AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಯುಸಿ ಪಾಸಾದವರೆಲ್ಲರೂ ಸಿಇಟಿ ಬರೆಯಬಹುದು, ಅಕ್ಟೋಬರ್ ಮೊದಲ ವಾರದಲ್ಲಿ ಪದವಿ ತರಗತಿಗೆ ದಾಖಲಾತಿ: ಡಿಸಿಎಂ ಅಶ್ವತ್ಥ್ ನಾರಾಯಣ

ವಿಶ್ವವಿದ್ಯಾಲಯಗಳಲ್ಲಿ ಗುಣಮಟ್ಟ ಹೆಚ್ಚಿಸುವ ಬಗ್ಗೆಯೂ ವಿಸಿಗಳಿಗೆ ಸೂಚಿಸಿದ್ದೇನೆ. ಬಿಎಸ್ಸಿ ಕೋರ್ಸ್‌ಗೆ ಈ ಬಾರಿ ಸಿಇಟಿ ಅಂಕ ಪರಿಗಣಿಸುವುದಿಲ್ಲ. ಯಾವ ಯುನಿವರ್ಸಿಟಿ ಗಳಲ್ಲಿ ಪದವಿ ಕೋರ್ಸ್ ಗಳಿಗೆ ಪರೀಕ್ಷೆ ನಡೆದಿಲ್ಲ ಅವುಗಳ ಮಾಹಿತಿ ಪಡೆದುಕೊಂಡಿದ್ದೇವೆ: ಡಾ.ಅಶ್ವತ್ಥ್ ನಾರಾಯಣ

ಪಿಯುಸಿ ಪಾಸಾದವರೆಲ್ಲರೂ ಸಿಇಟಿ ಬರೆಯಬಹುದು, ಅಕ್ಟೋಬರ್ ಮೊದಲ ವಾರದಲ್ಲಿ ಪದವಿ ತರಗತಿಗೆ ದಾಖಲಾತಿ: ಡಿಸಿಎಂ ಅಶ್ವತ್ಥ್ ನಾರಾಯಣ
ಡಿಸಿಎಂ ಅಶ್ವತ್ಥನಾರಾಯಣ
TV9 Web
| Edited By: |

Updated on:Jun 15, 2021 | 5:25 PM

Share

ಬೆಂಗಳೂರು: ಈವರ್ಷ ಪಿಯುಸಿ ಪಾಸಾದವರೆಲ್ಲರೂ ಸಿಇಟಿ ಬರೆಯಬಹುದು ಎಂದು ಬೆಂಗಳೂರಿನಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ ​ ತಿಳಿಸಿದರು. ಅಕ್ಟೋಬರ್‌ನಿಂದ ಪದವಿ ತರಗತಿಗಳ ಹೊಸ ಶೈಕ್ಷಣಿಕ ವರ್ಷ ಆರಂಭವಾಗಲಿದ್ದು, ಎಲ್ಲ ವಿವಿಗಳ 2021-22ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆದಿದೆ. ಪದವಿ ಹಂತದ ಶೈಕ್ಷಣಿಕ ವರ್ಷದ ಆರಂಭಕ್ಕೆ ಸಿದ್ಧತೆ ನಡೆಸಬೇಕು. ಮೊದಲ ವರ್ಷದ ಪದವಿಗೆ ಅಕ್ಟೋಬರ್‌ ಮೊದಲ ವಾರದಿಂದಲೇ ದಾಖಲಾತಿ ಆರಂಭಕ್ಕೆ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ಸೂಚನೆ ನೀಡಿದರು.

ಬಿಎಸ್ಸಿ ಕೋರ್ಸ್‌ಗೆ ಈ ಬಾರಿ ಸಿಇಟಿ ಅಂಕ ಪರಿಗಣಿಸುವುದಿಲ್ಲ. ಯಾವ ಯುನಿವರ್ಸಿಟಿ ಗಳಲ್ಲಿ ಪದವಿ ಕೋರ್ಸ್ ಗಳಿಗೆ ಪರೀಕ್ಷೆ ನಡೆದಿಲ್ಲವೋ ಅವುಗಳ ಮಾಹಿತಿ ಪಡೆದುಕೊಂಡಿದ್ದೇವೆ. ರೆಗ್ಯುಲರ್ ಸೆಮಿಸ್ಟರ್ ಕೂಡ ರೆಗ್ಯುಲರ್ ಟೈಂ ಟೇಬಲ್ ಪ್ರಕಾರವೇ ನಡೆಸಬೇಕಾ ಎಂಬ ಬಗ್ಗೆ ಕೂಡ ಚರ್ಚೆ ಮಾಡಿದ್ದೇವೆ ಎಂದು ಅವರು ಮಾಹಿತಿ ನೀಡಿದರು. ಕೊವಿಡ್​ ಕಾರಣಕ್ಕೆ ಈ ವರ್ಷ ಪಿಯುಸಿಯ ಎಲ್ಲ ವಿದ್ಯಾರ್ಥಿಗಳೂ ತೇರ್ಗಡೆ ಹೊಂದಿದ್ದಾರೆ. ಹೀಗಾಗಿ ವಿವಿಧ ಕೋರ್ಸ್​​ಗಳಿಗೆ ಬಹಳ ಬೇಡಿಕೆ ಬರುತ್ತಿದೆ. ವಿಶ್ವವಿದ್ಯಾಲಯಗಳಿಗೆ ಇದೊಂದು ಸುವರ್ಣಾವಕಾಶವಾಗಿದ್ದು4 ವರ್ಷದ ಪದವಿ ತರಗತಿ ಆರಂಭ ಮಾಡುವ ಮೂಲಕ ಪದವಿ ವ್ಯಾಸಂಗದ ಅಭಿಲಾಶೆಯುಳ್ಳವರನ್ನು ಸೇರಿಸಿಕೊಳ್ಳಿ ಎಂದು ಉಪ ಮುಖ್ಯಮಂತ್ರಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್​ ನಾರಾಯಣ ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಸೂಚಿಸಿದರು.

ಜಾಗತಿಕ ಮಟ್ಟದಲ್ಲಿ ವಿದ್ಯಾರ್ಥಿಗಳು ಪೈಪೋಟಿ ನಡೆಸಬೇಕಾದರೆ ಕಲಿಕೆ ಮತ್ತು ಬೋಧನೆಯಲ್ಲಿ ಗುಣಮಟ್ಟ ಇರಬೇಕು ಎಂಬ ಬಗ್ಗೆ ವಿಸ್ತೃತವಾಗಿ ಕುಲಪತಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ. ವಿದ್ಯಾರ್ಥಿಗಳು ತಂತ್ರಜ್ಞಾನ ಬಳಸಿಕೊಂಡು ವಿದ್ಯಾಭ್ಯಾಸ ನಡೆಸುವ ನಿಟ್ಟಿನಲ್ಲಿ ಎಲ್ಲರಿಗೂ ಟ್ಯಾಬ್‌ ನೀಡಲಾಗುತ್ತಿದೆ ಸ್ಮಾರ್ಟ್‌ ಕ್ಲಾಸ್‌ಗಳು ಶುರುವಾಗುತ್ತಿವೆ. ಈಗಾಗಲೇ ಸಮಗ್ರ ಕಲಿಕಾ ನಿರ್ವಹಣಾ ವ್ಯವಸ್ಥೆ ಜಾರಿಗೆ ಬಂದಿದೆ. ಮುಂದಿನ ದಿನಗಳಲ್ಲಿ ಏಕೀಕೃತ ವಿವಿಕಾಲೇಜು ನಿರ್ವಹಣಾ ವ್ಯವಸ್ಥೆ ಅನುಸಂಧಾನಗೊಳಿಸಲಾಗುವುದು. ಪ್ರತ್ಯೇಕ ಡಿಜಿಟಲ್‌ ಪೋರ್ಟಲ್‌ ಸಿದ್ಧವಾಗುತ್ತಿದ್ದು, ಅದನ್ನು ಇಗವರ್ನೆನ್ಸ್‌ ಇಲಾಖೆ ಅಭಿವೃದ್ಧಿಪಡಿಸುತ್ತಿದೆ. ಜೂನ್‌ 25ರಿಂದ ಪ್ರಾಯೋಗಿಕವಾಗಿ ಇದನ್ನು ಬಳಸಲು ಸರಕಾರದಿಂದ ಅನುಮತಿ ದೊರೆತಿದೆ. ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ಎಲ್ಲ ಚಟುವಟಿಕೆಗಳು ಇನ್ನು ಮುಂದೆ ಇಆಫೀಸ್‌ ಮೂಲಕವೇ ನಡೆಯುತ್ತವೆ. ಯಾವುದೇ ಕಾಗದ ಪತ್ರಗಳಿಗೆ ಅವಕಾಶ ನೀಡಲಾಗುವುದಿಲ್ಲ ಎಂದು ಅವರು ಸೂಚಿಸಿದರು.

ರಾಜೀವ ಗಾಂಧೀ ಹಂಗಾಮಿ ಉಪ ಕುಲಪತಿ ನೇಮಕ ವಿಚಾರಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ಅದು ರಾಜ್ಯಪಾಲರಿಂದ ಆದ ನೇಮಕವಾಗಿದ್ದು, ಕಾನೂನು ಚೌಕಟ್ಟು ಬಿಟ್ಟು ಯಾರೂ ಏನೂ ಮಾಡುವುದಕ್ಕೆ ಆಗೋದಿಲ್ಲ. ಇದಕ್ಕೂ ನನಗೂ ಯಾವುದೇ ಸಂಬಂಧವೇ ಇಲ್ಲ. ಎಲ್ಲವೂ ಕೂಡ ಪಾರದರ್ಶಕವಾಗಿ ನಡೆಯುತ್ತದೆ. ರಾಜೀವ ಗಾಂಧಿ ಯುನಿವರ್ಸಿಟಿಯಲ್ಲೂ ಯಾವುದೂ ವೈಯಕ್ತಿಕ ವಿಚಾರಗಳು ಬರುವುದಿಲ್ಲ. ಕಾನೂನು ಪ್ರಕಾರವೇ ಎಲ್ಲ ನಡೆದಿದೆ ಎಂದು ಅವರು ಸ್ಪಷ್ಟಪಡಿಸಿದರು.

ಇದನ್ನೂ ಓದಿ: KCET Exam 2021: ಇಂದಿನಿಂದ ಸಿಇಟಿ​ ಪರೀಕ್ಷೆಗೆ ನೋಂದಣಿ ಪ್ರಕ್ರಿಯೆ ಆರಂಭ; ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಎಲ್ಲಿ? ಇಲ್ಲಿದೆ ಮಾಹಿತಿ

CET-KSET Free Coaching: ವಿದ್ಯಾರ್ಥಿಗಳೇ ಗಮನಿಸಿ: ಸಿಇಟಿ, ಕೆಸಿಇಟಿ ಪರೀಕ್ಷೆಗಳಿಗೆ ಉಚಿತ ತರಬೇತಿ; ಎಲ್ಲಿ ಎಂಬ ವಿವರ ಇಲ್ಲಿದೆ

(DCM Ashwath Narayan says degree course admission will begin in the first week of October and all puc students can write CET Exams)

Published On - 5:21 pm, Tue, 15 June 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?