ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಆಪ್ತ ಕಾರ್ಯದರ್ಶಿಯಾಗಿ ಬಳ್ಳಾರಿ ಜಿಲ್ಲಾಧಿಕಾರಿ ನಕುಲ್​ ನಿಯೋಜನೆ

ನಕುಲ್​ ತಮ್ಮ ಕೆಲಸದ ಮೂಲಕವೇ ಬಳ್ಳಾರಿಯಲ್ಲಿ ಹೆಸರು ಮಾಡಿದ್ದಾರೆ. ಗರ್ಭಿಣಿ ಪತ್ನಿಯನ್ನು ಜಿಲ್ಲಾ ಹೆರಿಗೆ ಆಸ್ಪತ್ರೆಗೆ ದಾಖಲು ಮಾಡಿ ಎಲ್ಲರಿಗೂ ಮಾದರಿ ಆಗಿದ್ದರು. 

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಆಪ್ತ ಕಾರ್ಯದರ್ಶಿಯಾಗಿ ಬಳ್ಳಾರಿ ಜಿಲ್ಲಾಧಿಕಾರಿ ನಕುಲ್​ ನಿಯೋಜನೆ
ಎಸ್​ಎಸ್​ ನಕುಲ್​
Edited By:

Updated on: Dec 17, 2020 | 9:26 PM

ಬಳ್ಳಾರಿ: ಕರ್ನಾಟಕ ಕೇಡರ್​ನ ಐಎಎಸ್​ ಅಧಿಕಾರಿ ಎಸ್​ಎಸ್​ ನಕುಲ್​ ಅವರನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರ ಆಪ್ತ ಕಾರ್ಯದರ್ಶಿಯಾಗಿ ನಿಯೋಜನೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಎಸ್​​.ಎಸ್​. ನಕುಲ್​ ಅವರು ಸದ್ಯ ಬಳ್ಳಾರಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2019ರ ಜೂನ್​ 19ರಂದು ಅವರು ಬಳ್ಳಾರಿ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದರು. ಇದಕ್ಕೂ ಮೊದಲು ಅವರು, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

ನಕುಲ್​ ತಮ್ಮ ಕೆಲಸದ ಮೂಲಕವೇ ಬಳ್ಳಾರಿಯಲ್ಲಿ ಹೆಸರು ಮಾಡಿದ್ದಾರೆ. ಗರ್ಭಿಣಿ ಪತ್ನಿಯನ್ನು ಜಿಲ್ಲಾ ಹೆರಿಗೆ ಆಸ್ಪತ್ರೆಗೆ ದಾಖಲು ಮಾಡಿ ಎಲ್ಲರಿಗೂ ಮಾದರಿ ಆಗಿದ್ದರು.

ಎಸ್​ಎಸ್​ ನಕುಲ್​ ಕುಶಾಲನಗರದವರು. ಮೈಸೂರಿನಲ್ಲಿ ಬಿಇ ಪದವಿ ಹೊಂದಿದ್ದರು. 2010ರಲ್ಲಿ ಐಎಎಸ್​ ಪಾಸ್​ ಮಾಡಿದ್ದ ಇವರು, 31 ನೇ ರ್ಯಾಂಕ್​ ಪಡೆದು ಭೇಷ್​ ಎನಿಸಿಕೊಂಡಿದ್ದರು.

ಫೋರ್ಬ್ಸ್ ಶಕ್ತಿಶಾಲಿ ಮಹಿಳಾ ಪಟ್ಟಿಯಲ್ಲಿ 41ನೇ ಸ್ಥಾನ ಪಡೆದ ನಿರ್ಮಲಾ ಸೀತಾರಾಮನ್!

Published On - 9:26 pm, Thu, 17 December 20

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us