ದಿವಂಗತ ರಾಜೀವ್ ಗಾಂಧಿಯವರ 80ನೇ ಜನ್ಮ ವಾರ್ಷಿಕೋತ್ಸವ, ಪ್ರತಿಮೆಗೆ ಡಿಕೆ ಶಿವಕುಮಾರ್ ಪುಷ್ಪಾರ್ಚನೆ

Updated on: Aug 20, 2024 | 11:34 AM

ಇಂಡಿಯನ್ ಏರ್ ಲೈನ್ಸ್ ನಲ್ಲಿ ಪೈಲಟ್ ಆಗಿದ್ದ ರಾಜೀವ್ ಗಾಂಧಿ ರಾಜಕಾರಕ್ಕೆ ಬಂದಿದ್ದು ಆಕಸ್ಮಿಕ. ಕಾಂಗ್ರೆಸ್ ಪಕ್ಷದ ಯುವ ನಾಯಕನಾಗಿ ಗುರುತಿಸಿಕೊಂಡಿದ್ದ ಅವರ ಕಿರಿಯ ಸಹೋದರ ಸಂಜಯ್ ಗಾಂಧಿ 1980ರಲ್ಲಿ ವಿಮಾನ ಅಪಘಾತವೊಂದರಲ್ಲಿ ದುರ್ಮರಣಕ್ಕೀಡಾದಾಗ, ಬದರೀನಾಥ್ ಸಂತರಾಗಿದ್ದ ಶಂಕರಾಚಾರ್ಯ ಶ್ರೀ ಸ್ವರೂಪಾನಂದ ಅವರು ರಾಜಕೀಯ ಸೇರುವಂತೆ ರಾಜೀವ್ ಗಾಂಧಿಗೆ ಸಲಹೆ ನೀಡಿದ್ದರು.

ಬೆಂಗಳೂರು: ಇಂದು ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿಯವರ 81 ನೇ ಜನ್ಮ ವಾರ್ಷಿಕೋತ್ಸವ, ಅವರ ಜನ್ಮದಿನಾಚರಣೆಯನ್ನು ಸದ್ಭಾವನಾ ದಿನವನ್ನಾಗಿ ಆಚರಿಸಲಾಗುತ್ತದೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಗರದ ಶೇಷಾದ್ರಿಪುರಂನಲ್ಲಿರುವ ರಾಜೀವ್ ಪ್ರತಿಮೆ ಬಳಿ ಫೋಟೋಗೆ ಹೂಮಾಲೆ ತೊಡಿಸಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು. ಶಿವಕುಮಾರ್ ಅವರೊಂದಿಗಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಹಲವಾರು ಕಾಂಗ್ರೆಸ್ ಮುಖಂಡರು ರಾಜೀವ್ ಗಾಂಧಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು. ದಿವಂಗತ ಪ್ರಧಾನ ಮಂತ್ರಿ ಇಂದಿರಾ ಗಾಂಧಿಯವರ ಹತ್ಯೆಯ ನಂತರ 1984 ರಲ್ಲಿ ಪ್ರಧಾನಿಯಾದ ರಾಜೀವ್ ಗಾಂಧಿ ದೇಶದ ಅತ್ಯಂತ ಕಿರಿಯ ವಯಸ್ಸಿನ ಪ್ರಧಾನ ಮಂತ್ರಿಯೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 1984 ರಿಂದ 1989ರವರೆಗೆ ಅವರು ಅಧಿಕಾರದಲ್ಲಿದ್ದರು. 1991 ರಲ್ಲಿ ಮಧ್ಯಂತರ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಅವರು ತಮಿಳುನಾಡಿನ ಶ್ರೀಪೆರಂಬೂದುರ್ ನಲ್ಲಿ ಪಕ್ಷದ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾಗ ಎಲ್​ಟಿಟಿಈ ಆತ್ಮಾಹುತಿ ದಾಳಿಗೆ ಬಲಿಯಾಗಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  Rajiv Gandhi Assassination Case: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಸಂತನ್ ಸಾವು

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More