AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ನಾಮಕರಣಕ್ಕೆ ಚಿಂತನೆ: ಡಿಸಿಎಂ ಡಿಕೆ ಶಿವಕುಮಾರ್

ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ ಹಾಗೂ ಹಾರೋಹಳ್ಳಿ ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ಹಾಗೂ ರಾಮನಗರವನ್ನು ಇದರ ಜಿಲ್ಲಾ ಕೇಂದ್ರವಾಗಿ ಇರಿಸಲು ಚಿಂತನೆ ನಡೆಸಲಾಗಿದೆ. ಇದಕ್ಕಾಗಿ ಜನರ ಅಭಿಪ್ರಾಯವನ್ನು ಕೂಡ ಸಂಗ್ರಹಿಸಲಾಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ನಾಮಕರಣಕ್ಕೆ ಚಿಂತನೆ: ಡಿಸಿಎಂ ಡಿಕೆ ಶಿವಕುಮಾರ್
ಡಿಸಿಎಂ ಡಿಕೆ ಶಿವಕುಮಾರ್
ಗಣಪತಿ ಶರ್ಮಾ
|

Updated on: Oct 25, 2023 | 10:39 PM

Share

ಬೆಂಗಳೂರು, ಅಕ್ಟೋಬರ್ 25: ಕನಕಪುರ ತಾಲೂಕನ್ನು ಬೆಂಗಳೂರು ಜಿಲ್ಲೆಗೆ ಸೇರಿಸಲಾಗುವುದು ಎಂಬ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿಕೆ ರಾಜಕೀಯವಾಗಿ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಅವರು ಮತ್ತೊಂದು ಅಚ್ಚರಿಯ ವಿಷಯ ತಿಳಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿರುವ ಡಿಕೆ ಶಿವಕುಮಾರ್, ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ ಹಾಗೂ ಹಾರೋಹಳ್ಳಿ ತಾಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು (Ramanagara District) ಬೆಂಗಳೂರು ದಕ್ಷಿಣ ಜಿಲ್ಲೆ (Bangalore South District) ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಈ ಹಿಂದೆ ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ, ದೇವನಹಳ್ಳಿ, ಆನೇಕಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಹೊಸಕೋಟೆ, ರಾಮನಗರ, ಮಾಗಡಿ, ಕನಕಪುರ ಮತ್ತು ಚನ್ನಪಟ್ಟಣ ತಾಲೂಕುಗಳು ಬೆಂಗಳೂರು ಜಿಲ್ಲೆಯ ಭಾಗವಾಗಿದ್ದವು. ತದನಂತರ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ಚನ್ನಪಟ್ಟಣ, ರಾಮನಗರ, ಮಾಗಡಿ ಹಾಗೂ ಕನಕಪುರ ತಾಲೂಕುಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಡಲಾಯಿತು ಎಂದು ಡಿಕೆ ಶಿವಕುಮಾರ್ ಉಲ್ಲೇಖಿಸಿದ್ದಾರೆ.

ನಂತರ ದೊಡ್ಡಬಳ್ಳಾಪುರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಹೊಸಕೋಟೆ, ನೆಲಮಂಗಲ ದೇವನಹಳ್ಳಿ, ದೊಡ್ಡಬಳ್ಳಾಪುರ ಒಳಗೊಂಡಂತೆ ಬೆಂಗಳೂರು ಗ್ರಾಮಂತರ ಜಿಲ್ಲೆಯನ್ನಾಗಿ ಮಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಂಬ ಹೆಸರನ್ನು ಹಾಗೇ ಉಳಿಸಿಕೊಳ್ಳಲಾಯಿತು. ಅದೇ ರೀತಿ ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ರಾಮನಗರ ತಾಲೂಕು ಸೇರಿಸಿ ಹೊಸದಾಗಿ ರಾಮನಗರ ಜಿಲ್ಲೆ ಮಾಡಲಾಯಿತು. ರಾಮನಗರ ಜಿಲ್ಲಾ ಕೇಂದ್ರವಾಯಿತು. ನಂತರ ಈ ಜಿಲ್ಲೆಗೆ ಹಾರೋಹಳ್ಳಿ ಹೊಸ ತಾಲ್ಲೂಕು ಸೇರ್ಪಡೆಯಾಯಿತು ಎಂದು ಅವರು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಜಿಲ್ಲೆಗೆ ಕನಕಪುರ ಸೇರಿಸುವ ಬಗ್ಗೆ ಡಿಕೆ ಶಿವಕುಮಾರ್​ ಹೇಳಿಕೆಗೆ ಯಾರೆಲ್ಲ ಏನ್​​ ಅಂದ್ರು?

ಈಗ ಬೆಂಗಳೂರು ನಗರದ ಅಂತಾರಾಷ್ಟ್ರೀಯ ಖ್ಯಾತಿ, ಸಾರ್ವಭೌಮತೆ ಮತ್ತು ಘನತೆ ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ಹಾರೋಹಳ್ಳಿ ತಾಲೂಕುಗಳಿಗೆ ಲಭ್ಯ ಆಗಬೇಕೆಂಬುದು ಜನರ ಆಶಯ ಮತ್ತು ನನ್ನ ಚಿಂತನೆಯೂ ಕೂಡ. ಹೀಗಾಗಿ ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ ಹಾಗೂ ಹಾರೋಹಳ್ಳಿ ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ಹಾಗೂ ರಾಮನಗರವನ್ನು ಇದರ ಜಿಲ್ಲಾ ಕೇಂದ್ರವಾಗಿ ಇರಿಸಲು ಚಿಂತನೆ ನಡೆಸಲಾಗಿದೆ. ಇದಕ್ಕಾಗಿ ಜನರ ಅಭಿಪ್ರಾಯವನ್ನು ಕೂಡ ಸಂಗ್ರಹಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?