AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶತ್ರು ಸಂಹಾರ ಪೂಜೆ ಬಗ್ಗೆ ಸ್ಪಷ್ಟನೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್

ನಾನು ದೇವಿ ರಾಜರಾಜೇಶ್ವರಿಯ ಭಕ್ತನಾಗಿದ್ದು, ಈ ದೇವಸ್ಥಾನದಲ್ಲಿ ಶತ್ರು ಸಂಹಾರ ಪೂಜೆ ಮಾಡುವುದಿಲ್ಲ ಎನ್ನುವ ಅರಿವಿದೆ. ನನ್ನ ಹೇಳಿಕೆಯನ್ನು ಕೆಲವರು ತಪ್ಪಾಗಿ ಗ್ರಹಿಸಿದ್ದು, ದೇವಸ್ಥಾನದಿಂದ 15 ಕಿ.ಮೀ. ದೂರದಲ್ಲಿರುವ ಖಾಸಗಿ ಸ್ಥಳದಲ್ಲಿ ಯಾಗ ನಡೆದಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್​​ ಸ್ಪಷ್ಟನೆ ನೀಡಿದ್ದಾರೆ. ಟ್ವೀಟ್​ ಮಾಡಿರುವ ಅವರು ವಿಷಯವನ್ನು ಸಂದರ್ಭದಿಂದ ಹೊರಗಿಟ್ಟು ತಪ್ಪಾಗಿ ಅರ್ಥೈಸಿಕೊಳ್ಳಬೇಡಿ ಎಂದಿದ್ದಾರೆ.

ಶತ್ರು ಸಂಹಾರ ಪೂಜೆ ಬಗ್ಗೆ ಸ್ಪಷ್ಟನೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್
ಶತ್ರು ಸಂಹಾರ ಪೂಜೆ ಬಗ್ಗೆ ಸ್ಪಷ್ಟನೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್
ಗಂಗಾಧರ​ ಬ. ಸಾಬೋಜಿ
|

Updated on: May 31, 2024 | 9:50 PM

Share

ಬೆಂಗಳೂರು, ಮೇ 31: ರಾಜ್ಯ ರಾಜಕೀಯದಲ್ಲಿ ಮತ್ತೆ ಮಾಟ ಮಂತ್ರ ತಂತ್ರದ ಮಾತು ಕೇಳಿಬರುತ್ತಿದೆ. ಸಿಎಂ, ಡಿಸಿಎಂ ಕಟ್ಟಿ ಹಾಕಲು ಮಹಾಯಾಗ (Mahayaga) ನಡೆದಿದೆಯಂತೆ. ಹೀಗೊಂದು ಹೊಸ ಬಾಂಬ್​ ಅನ್ನು ನಿನ್ನೆ ಡಿಕೆ ಶಿವಕುಮಾರ್ (DK Shivakumar)​ ಸಿಡಿಸಿದ್ದರು. ಕೇವಲ ನಾನೊಂದೇ ಅಲ್ಲ, ಸಿದ್ದರಾಮಯ್ಯರನ್ನ ಸಹ ಟಾರ್ಗೆಟ್ ಮಾಡಲಾಗಿದೆ ಎಂದಿದ್ದರು. ಆದರೆ ಕೇರಳ ಕಣ್ಣೂರಿನ ರಾಜರಾಜೇಶ್ವರ ದೇವಾಲಯದಲ್ಲಿ ಶತ್ರು ಸಂಹಾರ ಪೂಜೆ ಮಾಡಲಾಗಿದೆ ಎಂದು ಕೆಲವರು ತಪ್ಪು ಗ್ರಹಿಕೆ ಮಾಡಿಕೊಂಡಿದ್ದು, ದೇವಸ್ಥಾನದಿಂದ 15 ಕಿ.ಮೀ. ದೂರದಲ್ಲಿರುವ ಖಾಸಗಿ ಸ್ಥಳದಲ್ಲಿ ಯಾಗ ನಡೆದಿದೆ ಎಂದು ಡಿಕೆ ಶಿವಕುಮಾರ್​ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತಾಗಿ ಟ್ವೀಟ್​ ಮಾಡಿರುವ ಡಿಕೆ ಶಿವಕುಮಾರ್​, ‘ನಾನು ದೇವಿ ರಾಜರಾಜೇಶ್ವರಿಯ ಭಕ್ತನಾಗಿದ್ದು, ಈ ದೇವಸ್ಥಾನದಲ್ಲಿ ಶತ್ರು ಸಂಹಾರ ಪೂಜೆ ಮಾಡುವುದಿಲ್ಲ ಎನ್ನುವ ಅರಿವಿದೆ. ನನ್ನ ಹೇಳಿಕೆಯನ್ನು ಕೆಲವರು ತಪ್ಪಾಗಿ ಗ್ರಹಿಸಿದ್ದು, ದೇವಸ್ಥಾನದಿಂದ 15 ಕಿ.ಮೀ. ದೂರದಲ್ಲಿರುವ ಖಾಸಗಿ ಸ್ಥಳದಲ್ಲಿ ಯಾಗ ನಡೆದಿದೆ ಎಂದು ಸ್ಪಷ್ಟಪಡಿಸುತ್ತೇನೆ’ ಎಂದಿದ್ದಾರೆ.

ಡಿಕೆ ಶಿವಕುಮಾರ್ ಟ್ವೀಟ್​ 

‘ಯಾಗ ನಡೆದಿರುವ ಸ್ಥಳದ ಬಗ್ಗೆ ಮಾಹಿತಿ ನೀಡಲಷ್ಟೇ ನಾನು ದೇಗುಲದ ಹೆಸರನ್ನು ಉಲ್ಲೇಖಿಸಿದ್ದೆ. ಕೆಲವು ದಿನಗಳ ಹಿಂದೆ ತಾಯಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ‌ಭೇಟಿ‌ ನೀಡಿ ದೇವಿಯ ಆಶೀರ್ವಾದ ಪಡೆದಿದ್ದೆ. ವಿಷಯಗಳನ್ನು ಸಂದರ್ಭದಿಂದ ಹೊರಗಿಟ್ಟು ಅವುಗಳನ್ನು ತಪ್ಪಾಗಿ ಅರ್ಥೈಸಿಕೊಳ್ಳಬೇಡಿ’ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕಪ್ಪು ಬಣ್ಣದ ಕುರಿ, ಮೇಕೆ ಬಲಿ: ಕೇರಳದಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ ವಿರುದ್ಧ ಪಂಚಬಲಿ ಪೂಜೆ

ಶತ್ರು ಸಂಹಾರ ಪೂಜೆಯಲ್ಲಿ 21 ಕುರಿ, 3 ಎಮ್ಮೆ, 3 ಹಂದಿ, ಕೋಳಿಗಳನ್ನ ಬಲಿ ಕೊಡಲಾಗ್ತಾ ಇದೆ. ಇದನ್ನ ಯಾರು ಮಾಡಿಸ್ತಾ ಇದಾರೆ ಎಂಬುದು ನನಗೆ ಗೊತ್ತಿದೆ. ನಮ್ಮನ್ನ ತುಳಿಯಲು ಪ್ರಯತ್ನ ಮಾಡ್ತಿದ್ದಾರೆ. ನಾವು ನಂಬಿದ ದೇವರು ನಮ್ಮನ್ನ ಕಾಪಾಡುತ್ತಾನೆ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ