ಯಾವಾಗ ನಿಮ್ಮ ಖಾತೆಗೆ ಜಮೆಯಾಗಲಿದೆ ಗೃಹಲಕ್ಷ್ಮಿ ಹಣ? ಡಿಕೆ ಶಿವಕುಮಾರ್ ಹಿಂಟ್ಸ್​​

ಮಹಿಳಾ ಸಬಲೀಕರಣ ಉದ್ದೇಶದಿಂದ ಕರ್ನಾಟಕ ಸರ್ಕಾರ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಐದು ಗ್ಯಾರಂಟಿಗಳ ಪೈಕಿ ಒಂದಾದ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಮನೆ ಯಜಮಾನಿ ಖಾತೆಗೆ ಎರಡು ಸಾವಿರ ಜಮಾವಣೆಯಾಗುತ್ತದೆ. ಆದರೆ ಕಳೆದ ಎರಡು ತಿಂಗಳಿಂದ ಹಣ ಬಂದಿರಿಲ್ಲ. ಈ ಹಣ ಜಮಾವಣೆ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಿಗ್​ ಅಪ್ಡೇಟ್​ ನೀಡಿದ್ದಾರೆ.

ಯಾವಾಗ ನಿಮ್ಮ ಖಾತೆಗೆ ಜಮೆಯಾಗಲಿದೆ ಗೃಹಲಕ್ಷ್ಮಿ ಹಣ? ಡಿಕೆ ಶಿವಕುಮಾರ್ ಹಿಂಟ್ಸ್​​
ಗೃಹಲಲಕ್ಷ್ಮಿ, ಡಿಕೆ ಶಿವಕುಮಾರ್​​

Updated on: Aug 06, 2024 | 10:05 AM

ಬೆಂಗಳೂರು, ಆಗಸ್ಟ್​ 06: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್​ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ (5 Guarantee) ಯೋಜನೆಗಳ ಪೈಕಿ ಗೃಹಲಕ್ಷ್ಮಿ (Gruha Laxmi) ಯೋಜನೆಯೂ ಒಂದು. ಮಹಿಳಾ ಸಬಲೀಕರಣ ಭಾಗವಾಗಿ ಕಾಂಗ್ರೆಸ್​ ಸರ್ಕಾರ ಗೃಹಲಕ್ಷ್ಮಿ ಯೋಜನೆ ಜಾರಿಗೆ ತಂದಿದೆ. ಈ ಯೋಜನೆ ಅಡಿಯಲ್ಲಿ ಸರ್ಕಾರ ಮನೆಯ ಯಜಮಾನಿ ಖಾತೆಗೆ 2 ಸಾವಿರ ರೂ. ಜಮೆ ಮಾಡುತ್ತದೆ. ಕಳೆದ 10 ತಿಂಗಳಿಂದ ಹಣ ಜಮೆಯಾಗಿದ್ದು, ಜೂನ್​ ಮತ್ತು ಜುಲೈನ ಹಣ ಜಮಾವಣೆಗೊಂಡಿಲ್ಲ. ಈ ಎರಡು ತಿಂಗಳ ಹಣ ಜಮಾವಣೆ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar)​ ಬಿಗ್​ ಅಪ್ಡೇಟ್​ ನೀಡಿದ್ದಾರೆ.

ಮದ್ದೂರಿನಲ್ಲಿ ನಡೆದ ಜನಾಂದೋಲನ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಭಾಷಣ ಮಾಡುತ್ತ, ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ಹಣ ಬರ್ತಿದೆಯೋ? ಇಲ್ವೋ? ಎಂದು ಪ್ರಶ್ನಿಸಿದರು. ಆಗ ವೇದಿಕೆ ಮುಂಭಾಗದಲ್ಲಿದ್ದ ಮಹಿಳೆಯರು ಬರುತ್ತಿಲ್ಲ, ಬರುತ್ತಿಲ್ಲ ಎಂದು ಕೂಗಿದರು. ಆಗ ಡಿಕೆ ಶಿವಕುಮಾರ್​ ಬರುತ್ತೆ ಬರುತ್ತೆ ಕಾಯುತ್ತಿರಿ. ಕಳೆದ ಒಂದು, ಎರಡು ತಿಂಗಳ ಗೃಹಲಕ್ಷ್ಮಿ ಹಣ ಮಾತ್ರ ನಿಮ್ಮ ಖಾತೆ ಜಮೆ ಆಗಿಲ್ಲ. ಅನುದಾನ ಬಿಡುಗಡೆಯಾಗಿದೆ. ಶ್ರೀಘವೇ ನಿಮ್ಮ ಖಾತೆಗೆ ಹಣ ಜಮೆಯಾಗಲಿದೆ ಎಂದರು.

ಇದನ್ನೂ ಓದಿ: ಗೃಹಜ್ಯೋತಿ ಯೋಜನೆಯ 8,844 ಕೋಟಿ ರೂ. ಬಿಲ್ ಪಾವತಿಸಿದ ಸರ್ಕಾರ

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಸಂದರ್ಭದಲ್ಲಿ ಏಪ್ರಿಲ್​​ ಮತ್ತು ಮೇ ತಿಂಗಳ ಹಣವನ್ನು ಒಮ್ಮೆಲೆ ಪಾವತಿ ಮಾಡಲಾಗಿತ್ತು. ಇದೀಗ ಕಾರಣಾಂತರಗಳಿಂದ ಜೂನ್​ ಮತ್ತು ಜುಲೈ ತಿಂಗಳ ಹಣ ಪಾವತಿ ಬಾಕಿ ಉಳಿದಿದೆ. ಈ ಹಣ ಅಗಸ್ಟ್​ ವಾರಾಂತ್ಯದೊಳಗೆ ಜಮಾವಣೆಯಾಗಲಿದೆ ಎಂದು ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.
ಗೃಹಲಕ್ಷ್ಮಿ ಹಣ ನೇರ ಲಾಭ ವರ್ಗಾವಣೆ (DBT) ಮೂಲಕ ಮನೆಯ ಯಜಮಾನಿ ಖಾತೆಗೆ ತಲಪುತ್ತದೆ. ಈಗಾಗಲೆ 10 ತಿಂಗಳ ಹಣ ನೀಡಲಾಗಿದೆ. ಒಟ್ಟು 20 ಸಾವಿರ ರೂ. ಫಲಾನುಭವಿಗಳ ಬ್ಯಾಂಕ್​ ಖಾತೆಗೆ ಜಮಾ ಮಾಡಲಾಗಿದೆ. ಇದೀಗ ಎರಡು ತಿಂಗಳ ಹಣ ಅಂದರೆ ಒಟ್ಟು 4 ಸಾವಿರ ರೂ. ಅನ್ನು ಫಲಾನುಭವಿಗಳ ಕೈ ಸೇರಲಿದೆ.

ಜೂನ್​ ಮತ್ತು ಜುಲೈ ತಿಂಗಳ ಹಣ ಜಮೆಯಾಗದಿದ್ದಕ್ಕೆ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಮಹಿಳೆಯರು ಇನ್ಮುಂದೆ ನಮಗೆ ಹಣ ಬರತ್ತೋ ಇಲ್ವೋ ಅಂತ ಚಿಂತಿತರಾಗಿದ್ದರು. ಆದರೆ ಇದೀಗ, ಈ ಚಿಂತೆ ದೂರವಾದಂತಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:04 am, Tue, 6 August 24