AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಅಧಿಕಾರಿಗಳು ಬಹಳ ಖದೀಮರಿದ್ದಾರೆ: ಡಿಸಿಎಂ ಡಿಕೆ ಶಿವಕುಮಾರ್

ಅಭಿವೃದ್ಧಿ ನಿಗಮ ಮಂಡಳಿಗಳ ಭ್ರಷ್ಟಾಚಾರದ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್, ಈ ಹಿಂದೆ ಇದ್ದ ಕೆಲವು ಖದೀಮ ಅಧಿಕಾರಿಗಳೇ ಈಗಲೂ ಆಡಳಿತ ನಡೆಸುತ್ತಿದ್ದಾರೆ ಎಂದಿದ್ದಾರೆ. ಆ ಮೂಲಕ, ಈ ಹಿಂದೆ ಆಡಳಿತ ನಡೆಸಿದ್ದ ಬಿಜೆಪಿಗೇ ತಿರುಗೇಟು ನೀಡಿದ್ದಾರೆ.

ನಮ್ಮ ಅಧಿಕಾರಿಗಳು ಬಹಳ ಖದೀಮರಿದ್ದಾರೆ: ಡಿಸಿಎಂ ಡಿಕೆ ಶಿವಕುಮಾರ್
ಡಿಸಿಎಂ ಡಿಕೆ ಶಿವಕುಮಾರ್Image Credit source: Getty Images
Anil Kalkere
| Edited By: |

Updated on: Jul 20, 2024 | 2:01 PM

Share

ಬೆಂಗಳೂರು, ಜುಲೈ 20: ಅಭಿವೃದ್ಧಿ ನಿಗಮ ಮಂಡಳಿಗಳಲ್ಲಿ‌ ಪಾರದರ್ಶಕತೆ ತರುವ ವಿಚಾರವಾಗಿ ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದು, ನಮ್ಮ ಅಧಿಕಾರಿಗಳು ಬಹಳ ಖದೀಮರಿದ್ದಾರೆ ಎಂದಿದ್ದಾರೆ. ಪಾರದರ್ಶಕತೆ ತರುವ ಬಗ್ಗೆ ನಿಗಮ ಮಂಡಳಿಯ ಅಧ್ಯಕ್ಷರಿಗೆ ನಾವು ಈಗಾಗಲೇ ಹೇಳಿದ್ದೇವೆ. ಆದರೆ, ಅವರು ಬಹಳ ಖದೀಮರಿದ್ದಾರೆ. ಅಲ್ಲಿದ್ದ ಖದೀಮರು ಈಗ ಇಲ್ಲಿಗೂ ಬಂದು ಸೇರಿಕೊಂಡಿದ್ದಾರೆ. ಅಲ್ಲಿ 300-400 ಕೋಟಿ‌ ತಿಂದ‌ ಅದೇ ಅಧಿಕಾರಿಗಳು ಇಲ್ಲಿದ್ದಾರೆ ಎಂದಿದ್ದಾರೆ.

ಡಿ ಗ್ರೇಡ್ ಕ್ಲರ್ಕ್​​ಗಳನ್ನು ಸೂಪರಿಂಟೆಂಡೆಂಟ್, ಎಂಡಿ ಆಗಿ ಮಾಡಿದ್ದಾರೆ. ಇವರ ಬಗ್ಗೆ ಪರಿಶೀಲನೆ ಮಾಡುತ್ತಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಖಜಾನೆಯಲ್ಲಿ ನಿಯಂತ್ರಣ ಇಡುವ ವ್ಯವಸ್ಥೆ ಮಾಡುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಮುಡಾ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ‌ ಸಿಎಂ, ಡಿಸಿಎಂ ಹೆಸರು ಹೇಳುವಂತೆ ತನಿಖಾಧಿಕಾರಿಗಳು ಒತ್ತಡ ಹೇರುತ್ತಿದ್ದಾರೆಂಬ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಹೆಸರು ಹೇಳಲಿ ಬಿಡಿ, ಬೇಡ ಎಂದವರು ಯಾರು ಎಂದರು.

‘ದೇವರ ಕೃಪೆಯಿಂದ ಮಳೆ‌ ಚೆನ್ನಾಗಿ ಆಗುತ್ತಿದೆ’

ದೇವರ ಕೃಪೆಯಿಂದ ಮಳೆ‌ ಚೆನ್ನಾಗಿ ಆಗುತ್ತಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು. ಇನ್ನು 2-3 ದಿನಗಳಲ್ಲಿ‌ ಕೆಆರ್​​​ಎಸ್ ಜಲಾಶಯ ಭರ್ತಿ ಆಗುತ್ತದೆ. ತಮಿಳುನಾಡಿಗೆ ನೀರು ಬಿಡುವಂತೆ ಕೋರ್ಟ್ ಆದೇಶ ಕೊಟ್ಟಿತ್ತು. ಅದನ್ನು ಪಾಲನೆ ಮಾಡುವ ಸೂಚನೆಗಳು‌ ತಮಗೆಲ್ಲ ಕಾಣುತ್ತಿದೆ. ಮುಂಜಾಗ್ರತೆಯಿಂದ ಕೆಲವು ಕಡೆ ನೀರು ಬಿಡಬೇಕಾಗುತ್ತದೆ. ನಮ್ಮ ರೈತರ ಹಿತಕ್ಕೆ ಏನು ಮಾಡಬೇಕೋ ಅದನ್ನು ಮಾಡುತ್ತೇವೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಮುಡಾ ಹಗರಣ ಬಯಲಿಗೆಳೆದ RTI ಕಾರ್ಯಕರ್ತರ ವಿರುದ್ಧ ದೂರು, ಸಿಎಂ ರಕ್ಷಣೆಗೆ ಎಂದ ಕುಮಾರಣ್ಣ

ನದಿ ಪಕ್ಕದಲ್ಲಿರುವ ಮನೆಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದೇವೆ. ಕಾರವಾರದಲ್ಲಿ ವಿಪರೀತ ಮಳೆಯಿಂದ ಬಹಳ ತೊಂದರೆ ಆಗುತ್ತಿದೆ. ಕೇರಳ ಮೂಲದ ಚಾಲಕ ವಾಹನ ಸಮೇತ ಸಿಲುಕಿಕೊಂಡಿದ್ದಾನೆ. ಅಧಿಕಾರಿಗಳು, ಜನಪ್ರತಿನಿಧಿಗಳು ಸ್ಥಳದಲ್ಲಿದ್ದಾರೆ ಎಂದು ಅವರು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ