AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ ಸುಧಾಕರ್​ ವಿರುದ್ಧ ದಾಖಲಾಗಿರುವುದು ಸುಳ್ಳು ಮೊಕದ್ದಮೆ; ಡಿಸಿಎಂ ಡಿಕೆ ಶಿವಕುಮಾರ್

ಚುನಾವಣೆ ಸಮಯದಲ್ಲಿ ಯಾರೋ ಹೋಗಿ ಕಂಪೌಂಡ್ ಹಾಕಿದ್ದಾರೆ. ಯಾರೋ ಹೋಗಿ ಅವರು ಇಲ್ಲದಿದ್ದಾಗ ದೂರು ನೀಡಿದ್ದಾರೆ. ಪರಿಶಿಷ್ಟ ಜಾತಿಯವರು ಕೊಟ್ಟಾಗ ಪಿಸಿಆರ್ ಹಾಕಿದ್ದಾರೆ. ಇದೊಂದು ಸುಳ್ಳು ಕೇಸ್. ನಾವು ಸಿಡಿಆರ್ ತನಿಖೆ ಮಾಡಿದ್ದೇವೆ. ಯಾರಾದ್ರೂ ತಪ್ಪು‌ ಮಾಡಿದ್ರೆ ಕಾನೂನಿಗಿಂತ ದೊಡ್ಡವರಿಲ್ಲ. ಅಧಿಕಾರಿಗಳು ಹೇಳಿದ್ದಾರೆ, ಪರಿಶೀಲನೆ ಮಾಡಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಡಿ ಸುಧಾಕರ್​ ವಿರುದ್ಧ ದಾಖಲಾಗಿರುವುದು ಸುಳ್ಳು ಮೊಕದ್ದಮೆ; ಡಿಸಿಎಂ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
ಪ್ರಸನ್ನ ಗಾಂವ್ಕರ್​
| Edited By: |

Updated on: Sep 12, 2023 | 4:00 PM

Share

ಬೆಂಗಳೂರು, ಸೆಪ್ಟೆಂಬರ್ 12: ಯೋಜನೆ ಹಾಗೂ ಸಾಂಖ್ಯಿಕ ಸಚಿವ ಡಿ ಸುಧಾಕರ್ ವಿರುದ್ಧ ಭೂಕಬಳಿಕೆ, ಹಲ್ಲೆ, ಜಾತಿ ನಿಂದನೆ ಆರೋದ ಅಡಿಯಲ್ಲಿ ಮೊಕದ್ದಮೆ ದಾಖಲಾಗಿರುವ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಡಿ ಸುಧಾಕರ್​ (D Sudhakar) ವಿರುದ್ಧ ದಾಖಲಾಗಿರುವುದು ಸುಳ್ಳು ಮೊಕದ್ದಮೆ ಎಂದು ಅವರು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ (DK Shivakumar), ಸುಧಾಕರ್​ ವಿರುದ್ಧ ದಾಖಲಾಗಿರುವುದು ಸುಳ್ಳು ಮೊಕದ್ದಮೆ. ನಾನು ಕೆಪಿಸಿಸಿ ಅಧ್ಯಕ್ಷನಾಗಿ ಸಂಪೂರ್ಣ ಮಾಹಿತಿಯನ್ನು ಪಡೆದಿದ್ದೇನೆ. ಬಿಜೆಪಿಯವರು ಏನು ಬೇಕಾದರೂ ಕುತಂತ್ರ ಮಾಡಲಿ ಎಂದು ಹೇಳಿದ್ದಾರೆ.

ಈ ಘಟನೆ ಬಗ್ಗೆ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದಿದ್ದೇನೆ. ದೂರು ‌ಕೊಟ್ಟಾಗ ಸಚಿವ ಡಿ ಸುಧಾಕರ್ ಎಲ್ಲಿ ಇದ್ದರು ಎಂಬುದೂ ಗೊತ್ತಿದೆ. ಇದು ಸುಳ್ಳು ಕೇಸ್​ ಎಂಬುದು. ನನ್ನ ಮೇಲೂ ನಾಳೆ ದೂರು ಕೊಡ್ತಾರೆ, ಅದನ್ನು ನಂಬುವುದಕ್ಕೆ ಆಗುತ್ತದೆಯೇ? ರಾಜೀನಾಮೆ ಕೊಡ್ತಾರೆಂದು ಬಿಜೆಪಿಯವರು ಕನಸು ಕಾಣ್ತಿದ್ದಾರೆ, ಕಾಣಲಿ ಎಂದು ಡಿಕೆ ಶಿವಕುಮಾರ್​ ಹೇಳಿದ್ದಾರೆ.

ಚುನಾವಣೆ ಸಮಯದಲ್ಲಿ ಯಾರೋ ಹೋಗಿ ಕಂಪೌಂಡ್ ಹಾಕಿದ್ದಾರೆ. ಯಾರೋ ಹೋಗಿ ಅವರು ಇಲ್ಲದಿದ್ದಾಗ ದೂರು ನೀಡಿದ್ದಾರೆ. ಪರಿಶಿಷ್ಟ ಜಾತಿಯವರು ಕೊಟ್ಟಾಗ ಪಿಸಿಆರ್ ಹಾಕಿದ್ದಾರೆ. ಇದೊಂದು ಸುಳ್ಳು ಕೇಸ್. ನಾವು ಸಿಡಿಆರ್ ತನಿಖೆ ಮಾಡಿದ್ದೇವೆ. ಯಾರಾದ್ರೂ ತಪ್ಪು‌ ಮಾಡಿದ್ರೆ ಕಾನೂನಿಗಿಂತ ದೊಡ್ಡವರಿಲ್ಲ. ಅಧಿಕಾರಿಗಳು ಹೇಳಿದ್ದಾರೆ, ಪರಿಶೀಲನೆ ಮಾಡಿದ್ದೇನೆ. ದಾಖಲೆಗಳನ್ನು ತರಿಸಿ ಪರಿಶೀಲನೆ ಮಾಡಿದ್ದೇನೆ. ಧಮ್ಕಿ ಹಾಕುವುದಕ್ಕೂ ಪಿಸಿಆರ್ ಆ್ಯಕ್ಟ್​​ಗೂ ವ್ಯತ್ಯಾಸ ಇಲ್ಲವೇ. ನನಗೂ ಗಾಬರಿ ಆಯ್ತು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಇನ್ನು ಸುಧಾಕರ್ ವಿರುದ್ಧ ಮೊಕದ್ದಮೆ ದಾಖಲಾಗಿರುವ ವಿಚಾರವಾಗಿ ಪ್ರತಿಪಕ್ಷ ಬಿಜೆಪಿ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಜತೆಗೆ, ಸಚಿವರ ರಾಜೀನಾಮೆಗೂ ಆಗ್ರಹಿಸಿದೆ.

ಇದನ್ನೂ ಓದಿ: ಸಚಿವ ಡಿ.ಸುಧಾಕರ್​ ವಿರುದ್ಧ ಎಫ್​ಐಆರ್: ಮಹಿಳೆ ಜತೆ ಗಲಾಟೆ, ಏನಿದು ಪ್ರಕರಣ? ಇಲ್ಲಿದೆ ಡಿಟೇಲ್ಸ್

ಸಚಿವ ಶಿವರಾಜ ತಂಗಡಗಿ ಹೇಳಿದ್ದೇನು?

ಸಚಿವ ಡಿ ಸುಧಾಕರ್ ಪ್ರಕರಣ ಏನು ಎನ್ನುವುದೇ ನನಗೆ ಗೊತ್ತಿಲ್ಲ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ಮಾತನಾಡಿದ ಅವರು, ಪ್ರಕರಣದ ಬಗ್ಗೆ ಸಿಎಂ, ಡಿಸಿಎಂ ಮಾಹಿತಿ ಪಡೆದುಕೊಂಡಿರುತ್ತಾರೆ. ಅಧಿಕಾರ ನಮ್ಮ ಕೈಯಲ್ಲಿದೆ ಎಂದು ಏನೇನೋ ಮಾಡಲು ಆಗಲ್ಲ. ರಾಜಕೀಯವಾಗಿ ಕೇಸ್ ದಾಖಲಿಸಿರಬಹುದು. ರಾಜಕೀಯ ಒತ್ತಡದಿಂದ ಕೇಸ್ ಆಗಿರಬಹುದು ಎಂದುಕೊಂಡಿದ್ದೇನೆ. ಮಂತ್ರಿಯಾಗಿರುವುದರಿಂದ ಸುದ್ದಿ ಆಗಬಹುದು ಎಂದು ಪ್ರಕರಣ ದಾಖಲಿಸಿರಬಹುದು. ವಿರೋಧ ಪಕ್ಷದವರ ಒತ್ತಡದಿಂದ ಕೇಸ್ ಹಾಕಿಸಿರಬಹುದು ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ