AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ವಿರುದ್ಧ ಮುಗಿಬಿದ್ದ ಕಮಲ ತ್ರಿಮೂರ್ತಿಗಳು

ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣೆ ಸಮರ ಜೋರಾಗಿಯೇ ನಡೆಯುತ್ತಿದೆ. ಆಡಳಿತ ಪಕ್ಷದ ನಾಯಕರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಮುಗಿಬಿದ್ದಿದ್ದಾರೆ. ಸಿದ್ದರಾಮಯ್ಯಗೆ ಟಿಪ್ಪು ಭೂತ ಹಿಡ್ಕೊಂಡಿದೆ. ಮೊನ್ನೆ ಕೆ.ಆರ್.ಪೇಟೆಯಲ್ಲಿ ಹೆಣ್ಣು ಮಗಳು ನಾಮ ಇಡಲು ಹೋದ್ರೆ ಬೇಡ ಅಂದಿದ್ದಾರೆ. ಟಿಪ್ಪು ಭೂತದಿಂದ ಹೊರಗೆ ಬಂದರೆ ಸಿದ್ದರಾಮಯ್ಯ ಆಗ್ತಾರೆ. ಇಲ್ಲದಿದ್ರೆ ‘ಟಿಪ್ಪು ಸಿದ್ದರಾಮಯ್ಯ’ ಆಗುತ್ತಾರೆ ಎಂದು ಕಂದಾಯ ಸಚಿವ ಆರ್​.ಅಶೋಕ್ ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯ ಈಗ ಏಕಾಂಗಿ: ಸಿದ್ದರಾಮಯ್ಯ ಮಾನಸಿಕ ಸ್ಥಿಮಿತ ಕಳೆದುಕೊಳ್ಳುತ್ತಿದ್ದಾರೆ. ಅವರ ಹಿಂದೆ ಯಾವ ನಾಯಕರೂ ಇಲ್ಲ. […]

ಸಿದ್ದರಾಮಯ್ಯ ವಿರುದ್ಧ ಮುಗಿಬಿದ್ದ ಕಮಲ ತ್ರಿಮೂರ್ತಿಗಳು
ಸಾಧು ಶ್ರೀನಾಥ್​
|

Updated on:Nov 22, 2019 | 7:26 PM

Share

ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣೆ ಸಮರ ಜೋರಾಗಿಯೇ ನಡೆಯುತ್ತಿದೆ. ಆಡಳಿತ ಪಕ್ಷದ ನಾಯಕರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಮುಗಿಬಿದ್ದಿದ್ದಾರೆ. ಸಿದ್ದರಾಮಯ್ಯಗೆ ಟಿಪ್ಪು ಭೂತ ಹಿಡ್ಕೊಂಡಿದೆ. ಮೊನ್ನೆ ಕೆ.ಆರ್.ಪೇಟೆಯಲ್ಲಿ ಹೆಣ್ಣು ಮಗಳು ನಾಮ ಇಡಲು ಹೋದ್ರೆ ಬೇಡ ಅಂದಿದ್ದಾರೆ. ಟಿಪ್ಪು ಭೂತದಿಂದ ಹೊರಗೆ ಬಂದರೆ ಸಿದ್ದರಾಮಯ್ಯ ಆಗ್ತಾರೆ. ಇಲ್ಲದಿದ್ರೆ ‘ಟಿಪ್ಪು ಸಿದ್ದರಾಮಯ್ಯ’ ಆಗುತ್ತಾರೆ ಎಂದು ಕಂದಾಯ ಸಚಿವ ಆರ್​.ಅಶೋಕ್ ವ್ಯಂಗ್ಯವಾಡಿದ್ದಾರೆ.

ಸಿದ್ದರಾಮಯ್ಯ ಈಗ ಏಕಾಂಗಿ: ಸಿದ್ದರಾಮಯ್ಯ ಮಾನಸಿಕ ಸ್ಥಿಮಿತ ಕಳೆದುಕೊಳ್ಳುತ್ತಿದ್ದಾರೆ. ಅವರ ಹಿಂದೆ ಯಾವ ನಾಯಕರೂ ಇಲ್ಲ. ಈಗ ಸಿದ್ದರಾಮಯ್ಯ ಏಕಾಂಗಿ. ಹೀಗಾಗಿ ಹತಾಶರಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ವಾಗ್ದಾಳಿ ನಡೆಸಿದ್ದಾರೆ. ಗೊಬ್ಬರ ಸಚಿವನೆಂದು ಸಿದ್ದರಾಮಯ್ಯ ನನ್ನನ್ನು ಅಪಮಾನಿಸಿದ್ದಾರೆ. ರೈತರ ಜೀವವಾದ ಗೊಬ್ಬರಕ್ಕೆ ಅಪಮಾನಿಸಿದ್ದಾರೆ. 80 ಸಾವಿರ ಕೋಟಿಯಷ್ಟು ಹಣ ಗೊಬ್ಬರ ಇಲಾಖೆ ನಿರ್ವಹಣೆ ಮಾಡುತ್ತೆ. ಸಿದ್ದರಾಮಯ್ಯನವರ ಅರ್ಧ ಬಜೆಟ್​​ನಷ್ಟು ನನ್ನ ಇಲಾಖೆ ನೀಡುತ್ತೆ ಎಂದು ಕಿಡಿ ಕಾರಿದ್ದಾರೆ.

ಸಿದ್ದರಾಮಯ್ಯ ಜತೆ ಒಬ್ಬನೇ ಒಬ್ಬ ಟಾಪ್​ ಲೀಡರ್​ ಇದ್ದಾರಾ? ಜಿ.ಪರಮೇಶ್ವರ್​ ಎಲ್ಲಿ? ಹರಿಪ್ರಸಾದ್​ ಎಲ್ಲಿ? ಮುನಿಯಪ್ಪ ಎಲ್ಲಿ? ಮಲ್ಲಿಕಾರ್ಜುನ ಖರ್ಗೆ ಎಲ್ಲಿ? ಇವರು ಯಾರೂ ಕೂಡ ಸಿದ್ದರಾಮಯ್ಯ ಜೊತೆಗಿಲ್ಲ. ಏಕಾಂಗಿ ಸಿದ್ದರಾಮಯ್ಯರನ್ನ ಅವರದೇ ಕ್ಷೇತ್ರದಲ್ಲಿ ಸೋಲಿಸಿಬಿಟ್ಟಿದ್ದೇವೆ. ಸಿದ್ದರಾಮಯ್ಯ ಅವರ ಬಾಯಿ ಸರಿಯಿಲ್ಲವೆಂದು ಭಯವಷ್ಟೇ. ಅವರ ರಾಜಕೀಯಕ್ಕೆ ನಾವು ಹೆದರುವುದಿಲ್ಲ. ಆದ್ರೆ ಬಾಯಿಗೆ ಬಂದದ್ದು ಮಾತನಾಡುವುದನ್ನು ಸಿದ್ದರಾಮಯ್ಯ ಬಿಡಲಿ ಎಂದರು.

ಸಿದ್ದು ವಿರುದ್ಧ ಸ್ವಪಕ್ಷದವರೇ ಸಮರ: ಸಿದ್ದರಾಮಯ್ಯ ಅವರನ್ನು ಏಕಮೇವ ನಾಯಕ ಮಾಡಲು ಸಾಧ್ಯವಿಲ್ಲ ಅಂತಾ ಅವರ ಪಕ್ಷದವರು ತೀರ್ಮಾನಿಸಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್‌ನವರೇ ಸಮರ ಸಾರಿದ್ದಾರೆ. 15 ಕ್ಷೇತ್ರದ ಉಪಚುನಾವಣೆಯಲ್ಲಿ ಸಿದ್ದರಾಮಯ್ಯ ಒಂದು ಕ್ಷೇತ್ರವನ್ನೂ ಗೆಲ್ಲಲ್ಲ ಎಂದು ಡಿಸಿಎಂ ಸಿ.ಎನ್.ಅಶ್ವತ್ಥ್​ ನಾರಾಯಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈತ್ರಿ ಸರ್ಕಾರದ ಬಳಿ ಅಧಿಕಾರ, ಹಣ ಎಲ್ಲವೂ ಇತ್ತು. ಆದ್ರೆ ಅಭಿವೃದ್ಧಿ ಕೆಲಸಗಳು ಆಗಲಿಲ್ಲ. ಹೀಗಾಗಿ ಶಾಸಕರು ರಾಜೀನಾಮೆ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಅವರೇ ಆಪರೇಷನ್ ಆಗಿ ಬೇರೆ ಪಕ್ಷದಿಂದ ಬಂದಿದ್ದಾರೆ. ಹಿಂಸೆಕೊಟ್ಟು ಶಾಸಕರನ್ನು ಹೊರಗೆ ಹೋಗುವಂತೆ ಮಾಡಿದ್ದಾರೆ. ಅವರು 5 ವರ್ಷ ನಿದ್ದೆ ಮಾಡೋದು ಬಿಟ್ಟು ಏನು ಮಾಡಿಲ್ಲ. ಈಗ ಸಿದ್ದರಾಮಯ್ಯ ವಿರೋಧ ಪಕ್ಷದಲ್ಲಿ ಆರಾಮಾಗಿ ಇರಲಿ. ನಾವು ಸುಭದ್ರವಾಗಿ ಸರ್ಕಾರ ನಡೆಸುತ್ತೇವೆ ಎಂದರು.

Published On - 7:21 pm, Fri, 22 November 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ