AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಬಂದ್‌ಗೆ ಅವಕಾಶವಿಲ್ಲ, ಪ್ರತಿಭಟನೆಗೆ ಅಡ್ಡಿಯಿಲ್ಲ: ಡಿಸಿಎಂ ಡಿಕೆ ಶಿವಕುಮಾರ್

Karnataka Bandh; ನಾಳೆ ಸಾವರ್ಜನಿಕರಿಗೆ ರಕ್ಷಣೆ ಕೊಟ್ಟೇ ಕೊಡುತ್ತೇವೆ. ಸುಪ್ರೀಂ ಕೋರ್ಟ್,‌ ಹೈಕೋರ್ಟ್ ಬಂದ್ ವಿಚಾರವಾಗಿ ಒಂದಷ್ಟು ಸೂಚನೆಗಳನ್ನು ನೀಡಿವೆ,‌ ಅವನ್ನು ಪಾಲಿಸಬೇಕು. ದಯವಿಟ್ಟು ಕಾನೂನು ಪಾಲಿಸಿ, ಬಂದ್ ಮಾಡದೆ ಪ್ರತಿಭಟನೆ ಮಾಡಿ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜನರಲ್ಲಿ ಮನವಿ ಮಾಡಿದರು.

ನಾಳೆ ಬಂದ್‌ಗೆ ಅವಕಾಶವಿಲ್ಲ, ಪ್ರತಿಭಟನೆಗೆ ಅಡ್ಡಿಯಿಲ್ಲ: ಡಿಸಿಎಂ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
TV9 Web
| Edited By: |

Updated on: Sep 28, 2023 | 4:06 PM

Share

ಬೆಂಗಳೂರು, ಸೆಪ್ಟೆಂಬರ್ 28: ಪ್ರತಿಭಟನೆ ಮಾಡಲು ಯಾರಿಗೂ ನಾವು ಅಡ್ಡಿ ಮಾಡುವುದಿಲ್ಲ. ಆದರೆ ಬಂದ್ (Karnataka Bandh) ಮಾಡಲು ಅವಕಾಶವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಗುರುವಾರ ಹೇಳಿದರು. ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದರ ವಿರುದ್ಧ ವಿವಿಧ ಸಂಘಟನೆಗಳು ಶುಕ್ರವಾರ ಕರ್ನಾಟಕ ಬಂದ್​ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ನಾಳೆ ಸಾವರ್ಜನಿಕರಿಗೆ ರಕ್ಷಣೆ ಕೊಟ್ಟೇ ಕೊಡುತ್ತೇವೆ. ಸುಪ್ರೀಂ ಕೋರ್ಟ್,‌ ಹೈಕೋರ್ಟ್ ಬಂದ್ ವಿಚಾರವಾಗಿ ಒಂದಷ್ಟು ಸೂಚನೆಗಳನ್ನು ನೀಡಿವೆ,‌ ಅವನ್ನು ಪಾಲಿಸಬೇಕು. ದಯವಿಟ್ಟು ಕಾನೂನು ಪಾಲಿಸಿ, ಬಂದ್ ಮಾಡದೆ ಪ್ರತಿಭಟನೆ ಮಾಡಿ ಎಂದು ಜನರಲ್ಲಿ ಮನವಿ ಮಾಡಿದರು.

ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಾಳೆ

ನಾಳೆ ನಡೆಯುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಸಭೆಗೆ ಆನ್‌ಲೈನ್ ಬದಲಿಗೆ ಖುದ್ದಾಗಿ ಭಾಗವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

ತಮಿಳುನಾಡಿನವರು 11,000 ಸಾವಿರ ಕ್ಯೂಸೆಕ್​ ನೀರಿಗೆ ಬೇಡಿಕೆ ಇಟ್ಟಿದ್ದು, ರಾಜ್ಯದ ಅಧಿಕಾರಿಗಳು ಸಮರ್ಥವಾಗಿ ವಾದ ಮಂಡಿಸಲಿದ್ದಾರೆ. ರಾಜ್ಯದ ಬರ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಲಿದ್ದಾರೆ. ಈಗ ಸಹಜವಾಗಿ 2,000 ಕ್ಯೂಸೆಕ್ ನೀರು ಹೋಗುತ್ತಿರಬಹುದು ಎಂದು ಅವರು ತಿಳಿಸಿದರು.

ಹಿರಿಯ ಕೃಷಿ ತಜ್ಞರು, ನೀರಾವರಿ ತಂತ್ರಜ್ಞರ ಸಭೆ ಕರೆದಿದ್ದು ಅಲ್ಲಿ ಚರ್ಚೆ ಮಾಡಲಾಗುವುದು. ಯಾರು ಭಾಗವಹಿಸುತ್ತಾರೆ ಎಂದು ಹೆಸರು ಬಹಿರಂಗಪಡಿಸಲು ಆಗುವುದಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದರು.

ನಾಳಿನ ಬೆಳವಣಿಗೆ ನೋಡಿಕೊಂಡು ನ್ಯಾಯಾಲಯಕ್ಕೆ ಹೋಗುತ್ತೀರಾ ಎಂಬ ಪ್ರಶ್ನೆಗೆ, ಈಗಾಗಲೇ ನ್ಯಾಯಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ. ತಾಂತ್ರಿಕ ಸಮಿತಿಯವರು 3,000 ಕ್ಯೂಸೆಕ್ ನೀರು ಬಿಡುಗಡೆಗೆ ಶಿಫಾರಸ್ಸು ಮಾಡಿದ್ದಾರೆ. ನಾಳೆ ಪ್ರಾಧಿಕಾರದವರು ಏನು ಸೂಚನೆ ನೀಡಲಿದ್ದಾರೆ ಎಂಬುದನ್ನು ಕಾದು ನೋಡಬೇಕು ಎಂದು ತಿಳಿಸಿದರು.

ಎಂಎಲ್‌ಸಿ, ಲೋಕಸಭಾ ಚುನಾವಣೆಗೆ ತಯಾರಿ

ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಶೀಘ್ರ ಆಯ್ಕೆ ಮಾಡಲು ಸಲಹೆ ಪಡೆಯಲಾಗುತ್ತಿದೆ. ಈಶ್ವರ ಖಂಡ್ರೆ, ರಾಮಲಿಂಗಾರೆಡ್ಡಿ, ಪ್ರಿಯಾಂಕ್ ಖರ್ಗೆ ಸೇರಿದಂತೆ ಎಲ್ಲಾ ಭಾಗದ ನಾಯಕರ ಜತೆ ಎಂಎಲ್‌ಸಿ ಚುನಾವಣೆ ಬಗ್ಗೆ ಚರ್ಚೆ ನಡಸಲಾಗುತ್ತಿದೆ ಎಂದು ಅವರು ಹೇಳಿದರು.

ಜಗದೀಶ್ ಶೆಟ್ಟರ್ ಅವರ ನೇತೃತ್ವದಲ್ಲಿ ಮಾಜಿ ಶಾಸಕರು ಭೇಟಿಯಾಗಿದ್ದರು ಎನ್ನುವ ಪ್ರಶ್ನೆಗೆ, ಮೈತ್ರಿ ವಿಚಾರವಾಗಿ ಬಹಳಷ್ಟು ಜನರಿಗೆ ಸಿಟ್ಟಿದೆ. ಸಿಎಂ ಹಾಗೂ ನಾನು ನಾಳೆ ಈ ವಿಚಾರವಾಗಿ ಮಾತನಾಡುತ್ತೇವೆ ಎಂದರು.

ಇದನ್ನೂ ಓದಿ: Karnataka Bandh: ನಾಳೆ ಕರ್ನಾಟಕ ಬಂದ್ ವೇಳೆ ಏನಿರುತ್ತೆ? ಏನಿಲ್ಲ? ಇಲ್ಲಿದೆ ವಿವರ

ಹರಿಪ್ರಸಾದ್ ಹಾಗೂ ಮುನಿಯಪ್ಪ ಅವರ ಭೇಟಿ ಬಗ್ಗೆ ಕೇಳಿದಾಗ, ಬಿ.ಕೆ.ಹರಿಪ್ರಸಾದ್ ಮತ್ತು ಮುನಿಯಪ್ಪ ಅವರು ಲೋಕಸಭೆ ಚುನಾವಣೆಯ ವಿಚಾರವಾಗಿ ಚರ್ಚೆ ನಡೆಸಲು ಬಂದಿದ್ದರು. ಇದೇ ವೇಳೆ ನಿಗಮ- ಮಂಡಳಿಗಳಿಗೆ ಅಧ್ಯಕ್ಷರನ್ನು ಆದಷ್ಟು ಬೇಗ ನೇಮಕ ಮಾಡಿ ಎಂದು ಮುನಿಯಪ್ಪ ಅವರು ಸಲಹೆ ನೀಡಿದರು ಎಂದು ತಿಳಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು