆಚ್ಚಾಗಿದ್ದರೂ ಮೈಸೂರಿನ ಪ್ರವಾಸಿತಾಣಗಳನ್ನು ಬಂದ್ ಮಾಡುವುದಿಲ್ಲ. ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಂದಲೂ ಈ ಬಗ್ಗೆ ಸೂಚನೆ ಬಂದಿದೆ. ನಾವು ಪ್ರವಾಸಿ ತಾಣಗಳನ್ನ ಮುಚ್ಚಿದರೆ ಅದನ್ನು ನಂಬಿದವರಿಗೆ ತೊಂದರೆ ಆಗುತ್ತದೆ. ಕಳೆದ ಬಾರಿ ಕೊರೊನಾ ಬಂದಾಗ ಎಲ್ಲವು ಲಾಕ್‌ಡೌನ್‌ ಆಗಿತ್ತು. ಅದರಿಂದ ಸಾಕಷ್ಟು ಜನರಿಗೆ ಆರ್ಥಿಕ ನಷ್ಟ ಉಂಟಾಗಿದೆ. ಈ ಬಾರಿ ಪ್ರವಾಸಿ ತಾಣ ಮುಚ್ಚಿ ಕೊರೊನಾ ಕಂಟ್ರೋಲ್ ಮಾಡುವ ಸ್ಥಿತಿಯಲ್ಲಿ ನಾವಿಲ್ಲ. ಎಲ್ಲವು ಓಪನ್ ಇರುವಾಗಲೇ ನಾವು ಕೊರೊನಾ ನಿಯಂತ್ರಣ ಮಾಡಬೇಕು. ಜನರು ಈ ಬಗ್ಗೆ ಎಚ್ಚೆತ್ತುಕೊಳ್ಳದಿದ್ದರೆ ನಾವು ಏನೂ ಮಾಡಲು ಸಾಧ್ಯವಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಎಚ್ಚರಿಕೆ ನೀಡಿದ್ದಾರೆ.

ದೇಶ, ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಇತ್ತ ಕೊರೊನಾ ಲಸಿಕೆ ವಿತರಣೆ ಪ್ರಕ್ರಿಯೆಗಳೂ ಭರದಿಂದ ಸಾಗುತ್ತದೆ. ಹಾಗಾದರೆ ಕೊರೊನಾ ಲಸಿಕೆ ಪಡೆದರೆ ಕೊರೊನಾ ಸೋಂಕು ತಗಲುವುದಿಲ್ಲವೇ ಎಂಬ ಅನುಮಾನ ಇನ್ನೂ ಹಲವರಿಗಿದೆ. ಈ ಪ್ರಶ್ನೆಗೆ ಹಲವು ತಜ್ಞರು, ಜನಪ್ರತಿನಿಧಿಗಳು ಉತ್ತರಿಸುತ್ತಲೇ ಇದ್ದಾರೆ. ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ‌ ಅವರು ಇಂದು ಕೊರೊನಾ ಲಸಿಕೆ ಪಡೆದವರಿಗೆ ಭರವಸೆ ತುಂಬುವ ಪ್ರಯತ್ನ ಮಾಡಿದ್ದಾರೆ.

ಈಗಾಗಲೇ ಕೊರೊನಾ ಲಸಿಕೆಯ ಎರಡು ಡೋಸೆಜ್ ಪಡೆದುಕೊಂಡವರಿಗೂ ತೆಗೆದುಕೊಂಡವರಿಗೂ ಪಾಸಿಟಿವ್ ಬರುವ ಸಾಧ್ಯತೆಯಿದೆ. ಲಸಿಕೆ ಪಡೆದೂ ಪಾಸಿಟಿವ್ ಬಂದರೆ ಅಂತವರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಪಾಸಿಟಿವ್ ಬಂದರೂ ಅಂತಹವರು ಆಸ್ಪತ್ರೆಗೆ ಹೋಗುವಂತಹ ಸಮಸ್ಯೆ ಉಂಟಾಗಿಲ್ಲ. ಜತೆಗೆ, ಎರಡು ಡೋಸೆಜ್ ತೆಗೆದುಕೊಂಡ 15 ದಿನದ ನಂತರ ಕೊರೊನಾ ಪಾಸಿಟಿವ್ ಬಂದ ಉದಾಹರಣೆ ಇಲ್ಲ. ಈ ಬಗ್ಗೆ ಯಾರಿಗು ಗೊಂದಲ ಬೇಡ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ‌ ವಿವರಿಸಿದರು.

ಕೊರೊನಾ ಸೆಕೆಂಡರಿ ಸಂಪರ್ಕ ಹೊಂದಿದವರು ಟೆಸ್ಟಿಂಗ್ ಮಾಡಿಸಿಕೊಳ್ಳಲು ಮುಂದೆ ಬರುತ್ತಿಲ್ಲ .ಇದರಿಂದ ಮೈಸೂರಿನಲ್ಲಿ‌ ಕೊರೊನಾ‌ ಹೆಚ್ಚಾಗಿದೆ. ಅದರಲ್ಲೂ ಯುವಕರಲ್ಲೇ ಅತಿ ಹೆಚ್ಚು ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ. ಇಂದು ಕೂಡ ಕೊರೊನಾ ಪಾಸಿಟಿವ್ ಪ್ರಕರಣ 170 ರ ಗಡಿ ದಾಟಿದೆ. ಇದರಲ್ಲಿ ನಗರ ಪ್ರದೇಶದಲ್ಲೆ ಹೆಚ್ಚು ಪ್ರಕರಣಗಳು ಕಂಡುಬಂದಿವೆ. ಸದ್ಯ ಪ್ರತಿದಿನ 6 ಸಾವಿರ ಜನರಿಗೆ ಕೊರೊನಾ‌ ಪರೀಕ್ಷೆ ಮಾಡಲಾಗುತ್ತಿದೆ. ಸಣ್ಣ ವಯಸ್ಸಿನವರಲ್ಲಿ ನಮಗೆ ಕೊರೊನಾ‌ ಬರಲ್ಲ ಎಂಬ ಅಸಡ್ಡೆ ಇದೆ. ಈ‌ ಕಾರಣದಿಂದ ಯುವಕರಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದೆ. ಸಾವಿನ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಅದರಲ್ಲೂ ಬೇರೆ ಕಾಯಿಲೆ ಇರುವವರು ಕೊರೊನಾ‌ ಸೋಂಕು ತಗುಲಿ ಸಾವನ್ನಪ್ಪುತ್ತಿದ್ದಾರೆ. ಪ್ರವಾಸಿ ತಾಣಗಳನ್ನು ಮುಚ್ಚುವ ಪ್ರಸ್ತಾಪವನ್ನು ನಾವು ರಾಜ್ಯ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಿಲ್ಲ. ಪ್ರವಾಸಿ ತಾಣಗಳಿಂದಲೆ ಕೊರೊನಾ‌ ಹೆಚ್ಚಾಗುತ್ತಿದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿವರಿಸಿದರು.‘

ಇದನ್ನೂ ಓದಿ: ಮೈಸೂರು ಜಿಲ್ಲೆಯ ಆರೋಗ್ಯ ಸಿಬ್ಬಂದಿಗೆ ಏಪ್ರಿಲ್ 30ರವರೆಗೆ ಎಲ್ಲಾ ರಜೆ ರದ್ದು; ಕೆಲಸದ ಸ್ಥಳದಲ್ಲೇ ಊಟ, ತಿಂಡಿ

ಮೈಸೂರು ರಿಂಗ್ ರಸ್ತೆ ಅಪಘಾತ ಪ್ರಕರಣ: ಕಾರ್ಯನಿರತ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪೊಲೀಸ್ ಆಯುಕ್ತರಿಂದ ಪ್ರಶಂಸನಾ ಪತ್ರ

Follow Us
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!