AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾಜದ ಪ್ರತಿಯೊಬ್ಬ ವ್ಯಕ್ತಿಯ ಭಾವನೆ, ಧ್ವನಿಗೆ ಶಕ್ತಿಯಾದ ವಾಹಿನಿ ಟಿವಿ 9: ಸಚಿವ ಅಶ್ವತ್ಥ ನಾರಾಯಣ್

ಸಮಾಜದ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ, ಅವರ ಸಾಧನೆಗೆ ಮನ್ನಣೆ ನೀಡುವ ಕಾರ್ಯವನ್ನು ಟಿವಿ 9 ಮಾಡುತ್ತಿದೆ. ಸಾಧಕರ ಸಾಧನೆಗೆ ಮೆಚ್ಚುಗೆಯನ್ನು, ಗೌರವನ್ನು ನೀಡಬೇಕು ಎಂಬ ಏಕೈಕ ಉದ್ದೇಶದಿಂದ ಈ ನವನಕ್ಷತ್ರ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಹೇಳಿದರು.

ಸಮಾಜದ ಪ್ರತಿಯೊಬ್ಬ ವ್ಯಕ್ತಿಯ ಭಾವನೆ, ಧ್ವನಿಗೆ ಶಕ್ತಿಯಾದ ವಾಹಿನಿ ಟಿವಿ 9: ಸಚಿವ ಅಶ್ವತ್ಥ ನಾರಾಯಣ್
ಡಿಸಿಎಂ ಅಶ್ವತ್ಥ ನಾರಾಯಣ್​
TV9 Web
| Edited By: |

Updated on:Jan 05, 2022 | 7:33 AM

Share

ಟಿವಿ 9 ಸುದ್ದಿ ದೃಶ್ಯ ಮಾಧ್ಯಮ ಇಂದು ವ್ಯಾಪಕವಾಗಿ ಬೆಳೆದು ಮನೆಮನೆಗೂ ತಲುಪಿದೆ ಎಂದು ರಾಜ್ಯದ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ್ ಅವರು ಹೇಳಿದರು. ಟಿವಿ 9, ದೃಶ್ಯ ಸುದ್ದಿ ಮಾಧ್ಯಮ ಪ್ರಾರಂಭವಾಗಿ 15 ವರ್ಷ ತುಂಬಿದ ಹಿನ್ನೆಲೆಯಲ್ಲಿ ವಾಹಿನಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ನವನಕ್ಷತ್ರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಟಿವಿ9 ಕಾರ್ಯವನ್ನು ಶ್ಲಾಘಿಸಿದರು.

ಸಮಾಜದ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ, ಅವರ ಸಾಧನೆಗೆ ಮನ್ನಣೆ ನೀಡುವ ಕಾರ್ಯವನ್ನು ಟಿವಿ 9 ಮಾಡುತ್ತಿದೆ. ಸಾಧಕರ ಸಾಧನೆಗೆ ಮೆಚ್ಚುಗೆಯನ್ನು, ಗೌರವನ್ನು ನೀಡಬೇಕು ಎಂಬ ಏಕೈಕ ಉದ್ದೇಶದಿಂದ ಈ ನವನಕ್ಷತ್ರ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಟಿವಿ9 ಸಂಸ್ಥೆಯವರು ಹೇಗೆ ಬೆಳೆದರೋ, ಹಾಗೇ, ಇನ್ನೊಂದು ಕ್ಷೇತ್ರದಲ್ಲಿ ಅವರಂತೆ ಬೆಳೆದು ಸಾಧನೆ ಮಾಡಿದವರನ್ನು, ಸಮಾಜಕ್ಕೆ ಪೂರಕವಾಗಿ ಕೆಲಸ ಮಾಡಿದವರನ್ನು ಗುರುತಿಸಿ ಅವರಿಗೆ ಸನ್ಮಾನ ಮಾಡುತ್ತಿರುವುದು ನಿಜಕ್ಕೂ ಒಳ್ಳೆಯ ಕೆಲಸ ಎಂದು ಶ್ಲಾಘಿಸಿದರು. ಒಳ್ಳೆಯ ಕೆಲಸ, ಸಾಧನೆ ಮಾಡಿದವರನ್ನು ಬೆನ್ನು ತಟ್ಟುವಂಥ ಕೆಲಸ ಮಾಡಿದಾಗ ಸಮಾಜದಲ್ಲಿ ಒಂದು ಸಂಚಲನ ಮೂಡಿಸಿದಂತಾಗುತ್ತದೆ. ಅಂತೆಯೇ ಈ ನವನಕ್ಷತ್ರ ಕಾರ್ಯಕ್ರಮ ನಮ್ಮ ಸಮಾಜದಲ್ಲಿ ಒಂದು ಸಂಚಲನ ಮೂಡಿಸುತ್ತದೆ ಎಂದು ಅಶ್ವತ್ಥ ನಾರಾಯಣ್ ಹೇಳಿದರು.

ಸರ್ಕಾರಗಳ ಮೂಲಕ, ಕಾರ್ಯಾಂಗ, ನ್ಯಾಯಾಂಗಗಳ ಮೂಲಕ ಹಲವು ಹಂತದ ಕಾರ್ಯಗಳು ಆಗುತ್ತಿರುತ್ತವೆ. ಇವೆಲ್ಲವುಗಳ ಮಧ್ಯೆ ಸಾಕಷ್ಟು ಸವಾಲುಗಳು, ಸುಧಾರಣೆಗಳು, ಗೊಂದಲಗಳು ಉಂಟಾಗುತ್ತವೆ. ಇವುಗಳನ್ನು ಬಹಳಷ್ಟು ಪರಿಣಾಮಕಾರಿಯಾಗಿ ಪ್ರತಿಯೊಬ್ಬ ವ್ಯಕ್ತಿಗೂ ತಲುಪಿಸುವ ಕೆಲಸವನ್ನು ಟಿವಿ 9 ಅತ್ಯುತ್ತಮವಾಗಿ ಮಾಡುತ್ತಿದೆ. ನಮ್ಮ ಸಮಾಜದ ಪ್ರತಿಯೊಬ್ಬ ವ್ಯಕ್ತಿಯ, ಜನರ ಭಾವನೆ ಮತ್ತು ಧ್ವನಿಗೆ ಶಕ್ತಿಯನ್ನು ಕೊಟ್ಟು, ಪ್ರಜಾಪ್ರಭುತ್ವವನ್ನು ಬಹಳ ಉತ್ತಮವಾಗಿ ಬೆಳೆಯಲು ಮೂಲ ಕಾರಣವಾಗಿದ್ದು ಟಿವಿ 9. ಹೀಗಿರುವ ಟಿವಿ 9 ಬಗ್ಗೆ ನಮಗೆ ನಿಜಕ್ಕೂ ಹೆಮ್ಮೆಯಿದೆ. ಇದರ ಸಾಧನೆ ಮತ್ತು ಕಾರ್ಯ ಇನ್ನೂ ಹೆಚ್ಚಿನ ರೀತಿಯಲ್ಲಿ, ಪ್ರಜಾಪ್ರಭುತ್ವಕ್ಕೆ ಪೂರಕವಾಗಿ ಮುನ್ನಡೆಯಲಿ ಎಂದು ಅಶ್ವತ್ಥ್ ನಾರಾಯಣ್ ಹಾರೈಸಿದರು.

ಇದನ್ನೂ ಓದಿ: Rashmika Mandanna: ನಟಿ ರಶ್ಮಿಕಾ ಮಂದಣ್ಣಗೆ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ

Published On - 5:09 pm, Tue, 4 January 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ