AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವಾಗ ನಿಮ್ಮ ಖಾತೆಗೆ ಜಮೆಯಾಗಲಿದೆ ಗೃಹಲಕ್ಷ್ಮಿ ಹಣ? ಡಿಕೆ ಶಿವಕುಮಾರ್ ಹಿಂಟ್ಸ್​​

ಮಹಿಳಾ ಸಬಲೀಕರಣ ಉದ್ದೇಶದಿಂದ ಕರ್ನಾಟಕ ಸರ್ಕಾರ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಐದು ಗ್ಯಾರಂಟಿಗಳ ಪೈಕಿ ಒಂದಾದ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಮನೆ ಯಜಮಾನಿ ಖಾತೆಗೆ ಎರಡು ಸಾವಿರ ಜಮಾವಣೆಯಾಗುತ್ತದೆ. ಆದರೆ ಕಳೆದ ಎರಡು ತಿಂಗಳಿಂದ ಹಣ ಬಂದಿರಿಲ್ಲ. ಈ ಹಣ ಜಮಾವಣೆ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಿಗ್​ ಅಪ್ಡೇಟ್​ ನೀಡಿದ್ದಾರೆ.

ಯಾವಾಗ ನಿಮ್ಮ ಖಾತೆಗೆ ಜಮೆಯಾಗಲಿದೆ ಗೃಹಲಕ್ಷ್ಮಿ ಹಣ? ಡಿಕೆ ಶಿವಕುಮಾರ್ ಹಿಂಟ್ಸ್​​
ಗೃಹಲಲಕ್ಷ್ಮಿ, ಡಿಕೆ ಶಿವಕುಮಾರ್​​
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Aug 06, 2024 | 10:05 AM

Share

ಬೆಂಗಳೂರು, ಆಗಸ್ಟ್​ 06: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್​ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ (5 Guarantee) ಯೋಜನೆಗಳ ಪೈಕಿ ಗೃಹಲಕ್ಷ್ಮಿ (Gruha Laxmi) ಯೋಜನೆಯೂ ಒಂದು. ಮಹಿಳಾ ಸಬಲೀಕರಣ ಭಾಗವಾಗಿ ಕಾಂಗ್ರೆಸ್​ ಸರ್ಕಾರ ಗೃಹಲಕ್ಷ್ಮಿ ಯೋಜನೆ ಜಾರಿಗೆ ತಂದಿದೆ. ಈ ಯೋಜನೆ ಅಡಿಯಲ್ಲಿ ಸರ್ಕಾರ ಮನೆಯ ಯಜಮಾನಿ ಖಾತೆಗೆ 2 ಸಾವಿರ ರೂ. ಜಮೆ ಮಾಡುತ್ತದೆ. ಕಳೆದ 10 ತಿಂಗಳಿಂದ ಹಣ ಜಮೆಯಾಗಿದ್ದು, ಜೂನ್​ ಮತ್ತು ಜುಲೈನ ಹಣ ಜಮಾವಣೆಗೊಂಡಿಲ್ಲ. ಈ ಎರಡು ತಿಂಗಳ ಹಣ ಜಮಾವಣೆ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar)​ ಬಿಗ್​ ಅಪ್ಡೇಟ್​ ನೀಡಿದ್ದಾರೆ.

ಮದ್ದೂರಿನಲ್ಲಿ ನಡೆದ ಜನಾಂದೋಲನ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಭಾಷಣ ಮಾಡುತ್ತ, ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ಹಣ ಬರ್ತಿದೆಯೋ? ಇಲ್ವೋ? ಎಂದು ಪ್ರಶ್ನಿಸಿದರು. ಆಗ ವೇದಿಕೆ ಮುಂಭಾಗದಲ್ಲಿದ್ದ ಮಹಿಳೆಯರು ಬರುತ್ತಿಲ್ಲ, ಬರುತ್ತಿಲ್ಲ ಎಂದು ಕೂಗಿದರು. ಆಗ ಡಿಕೆ ಶಿವಕುಮಾರ್​ ಬರುತ್ತೆ ಬರುತ್ತೆ ಕಾಯುತ್ತಿರಿ. ಕಳೆದ ಒಂದು, ಎರಡು ತಿಂಗಳ ಗೃಹಲಕ್ಷ್ಮಿ ಹಣ ಮಾತ್ರ ನಿಮ್ಮ ಖಾತೆ ಜಮೆ ಆಗಿಲ್ಲ. ಅನುದಾನ ಬಿಡುಗಡೆಯಾಗಿದೆ. ಶ್ರೀಘವೇ ನಿಮ್ಮ ಖಾತೆಗೆ ಹಣ ಜಮೆಯಾಗಲಿದೆ ಎಂದರು.

ಇದನ್ನೂ ಓದಿ: ಗೃಹಜ್ಯೋತಿ ಯೋಜನೆಯ 8,844 ಕೋಟಿ ರೂ. ಬಿಲ್ ಪಾವತಿಸಿದ ಸರ್ಕಾರ

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಸಂದರ್ಭದಲ್ಲಿ ಏಪ್ರಿಲ್​​ ಮತ್ತು ಮೇ ತಿಂಗಳ ಹಣವನ್ನು ಒಮ್ಮೆಲೆ ಪಾವತಿ ಮಾಡಲಾಗಿತ್ತು. ಇದೀಗ ಕಾರಣಾಂತರಗಳಿಂದ ಜೂನ್​ ಮತ್ತು ಜುಲೈ ತಿಂಗಳ ಹಣ ಪಾವತಿ ಬಾಕಿ ಉಳಿದಿದೆ. ಈ ಹಣ ಅಗಸ್ಟ್​ ವಾರಾಂತ್ಯದೊಳಗೆ ಜಮಾವಣೆಯಾಗಲಿದೆ ಎಂದು ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ. ಗೃಹಲಕ್ಷ್ಮಿ ಹಣ ನೇರ ಲಾಭ ವರ್ಗಾವಣೆ (DBT) ಮೂಲಕ ಮನೆಯ ಯಜಮಾನಿ ಖಾತೆಗೆ ತಲಪುತ್ತದೆ. ಈಗಾಗಲೆ 10 ತಿಂಗಳ ಹಣ ನೀಡಲಾಗಿದೆ. ಒಟ್ಟು 20 ಸಾವಿರ ರೂ. ಫಲಾನುಭವಿಗಳ ಬ್ಯಾಂಕ್​ ಖಾತೆಗೆ ಜಮಾ ಮಾಡಲಾಗಿದೆ. ಇದೀಗ ಎರಡು ತಿಂಗಳ ಹಣ ಅಂದರೆ ಒಟ್ಟು 4 ಸಾವಿರ ರೂ. ಅನ್ನು ಫಲಾನುಭವಿಗಳ ಕೈ ಸೇರಲಿದೆ.

ಜೂನ್​ ಮತ್ತು ಜುಲೈ ತಿಂಗಳ ಹಣ ಜಮೆಯಾಗದಿದ್ದಕ್ಕೆ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಮಹಿಳೆಯರು ಇನ್ಮುಂದೆ ನಮಗೆ ಹಣ ಬರತ್ತೋ ಇಲ್ವೋ ಅಂತ ಚಿಂತಿತರಾಗಿದ್ದರು. ಆದರೆ ಇದೀಗ, ಈ ಚಿಂತೆ ದೂರವಾದಂತಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:04 am, Tue, 6 August 24

Follow Us
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು