AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಮ್​ಡಿಸಿವಿರ್ ಕೊರತೆ ನೀಗಿಸಿಲ್ಲ ನಿಜ, ಇನ್ನು ಮುಂದೆ ನಿತ್ಯ 35 ಸಾವಿರ ರೆಮ್​ಡಿಸಿವಿರ್ ಒದಗಿಸುತ್ತೇವೆ: ಅಶ್ವತ್ಥ್ ನಾರಾಯಣ ಹೇಳಿಕೆ

ನಾಳೆಯಿಂದ ನಿತ್ಯ 35,000 ರೆಮ್​ಡಿಸಿವಿರ್ ಹಂಚಿಕೆ ಆಗುತ್ತದೆ. ಪ್ರತಿ ದಿನ ಒಂದು ಸಾವಿರ ಜನರಿಗೆ ಬೆಡ್ ನೀಡಲು ವ್ಯವಸ್ಥೆ ಮಾಡುತ್ತೇವೆ ಎಂದು ಡಾ. ಅಶ್ವತ್ಥ್ ನಾರಾಯಣ ಹೇಳಿಕೆ ನೀಡಿದ್ದಾರೆ.

ರೆಮ್​ಡಿಸಿವಿರ್ ಕೊರತೆ ನೀಗಿಸಿಲ್ಲ ನಿಜ, ಇನ್ನು ಮುಂದೆ ನಿತ್ಯ 35 ಸಾವಿರ ರೆಮ್​ಡಿಸಿವಿರ್ ಒದಗಿಸುತ್ತೇವೆ: ಅಶ್ವತ್ಥ್ ನಾರಾಯಣ ಹೇಳಿಕೆ
ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ
TV9 Web
| Edited By: |

Updated on:Aug 23, 2021 | 12:40 PM

Share

ಬೆಂಗಳೂರು: ರೆಮ್​ಡಿಸಿವಿರ್ ಕೊರತೆ ನೀಗಿಸಿಲ್ಲ ನಿಜ ಎಂದು ಡಾ. ಅಶ್ವತ್ಥ್ ನಾರಾಯಣ ಹೇಳಿಕೆ ನೀಡಿದ್ದಾರೆ. ರೆಮ್​ಡಿಸಿವಿರ್ ಬೇಡಿಕೆ ಪೂರೈಸಲು ಸಂಬಂಧಪಟ್ಟ ಕಂಪೆನಿಗಳಿಗೆ ನೋಟಿಸ್ ನೀಡಿದ್ದೇವೆ. ಹೀಗಾಗಿ ಇನ್ನು ಮುಂದೆ ನಿತ್ಯ 35 ಸಾವಿರ ರೆಮ್​ಡಿಸಿವಿರ್ ಒದಗಿಸುತ್ತೇವೆ ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥ್​ ನಾರಾಯಣ ಹೇಳಿದ್ದಾರೆ.

ನಾಳೆಯಿಂದ ನಿತ್ಯ 35,000 ರೆಮ್​ಡಿಸಿವಿರ್ ಹಂಚಿಕೆ ಆಗುತ್ತದೆ. ಪ್ರತಿ ದಿನ ಒಂದು ಸಾವಿರ ಜನರಿಗೆ ಬೆಡ್ ನೀಡಲು ವ್ಯವಸ್ಥೆ ಮಾಡುತ್ತೇವೆ. ಸಾರ್ಸ್ ಪೋರ್ಟಲ್ ಮೂಲಕ ಜನರಿಗೆ ಬೆಡ್​ ನೀಡುತ್ತೇವೆ. ಸಾರ್ಸ್ ಪೋರ್ಟಲ್​ನಲ್ಲೇ ರೆಮ್​ಡಿಸಿವಿರ್ ಕೂಡ​ ಹಂಚಿಕೆ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.

ಪಲ್ಸ್ ಆಕ್ಸಿ ಮೀಟರ್​ಗೆ ಹೆಚ್ಚಿನ ಹಣ ಪಡೆದರೆ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಅಶ್ವತ್ಥ್ ನಾರಾಯಣ ಹೇಳಿದ್ದಾರೆ. 112ಕ್ಕೆ ಕರೆ ಮಾಡಿ ದೂರು ನೀಡಿದರೆ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ರೆಮ್​ಡಿಸಿವಿರ್ ಔಷಧವನ್ನು​ ಯಾರಿಗೂ ನೇರವಾಗಿ ಕೊಡಲಾಗುವುದಿಲ್ಲ. ಸರ್ಕಾರಿ ಆಸ್ಪತ್ರೆಗಳಿಗೆ ಮಾತ್ರ ನೇರವಾಗಿ ಪೂರೈಸುತ್ತಿದ್ದೇವೆ. ದೇಶದಲ್ಲಿ ಹೆಚ್ಚು ರೆಮ್​ಡಿಸಿವಿರ್​ ಔಷಧ ಸಿಗುತ್ತಿರುವ 2ನೇ ರಾಜ್ಯ ನಮ್ಮದು. ಮೇ 10ರಿಂದ 35 ಸಾವಿರ ರೆಮ್​​ಡಿಸಿವಿರ್ ರಾಜ್ಯಕ್ಕೆ ಬರಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಬೆಂಗಳೂರಿನಲ್ಲಿ ಈ ಮೊದಲು ತಿಳಿಸಿದ್ದರು.

ರೆಮ್​ಡಿಸಿವಿರ್ ಔಷಧ ಪೂರೈಕೆಯಲ್ಲಿ ವ್ಯತ್ಯಾಸವಾಗುತ್ತಿದೆ. ಹೀಗಾಗಿ ಇದಕ್ಕೆ ಸಂಬಂಧಿಸಿದ ಸಿಪ್ಲಾ, ಜ್ಯುಬಿಲೆಂಟ್​, ಸಿಂಜಿನ್​​ ಕಂಪನಿಗಳಿಗೆ ಇಂದು ನೋಟಿಸ್ ನೀಡಲಾಗಿದೆ. ಕಾನೂನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕೇಸ್​ ದಾಖಲಿಸುತ್ತೇವೆ. ಪ್ರಸ್ತುತ ಆಕ್ಸಿಜನ್ ಕೊರತೆ ಮತ್ತು ಬೇಡಿಕೆ ಇದೆ. 85ಕ್ಕಿಂತ ಕಡಿಮೆ ಸ್ಯಾಚುರೇಷನ್ ಇರುವ ಸೋಂಕಿತರು ಅಥವಾ ರೋಗಿಗಳಿಗೆ ಆಕ್ಸಿಜನ್ ಕಾನ್ಸಟ್ರೇಟರ್ ಪೂರೈಸುತ್ತೇವೆ. ತೀರಾ ಸ್ಯಾಚುರೇಷನ್ ಇರುವವರಿಗೆ ಆಕ್ಸಿಜನ್ ಕೊಟ್ಟು, ಆಸ್ಪತ್ರೆಗೆ ಪೂರೈಸುತ್ತೇವೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದರು.

ಇದನ್ನೂ ಓದಿ: ಅತಿ ಹೆಚ್ಚು ರೆಮ್​ಡೆಸಿವಿರ್ ಔಷಧ ಸಿಗುವ ರಾಜ್ಯಗಳಲ್ಲಿ ಕರ್ನಾಟಕಕ್ಕೆ ದೇಶದಲ್ಲೇ 2ನೇ ಸ್ಥಾನ; ಡಿಸಿಎಂ ಅಶ್ವತ್ಥ ನಾರಾಯಣ

ರೆಮ್​ಡೆಸಿವರ್ ಇಂಜೆಕ್ಷನ್ ಅಂತಾ ಪೋಲಿಯೋ ಇಂಜೆಕ್ಷನ್ ಕದ್ದ ಖದೀಮರು.. ಆಮೇಲೆ ಏನು ಮಾಡಿದರು!?

Published On - 3:51 pm, Mon, 10 May 21

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!