AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Lockdown: ಜೂನ್ 7ರಂದು ಅನ್​ಲಾಕ್ ಮಾಡುವ ಬಗ್ಗೆ ಸುಳಿವು ನೀಡಿದ ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ

ರಾಜ್ಯದಲ್ಲಿ ಒಮ್ಮೆಯೇ ಅನ್‌ಲಾಕ್‌ ಮಾಡಬೇಕಾ? ಅಥವಾ ಹಂತಹಂತವಾಗಿ ಅನ್‌ಲಾಕ್‌ ಮಾಡಬೇಕಾ ಎಂದು ಚರ್ಚೆ ಮಾಡಬೇಕಿದೆ. ಚರ್ಚಿಸಿದ ಬಳಿಕವಷ್ಟೇ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.

Karnataka Lockdown: ಜೂನ್ 7ರಂದು ಅನ್​ಲಾಕ್ ಮಾಡುವ ಬಗ್ಗೆ ಸುಳಿವು ನೀಡಿದ ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ
ಲಾಕ್​ಡೌನ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 14, 2021 | 12:47 PM

Share

ಬೆಂಗಳೂರು: ಜೂನ್ 7ರಂದು ಅನ್‌ಲಾಕ್ ಮಾಡೋದು ಗ್ಯಾರಂಟಿ ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಾ.ಅಶ್ವತ್ಥ್‌ ನಾರಾಯಣ ಇಂದು (ಜೂನ್ 1) ಹೇಳಿಕೆ ನೀಡಿದ್ದಾರೆ. ಆದರೆ, ಎಷ್ಟು ಮಟ್ಟದಲ್ಲಿ ಅನ್‌ಲಾಕ್ ಮಾಡಬೇಕೆಂದು ಚರ್ಚೆ ನಡೆಸಲಾಗುವುದು. ಚರ್ಚಿಸಿ ಬಳಿಕ ಎಷ್ಟು ಮತ್ತು ಯಾವ ಮಟ್ಟದಲ್ಲಿ ಅನ್‌ಲಾಕ್ ಎಂಬ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಒಮ್ಮೆಯೇ ಅನ್‌ಲಾಕ್‌ ಮಾಡಬೇಕಾ? ಅಥವಾ ಹಂತಹಂತವಾಗಿ ಅನ್‌ಲಾಕ್‌ ಮಾಡಬೇಕಾ ಎಂದು ಚರ್ಚೆ ಮಾಡಬೇಕಿದೆ. ಚರ್ಚಿಸಿದ ಬಳಿಕವಷ್ಟೇ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.

ಬ್ಲ್ಯಾಕ್​ ಫಂಗಸ್​ ಸೋಂಕಿಗೆ ಔಷಧ ಕೊರತೆ ಇದೆ ಕರ್ನಾಟಕದಲ್ಲಿ ಈಗ ಆಂಫೊಟೆರಿಸಿನ್ ಕೊರತೆ ಇದೆ. ಬ್ಲ್ಯಾಕ್ ಫಂಗಸ್ ಸೋಂಕಿಗೆ ಔಷಧದ ಕೊರತೆ ಇದೆ. ಔಷಧ ಕೊರತೆ ನೀಗಿಸುವ ಪ್ರಯತ್ನ ನಡೆಯುತ್ತಿದೆ ಎಂದು ಬೆಂಗಳೂರಲ್ಲಿ ಡಿಸಿಎಂ‌‌ ಅಶ್ವತ್ಥ್​ ನಾರಾಯಣ ಹೇಳಿಕೆ ನೀಡಿದ್ದಾರೆ. 1 ಲಕ್ಷ ಆಂಫೊಟೆರಿಸಿನ್​ಗೆ ಟೆಂಡರ್ ಕರೆದಿದ್ದೇವೆ. ಬೇರೆ ಇಂಜೆಕ್ಷನ್, ಮಾತ್ರೆಗೆ ಆರ್ಡರ್ ಕೊಟ್ಟಿದ್ದೇವೆ. ಆಂಫೊಟೆರಿಸಿನ್​ಗಿಂತ ಪರಿಣಾಮಕಾರಿ ಔಷಧ ಇವೆ. ಆದ್ರೆ ಅಡ್ಡಪರಿಣಾಮ ಇರುವುದರಿಂದ ಬಳಸಲಾಗ್ತಿಲ್ಲ ಎಂದು ಅಶ್ವತ್ಥ್​ ನಾರಾಯಣ ವಿವರಿಸಿದ್ದಾರೆ.

ಬಾಗಲಕೋಟೆ: ಲಾಕ್​ಡೌನ್ ತೆರವು ಮಾಡಬಹುದು ರಾಜ್ಯದಲ್ಲಿ ಸಾಧ್ಯವಾದಷ್ಟು ಲಾಕ್‌ಡೌನ್ ತೆರವು ಮಾಡಬೇಕು. ಜೂನ್ 7ರ ನಂತರ ಎಲ್ಲವೂ ನಾರ್ಮಲ್‌ಗೆ ಬರಲಿದೆ ಎಂದು ಇಂದು (ಜೂನ್ 1) ಬಾಗಲಕೋಟೆ ನಗರದಲ್ಲಿ ಸಚಿವ ಮುರುಗೇಶ್ ನಿರಾಣಿ ಹೇಳಿಕೆ ನೀಡಿದ್ದಾರೆ. ಕಲಬುರಗಿ, ಬಾಗಲಕೋಟೆ ಜಿಲ್ಲೆಯಲ್ಲಿ ಲಾಕ್‌ಡೌನ್ ಅಗತ್ಯವಿಲ್ಲ. ಲಾಕ್‌ಡೌನ್ ಅಗತ್ಯವಿಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಆದರೆ, ಜನ ಏಕಾಏಕಿ ಹೊರಗೆ ಬರದಂತೆ ನಿಯಮ ಮಾಡಬೇಕು. ಮದುವೆ, ಕಾರ್ಯಕ್ರಮಗಳಿಗೆ ನಿಯಮ ಮುಂದುವರಿಸಬೇಕು ಎಂದು ಬಾಗಲಕೋಟೆ ನಗರದಲ್ಲಿ ಸಚಿವ ಮುರುಗೇಶ್ ನಿರಾಣಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Tv9 Digital Live: ಹೊರಗೆ ಬರೋಕೆ ಕೊರೊನಾ ಭಯ, ಮನೇಲಿದ್ರೆ ಹಸಿವಿನ ಹಿಂಸೆ; ಅಡಕತ್ತರಿಯಲ್ಲಿ ದುಡಿದು ತಿನ್ನುವ ಜನ

ಲಾಕ್​ಡೌನ್ ಮುಗಿದ ನಂತರ ಆರಂಭವಾಗುವ ಸಾರಿಗೆ ಸೇವೆಯಲ್ಲಿ ಲಸಿಕೆ ಪಡೆದ ಸಿಬ್ಬಂದಿಗಳಿಗೆ ಆದ್ಯತೆ: ಡಿಸಿಎಂ ಲಕ್ಷ್ಮಣ ಸವದಿ

Published On - 5:40 pm, Tue, 1 June 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ