AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Lockdown: ಜೂನ್ 7ರಂದು ಅನ್​ಲಾಕ್ ಮಾಡುವ ಬಗ್ಗೆ ಸುಳಿವು ನೀಡಿದ ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ

ರಾಜ್ಯದಲ್ಲಿ ಒಮ್ಮೆಯೇ ಅನ್‌ಲಾಕ್‌ ಮಾಡಬೇಕಾ? ಅಥವಾ ಹಂತಹಂತವಾಗಿ ಅನ್‌ಲಾಕ್‌ ಮಾಡಬೇಕಾ ಎಂದು ಚರ್ಚೆ ಮಾಡಬೇಕಿದೆ. ಚರ್ಚಿಸಿದ ಬಳಿಕವಷ್ಟೇ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.

Karnataka Lockdown: ಜೂನ್ 7ರಂದು ಅನ್​ಲಾಕ್ ಮಾಡುವ ಬಗ್ಗೆ ಸುಳಿವು ನೀಡಿದ ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ
ಲಾಕ್​ಡೌನ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 14, 2021 | 12:47 PM

Share

ಬೆಂಗಳೂರು: ಜೂನ್ 7ರಂದು ಅನ್‌ಲಾಕ್ ಮಾಡೋದು ಗ್ಯಾರಂಟಿ ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಾ.ಅಶ್ವತ್ಥ್‌ ನಾರಾಯಣ ಇಂದು (ಜೂನ್ 1) ಹೇಳಿಕೆ ನೀಡಿದ್ದಾರೆ. ಆದರೆ, ಎಷ್ಟು ಮಟ್ಟದಲ್ಲಿ ಅನ್‌ಲಾಕ್ ಮಾಡಬೇಕೆಂದು ಚರ್ಚೆ ನಡೆಸಲಾಗುವುದು. ಚರ್ಚಿಸಿ ಬಳಿಕ ಎಷ್ಟು ಮತ್ತು ಯಾವ ಮಟ್ಟದಲ್ಲಿ ಅನ್‌ಲಾಕ್ ಎಂಬ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಒಮ್ಮೆಯೇ ಅನ್‌ಲಾಕ್‌ ಮಾಡಬೇಕಾ? ಅಥವಾ ಹಂತಹಂತವಾಗಿ ಅನ್‌ಲಾಕ್‌ ಮಾಡಬೇಕಾ ಎಂದು ಚರ್ಚೆ ಮಾಡಬೇಕಿದೆ. ಚರ್ಚಿಸಿದ ಬಳಿಕವಷ್ಟೇ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.

ಬ್ಲ್ಯಾಕ್​ ಫಂಗಸ್​ ಸೋಂಕಿಗೆ ಔಷಧ ಕೊರತೆ ಇದೆ ಕರ್ನಾಟಕದಲ್ಲಿ ಈಗ ಆಂಫೊಟೆರಿಸಿನ್ ಕೊರತೆ ಇದೆ. ಬ್ಲ್ಯಾಕ್ ಫಂಗಸ್ ಸೋಂಕಿಗೆ ಔಷಧದ ಕೊರತೆ ಇದೆ. ಔಷಧ ಕೊರತೆ ನೀಗಿಸುವ ಪ್ರಯತ್ನ ನಡೆಯುತ್ತಿದೆ ಎಂದು ಬೆಂಗಳೂರಲ್ಲಿ ಡಿಸಿಎಂ‌‌ ಅಶ್ವತ್ಥ್​ ನಾರಾಯಣ ಹೇಳಿಕೆ ನೀಡಿದ್ದಾರೆ. 1 ಲಕ್ಷ ಆಂಫೊಟೆರಿಸಿನ್​ಗೆ ಟೆಂಡರ್ ಕರೆದಿದ್ದೇವೆ. ಬೇರೆ ಇಂಜೆಕ್ಷನ್, ಮಾತ್ರೆಗೆ ಆರ್ಡರ್ ಕೊಟ್ಟಿದ್ದೇವೆ. ಆಂಫೊಟೆರಿಸಿನ್​ಗಿಂತ ಪರಿಣಾಮಕಾರಿ ಔಷಧ ಇವೆ. ಆದ್ರೆ ಅಡ್ಡಪರಿಣಾಮ ಇರುವುದರಿಂದ ಬಳಸಲಾಗ್ತಿಲ್ಲ ಎಂದು ಅಶ್ವತ್ಥ್​ ನಾರಾಯಣ ವಿವರಿಸಿದ್ದಾರೆ.

ಬಾಗಲಕೋಟೆ: ಲಾಕ್​ಡೌನ್ ತೆರವು ಮಾಡಬಹುದು ರಾಜ್ಯದಲ್ಲಿ ಸಾಧ್ಯವಾದಷ್ಟು ಲಾಕ್‌ಡೌನ್ ತೆರವು ಮಾಡಬೇಕು. ಜೂನ್ 7ರ ನಂತರ ಎಲ್ಲವೂ ನಾರ್ಮಲ್‌ಗೆ ಬರಲಿದೆ ಎಂದು ಇಂದು (ಜೂನ್ 1) ಬಾಗಲಕೋಟೆ ನಗರದಲ್ಲಿ ಸಚಿವ ಮುರುಗೇಶ್ ನಿರಾಣಿ ಹೇಳಿಕೆ ನೀಡಿದ್ದಾರೆ. ಕಲಬುರಗಿ, ಬಾಗಲಕೋಟೆ ಜಿಲ್ಲೆಯಲ್ಲಿ ಲಾಕ್‌ಡೌನ್ ಅಗತ್ಯವಿಲ್ಲ. ಲಾಕ್‌ಡೌನ್ ಅಗತ್ಯವಿಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಆದರೆ, ಜನ ಏಕಾಏಕಿ ಹೊರಗೆ ಬರದಂತೆ ನಿಯಮ ಮಾಡಬೇಕು. ಮದುವೆ, ಕಾರ್ಯಕ್ರಮಗಳಿಗೆ ನಿಯಮ ಮುಂದುವರಿಸಬೇಕು ಎಂದು ಬಾಗಲಕೋಟೆ ನಗರದಲ್ಲಿ ಸಚಿವ ಮುರುಗೇಶ್ ನಿರಾಣಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Tv9 Digital Live: ಹೊರಗೆ ಬರೋಕೆ ಕೊರೊನಾ ಭಯ, ಮನೇಲಿದ್ರೆ ಹಸಿವಿನ ಹಿಂಸೆ; ಅಡಕತ್ತರಿಯಲ್ಲಿ ದುಡಿದು ತಿನ್ನುವ ಜನ

ಲಾಕ್​ಡೌನ್ ಮುಗಿದ ನಂತರ ಆರಂಭವಾಗುವ ಸಾರಿಗೆ ಸೇವೆಯಲ್ಲಿ ಲಸಿಕೆ ಪಡೆದ ಸಿಬ್ಬಂದಿಗಳಿಗೆ ಆದ್ಯತೆ: ಡಿಸಿಎಂ ಲಕ್ಷ್ಮಣ ಸವದಿ

Published On - 5:40 pm, Tue, 1 June 21

Follow Us
Web contact
Web contact

TV9 Kannada

Read More
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!