ಸಮಾಜದ ಪ್ರತಿಯೊಬ್ಬ ವ್ಯಕ್ತಿಯ ಭಾವನೆ, ಧ್ವನಿಗೆ ಶಕ್ತಿಯಾದ ವಾಹಿನಿ ಟಿವಿ 9: ಸಚಿವ ಅಶ್ವತ್ಥ ನಾರಾಯಣ್

ಸಮಾಜದ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ, ಅವರ ಸಾಧನೆಗೆ ಮನ್ನಣೆ ನೀಡುವ ಕಾರ್ಯವನ್ನು ಟಿವಿ 9 ಮಾಡುತ್ತಿದೆ. ಸಾಧಕರ ಸಾಧನೆಗೆ ಮೆಚ್ಚುಗೆಯನ್ನು, ಗೌರವನ್ನು ನೀಡಬೇಕು ಎಂಬ ಏಕೈಕ ಉದ್ದೇಶದಿಂದ ಈ ನವನಕ್ಷತ್ರ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಹೇಳಿದರು.

ಸಮಾಜದ ಪ್ರತಿಯೊಬ್ಬ ವ್ಯಕ್ತಿಯ ಭಾವನೆ, ಧ್ವನಿಗೆ ಶಕ್ತಿಯಾದ ವಾಹಿನಿ ಟಿವಿ 9: ಸಚಿವ ಅಶ್ವತ್ಥ ನಾರಾಯಣ್
ಡಿಸಿಎಂ ಅಶ್ವತ್ಥ ನಾರಾಯಣ್​
Follow us
| Edited By: Lakshmi Hegde

Updated on:Jan 05, 2022 | 7:33 AM

ಟಿವಿ 9 ಸುದ್ದಿ ದೃಶ್ಯ ಮಾಧ್ಯಮ ಇಂದು ವ್ಯಾಪಕವಾಗಿ ಬೆಳೆದು ಮನೆಮನೆಗೂ ತಲುಪಿದೆ ಎಂದು ರಾಜ್ಯದ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ್ ಅವರು ಹೇಳಿದರು. ಟಿವಿ 9, ದೃಶ್ಯ ಸುದ್ದಿ ಮಾಧ್ಯಮ ಪ್ರಾರಂಭವಾಗಿ 15 ವರ್ಷ ತುಂಬಿದ ಹಿನ್ನೆಲೆಯಲ್ಲಿ ವಾಹಿನಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ನವನಕ್ಷತ್ರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಟಿವಿ9 ಕಾರ್ಯವನ್ನು ಶ್ಲಾಘಿಸಿದರು.

ಸಮಾಜದ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ, ಅವರ ಸಾಧನೆಗೆ ಮನ್ನಣೆ ನೀಡುವ ಕಾರ್ಯವನ್ನು ಟಿವಿ 9 ಮಾಡುತ್ತಿದೆ. ಸಾಧಕರ ಸಾಧನೆಗೆ ಮೆಚ್ಚುಗೆಯನ್ನು, ಗೌರವನ್ನು ನೀಡಬೇಕು ಎಂಬ ಏಕೈಕ ಉದ್ದೇಶದಿಂದ ಈ ನವನಕ್ಷತ್ರ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಟಿವಿ9 ಸಂಸ್ಥೆಯವರು ಹೇಗೆ ಬೆಳೆದರೋ, ಹಾಗೇ, ಇನ್ನೊಂದು ಕ್ಷೇತ್ರದಲ್ಲಿ ಅವರಂತೆ ಬೆಳೆದು ಸಾಧನೆ ಮಾಡಿದವರನ್ನು, ಸಮಾಜಕ್ಕೆ ಪೂರಕವಾಗಿ ಕೆಲಸ ಮಾಡಿದವರನ್ನು ಗುರುತಿಸಿ ಅವರಿಗೆ ಸನ್ಮಾನ ಮಾಡುತ್ತಿರುವುದು ನಿಜಕ್ಕೂ ಒಳ್ಳೆಯ ಕೆಲಸ ಎಂದು ಶ್ಲಾಘಿಸಿದರು. ಒಳ್ಳೆಯ ಕೆಲಸ, ಸಾಧನೆ ಮಾಡಿದವರನ್ನು ಬೆನ್ನು ತಟ್ಟುವಂಥ ಕೆಲಸ ಮಾಡಿದಾಗ ಸಮಾಜದಲ್ಲಿ ಒಂದು ಸಂಚಲನ ಮೂಡಿಸಿದಂತಾಗುತ್ತದೆ. ಅಂತೆಯೇ ಈ ನವನಕ್ಷತ್ರ ಕಾರ್ಯಕ್ರಮ ನಮ್ಮ ಸಮಾಜದಲ್ಲಿ ಒಂದು ಸಂಚಲನ ಮೂಡಿಸುತ್ತದೆ ಎಂದು ಅಶ್ವತ್ಥ ನಾರಾಯಣ್ ಹೇಳಿದರು.

ಸರ್ಕಾರಗಳ ಮೂಲಕ, ಕಾರ್ಯಾಂಗ, ನ್ಯಾಯಾಂಗಗಳ ಮೂಲಕ ಹಲವು ಹಂತದ ಕಾರ್ಯಗಳು ಆಗುತ್ತಿರುತ್ತವೆ. ಇವೆಲ್ಲವುಗಳ ಮಧ್ಯೆ ಸಾಕಷ್ಟು ಸವಾಲುಗಳು, ಸುಧಾರಣೆಗಳು, ಗೊಂದಲಗಳು ಉಂಟಾಗುತ್ತವೆ. ಇವುಗಳನ್ನು ಬಹಳಷ್ಟು ಪರಿಣಾಮಕಾರಿಯಾಗಿ ಪ್ರತಿಯೊಬ್ಬ ವ್ಯಕ್ತಿಗೂ ತಲುಪಿಸುವ ಕೆಲಸವನ್ನು ಟಿವಿ 9 ಅತ್ಯುತ್ತಮವಾಗಿ ಮಾಡುತ್ತಿದೆ. ನಮ್ಮ ಸಮಾಜದ ಪ್ರತಿಯೊಬ್ಬ ವ್ಯಕ್ತಿಯ, ಜನರ ಭಾವನೆ ಮತ್ತು ಧ್ವನಿಗೆ ಶಕ್ತಿಯನ್ನು ಕೊಟ್ಟು, ಪ್ರಜಾಪ್ರಭುತ್ವವನ್ನು ಬಹಳ ಉತ್ತಮವಾಗಿ ಬೆಳೆಯಲು ಮೂಲ ಕಾರಣವಾಗಿದ್ದು ಟಿವಿ 9. ಹೀಗಿರುವ ಟಿವಿ 9 ಬಗ್ಗೆ ನಮಗೆ ನಿಜಕ್ಕೂ ಹೆಮ್ಮೆಯಿದೆ. ಇದರ ಸಾಧನೆ ಮತ್ತು ಕಾರ್ಯ ಇನ್ನೂ ಹೆಚ್ಚಿನ ರೀತಿಯಲ್ಲಿ, ಪ್ರಜಾಪ್ರಭುತ್ವಕ್ಕೆ ಪೂರಕವಾಗಿ ಮುನ್ನಡೆಯಲಿ ಎಂದು ಅಶ್ವತ್ಥ್ ನಾರಾಯಣ್ ಹಾರೈಸಿದರು.

ಇದನ್ನೂ ಓದಿ: Rashmika Mandanna: ನಟಿ ರಶ್ಮಿಕಾ ಮಂದಣ್ಣಗೆ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ

Published On - 5:09 pm, Tue, 4 January 22

ತಾಜಾ ಸುದ್ದಿ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್