AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಮ್​ಡಿಸಿವಿರ್ ಕೊರತೆ ನೀಗಿಸಿಲ್ಲ ನಿಜ, ಇನ್ನು ಮುಂದೆ ನಿತ್ಯ 35 ಸಾವಿರ ರೆಮ್​ಡಿಸಿವಿರ್ ಒದಗಿಸುತ್ತೇವೆ: ಅಶ್ವತ್ಥ್ ನಾರಾಯಣ ಹೇಳಿಕೆ

ನಾಳೆಯಿಂದ ನಿತ್ಯ 35,000 ರೆಮ್​ಡಿಸಿವಿರ್ ಹಂಚಿಕೆ ಆಗುತ್ತದೆ. ಪ್ರತಿ ದಿನ ಒಂದು ಸಾವಿರ ಜನರಿಗೆ ಬೆಡ್ ನೀಡಲು ವ್ಯವಸ್ಥೆ ಮಾಡುತ್ತೇವೆ ಎಂದು ಡಾ. ಅಶ್ವತ್ಥ್ ನಾರಾಯಣ ಹೇಳಿಕೆ ನೀಡಿದ್ದಾರೆ.

ರೆಮ್​ಡಿಸಿವಿರ್ ಕೊರತೆ ನೀಗಿಸಿಲ್ಲ ನಿಜ, ಇನ್ನು ಮುಂದೆ ನಿತ್ಯ 35 ಸಾವಿರ ರೆಮ್​ಡಿಸಿವಿರ್ ಒದಗಿಸುತ್ತೇವೆ: ಅಶ್ವತ್ಥ್ ನಾರಾಯಣ ಹೇಳಿಕೆ
ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ
TV9 Web
| Edited By: |

Updated on:Aug 23, 2021 | 12:40 PM

Share

ಬೆಂಗಳೂರು: ರೆಮ್​ಡಿಸಿವಿರ್ ಕೊರತೆ ನೀಗಿಸಿಲ್ಲ ನಿಜ ಎಂದು ಡಾ. ಅಶ್ವತ್ಥ್ ನಾರಾಯಣ ಹೇಳಿಕೆ ನೀಡಿದ್ದಾರೆ. ರೆಮ್​ಡಿಸಿವಿರ್ ಬೇಡಿಕೆ ಪೂರೈಸಲು ಸಂಬಂಧಪಟ್ಟ ಕಂಪೆನಿಗಳಿಗೆ ನೋಟಿಸ್ ನೀಡಿದ್ದೇವೆ. ಹೀಗಾಗಿ ಇನ್ನು ಮುಂದೆ ನಿತ್ಯ 35 ಸಾವಿರ ರೆಮ್​ಡಿಸಿವಿರ್ ಒದಗಿಸುತ್ತೇವೆ ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥ್​ ನಾರಾಯಣ ಹೇಳಿದ್ದಾರೆ.

ನಾಳೆಯಿಂದ ನಿತ್ಯ 35,000 ರೆಮ್​ಡಿಸಿವಿರ್ ಹಂಚಿಕೆ ಆಗುತ್ತದೆ. ಪ್ರತಿ ದಿನ ಒಂದು ಸಾವಿರ ಜನರಿಗೆ ಬೆಡ್ ನೀಡಲು ವ್ಯವಸ್ಥೆ ಮಾಡುತ್ತೇವೆ. ಸಾರ್ಸ್ ಪೋರ್ಟಲ್ ಮೂಲಕ ಜನರಿಗೆ ಬೆಡ್​ ನೀಡುತ್ತೇವೆ. ಸಾರ್ಸ್ ಪೋರ್ಟಲ್​ನಲ್ಲೇ ರೆಮ್​ಡಿಸಿವಿರ್ ಕೂಡ​ ಹಂಚಿಕೆ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.

ಪಲ್ಸ್ ಆಕ್ಸಿ ಮೀಟರ್​ಗೆ ಹೆಚ್ಚಿನ ಹಣ ಪಡೆದರೆ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಅಶ್ವತ್ಥ್ ನಾರಾಯಣ ಹೇಳಿದ್ದಾರೆ. 112ಕ್ಕೆ ಕರೆ ಮಾಡಿ ದೂರು ನೀಡಿದರೆ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ರೆಮ್​ಡಿಸಿವಿರ್ ಔಷಧವನ್ನು​ ಯಾರಿಗೂ ನೇರವಾಗಿ ಕೊಡಲಾಗುವುದಿಲ್ಲ. ಸರ್ಕಾರಿ ಆಸ್ಪತ್ರೆಗಳಿಗೆ ಮಾತ್ರ ನೇರವಾಗಿ ಪೂರೈಸುತ್ತಿದ್ದೇವೆ. ದೇಶದಲ್ಲಿ ಹೆಚ್ಚು ರೆಮ್​ಡಿಸಿವಿರ್​ ಔಷಧ ಸಿಗುತ್ತಿರುವ 2ನೇ ರಾಜ್ಯ ನಮ್ಮದು. ಮೇ 10ರಿಂದ 35 ಸಾವಿರ ರೆಮ್​​ಡಿಸಿವಿರ್ ರಾಜ್ಯಕ್ಕೆ ಬರಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಬೆಂಗಳೂರಿನಲ್ಲಿ ಈ ಮೊದಲು ತಿಳಿಸಿದ್ದರು.

ರೆಮ್​ಡಿಸಿವಿರ್ ಔಷಧ ಪೂರೈಕೆಯಲ್ಲಿ ವ್ಯತ್ಯಾಸವಾಗುತ್ತಿದೆ. ಹೀಗಾಗಿ ಇದಕ್ಕೆ ಸಂಬಂಧಿಸಿದ ಸಿಪ್ಲಾ, ಜ್ಯುಬಿಲೆಂಟ್​, ಸಿಂಜಿನ್​​ ಕಂಪನಿಗಳಿಗೆ ಇಂದು ನೋಟಿಸ್ ನೀಡಲಾಗಿದೆ. ಕಾನೂನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕೇಸ್​ ದಾಖಲಿಸುತ್ತೇವೆ. ಪ್ರಸ್ತುತ ಆಕ್ಸಿಜನ್ ಕೊರತೆ ಮತ್ತು ಬೇಡಿಕೆ ಇದೆ. 85ಕ್ಕಿಂತ ಕಡಿಮೆ ಸ್ಯಾಚುರೇಷನ್ ಇರುವ ಸೋಂಕಿತರು ಅಥವಾ ರೋಗಿಗಳಿಗೆ ಆಕ್ಸಿಜನ್ ಕಾನ್ಸಟ್ರೇಟರ್ ಪೂರೈಸುತ್ತೇವೆ. ತೀರಾ ಸ್ಯಾಚುರೇಷನ್ ಇರುವವರಿಗೆ ಆಕ್ಸಿಜನ್ ಕೊಟ್ಟು, ಆಸ್ಪತ್ರೆಗೆ ಪೂರೈಸುತ್ತೇವೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದರು.

ಇದನ್ನೂ ಓದಿ: ಅತಿ ಹೆಚ್ಚು ರೆಮ್​ಡೆಸಿವಿರ್ ಔಷಧ ಸಿಗುವ ರಾಜ್ಯಗಳಲ್ಲಿ ಕರ್ನಾಟಕಕ್ಕೆ ದೇಶದಲ್ಲೇ 2ನೇ ಸ್ಥಾನ; ಡಿಸಿಎಂ ಅಶ್ವತ್ಥ ನಾರಾಯಣ

ರೆಮ್​ಡೆಸಿವರ್ ಇಂಜೆಕ್ಷನ್ ಅಂತಾ ಪೋಲಿಯೋ ಇಂಜೆಕ್ಷನ್ ಕದ್ದ ಖದೀಮರು.. ಆಮೇಲೆ ಏನು ಮಾಡಿದರು!?

Published On - 3:51 pm, Mon, 10 May 21

Follow Us
Web contact
Web contact

TV9 Kannada

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್