AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವಾಗ ನಿಮ್ಮ ಖಾತೆಗೆ ಜಮೆಯಾಗಲಿದೆ ಗೃಹಲಕ್ಷ್ಮಿ ಹಣ? ಡಿಕೆ ಶಿವಕುಮಾರ್ ಹಿಂಟ್ಸ್​​

ಮಹಿಳಾ ಸಬಲೀಕರಣ ಉದ್ದೇಶದಿಂದ ಕರ್ನಾಟಕ ಸರ್ಕಾರ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಐದು ಗ್ಯಾರಂಟಿಗಳ ಪೈಕಿ ಒಂದಾದ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಮನೆ ಯಜಮಾನಿ ಖಾತೆಗೆ ಎರಡು ಸಾವಿರ ಜಮಾವಣೆಯಾಗುತ್ತದೆ. ಆದರೆ ಕಳೆದ ಎರಡು ತಿಂಗಳಿಂದ ಹಣ ಬಂದಿರಿಲ್ಲ. ಈ ಹಣ ಜಮಾವಣೆ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಿಗ್​ ಅಪ್ಡೇಟ್​ ನೀಡಿದ್ದಾರೆ.

ಯಾವಾಗ ನಿಮ್ಮ ಖಾತೆಗೆ ಜಮೆಯಾಗಲಿದೆ ಗೃಹಲಕ್ಷ್ಮಿ ಹಣ? ಡಿಕೆ ಶಿವಕುಮಾರ್ ಹಿಂಟ್ಸ್​​
ಗೃಹಲಲಕ್ಷ್ಮಿ, ಡಿಕೆ ಶಿವಕುಮಾರ್​​
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Aug 06, 2024 | 10:05 AM

Share

ಬೆಂಗಳೂರು, ಆಗಸ್ಟ್​ 06: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್​ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ (5 Guarantee) ಯೋಜನೆಗಳ ಪೈಕಿ ಗೃಹಲಕ್ಷ್ಮಿ (Gruha Laxmi) ಯೋಜನೆಯೂ ಒಂದು. ಮಹಿಳಾ ಸಬಲೀಕರಣ ಭಾಗವಾಗಿ ಕಾಂಗ್ರೆಸ್​ ಸರ್ಕಾರ ಗೃಹಲಕ್ಷ್ಮಿ ಯೋಜನೆ ಜಾರಿಗೆ ತಂದಿದೆ. ಈ ಯೋಜನೆ ಅಡಿಯಲ್ಲಿ ಸರ್ಕಾರ ಮನೆಯ ಯಜಮಾನಿ ಖಾತೆಗೆ 2 ಸಾವಿರ ರೂ. ಜಮೆ ಮಾಡುತ್ತದೆ. ಕಳೆದ 10 ತಿಂಗಳಿಂದ ಹಣ ಜಮೆಯಾಗಿದ್ದು, ಜೂನ್​ ಮತ್ತು ಜುಲೈನ ಹಣ ಜಮಾವಣೆಗೊಂಡಿಲ್ಲ. ಈ ಎರಡು ತಿಂಗಳ ಹಣ ಜಮಾವಣೆ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar)​ ಬಿಗ್​ ಅಪ್ಡೇಟ್​ ನೀಡಿದ್ದಾರೆ.

ಮದ್ದೂರಿನಲ್ಲಿ ನಡೆದ ಜನಾಂದೋಲನ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಭಾಷಣ ಮಾಡುತ್ತ, ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ಹಣ ಬರ್ತಿದೆಯೋ? ಇಲ್ವೋ? ಎಂದು ಪ್ರಶ್ನಿಸಿದರು. ಆಗ ವೇದಿಕೆ ಮುಂಭಾಗದಲ್ಲಿದ್ದ ಮಹಿಳೆಯರು ಬರುತ್ತಿಲ್ಲ, ಬರುತ್ತಿಲ್ಲ ಎಂದು ಕೂಗಿದರು. ಆಗ ಡಿಕೆ ಶಿವಕುಮಾರ್​ ಬರುತ್ತೆ ಬರುತ್ತೆ ಕಾಯುತ್ತಿರಿ. ಕಳೆದ ಒಂದು, ಎರಡು ತಿಂಗಳ ಗೃಹಲಕ್ಷ್ಮಿ ಹಣ ಮಾತ್ರ ನಿಮ್ಮ ಖಾತೆ ಜಮೆ ಆಗಿಲ್ಲ. ಅನುದಾನ ಬಿಡುಗಡೆಯಾಗಿದೆ. ಶ್ರೀಘವೇ ನಿಮ್ಮ ಖಾತೆಗೆ ಹಣ ಜಮೆಯಾಗಲಿದೆ ಎಂದರು.

ಇದನ್ನೂ ಓದಿ: ಗೃಹಜ್ಯೋತಿ ಯೋಜನೆಯ 8,844 ಕೋಟಿ ರೂ. ಬಿಲ್ ಪಾವತಿಸಿದ ಸರ್ಕಾರ

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಸಂದರ್ಭದಲ್ಲಿ ಏಪ್ರಿಲ್​​ ಮತ್ತು ಮೇ ತಿಂಗಳ ಹಣವನ್ನು ಒಮ್ಮೆಲೆ ಪಾವತಿ ಮಾಡಲಾಗಿತ್ತು. ಇದೀಗ ಕಾರಣಾಂತರಗಳಿಂದ ಜೂನ್​ ಮತ್ತು ಜುಲೈ ತಿಂಗಳ ಹಣ ಪಾವತಿ ಬಾಕಿ ಉಳಿದಿದೆ. ಈ ಹಣ ಅಗಸ್ಟ್​ ವಾರಾಂತ್ಯದೊಳಗೆ ಜಮಾವಣೆಯಾಗಲಿದೆ ಎಂದು ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ. ಗೃಹಲಕ್ಷ್ಮಿ ಹಣ ನೇರ ಲಾಭ ವರ್ಗಾವಣೆ (DBT) ಮೂಲಕ ಮನೆಯ ಯಜಮಾನಿ ಖಾತೆಗೆ ತಲಪುತ್ತದೆ. ಈಗಾಗಲೆ 10 ತಿಂಗಳ ಹಣ ನೀಡಲಾಗಿದೆ. ಒಟ್ಟು 20 ಸಾವಿರ ರೂ. ಫಲಾನುಭವಿಗಳ ಬ್ಯಾಂಕ್​ ಖಾತೆಗೆ ಜಮಾ ಮಾಡಲಾಗಿದೆ. ಇದೀಗ ಎರಡು ತಿಂಗಳ ಹಣ ಅಂದರೆ ಒಟ್ಟು 4 ಸಾವಿರ ರೂ. ಅನ್ನು ಫಲಾನುಭವಿಗಳ ಕೈ ಸೇರಲಿದೆ.

ಜೂನ್​ ಮತ್ತು ಜುಲೈ ತಿಂಗಳ ಹಣ ಜಮೆಯಾಗದಿದ್ದಕ್ಕೆ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಮಹಿಳೆಯರು ಇನ್ಮುಂದೆ ನಮಗೆ ಹಣ ಬರತ್ತೋ ಇಲ್ವೋ ಅಂತ ಚಿಂತಿತರಾಗಿದ್ದರು. ಆದರೆ ಇದೀಗ, ಈ ಚಿಂತೆ ದೂರವಾದಂತಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:04 am, Tue, 6 August 24

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ