AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಶಾಲೆಗಳಿಂದ ಸರ್ಕಾರಿ ಶಾಲೆಗಳ ದತ್ತು ಸ್ವೀಕಾರ; ಹೊಸ ಪರಿಕಲ್ಪನೆ ಜಾರಿಗೆ ಮುಂದಾಗಿದ್ದೇವೆ ಎಂದ ಡಿಕೆ ಶಿವಕುಮಾರ್

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಹೊಸ ಪರಿಕಲ್ಪನೆಯನ್ನು ಪರಿಚಯಿಸಲಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಹೇಳಿದ್ದಾರೆ. ಹೊಸ ಪರಿಕಲ್ಪನೆಯಡಿ ಖಾಸಗಿ ಶಾಲೆಗಳು ಒಂದೊಂದು ಸರ್ಕಾರಿ ಶಾಲೆಯನ್ನು ದತ್ತುಪಡೆಯಲಿವೆ. ಅದರಂತೆ ತಾವೂ ಕೂಡ 3 ಶಾಲೆಗಳನ್ನು ದತ್ತು ತೆಗೆದುಕೊಳ್ಳುವುದಾಗಿ ಅವರು ತಿಳಿಸಿದ್ದಾರೆ.

ಖಾಸಗಿ ಶಾಲೆಗಳಿಂದ ಸರ್ಕಾರಿ ಶಾಲೆಗಳ ದತ್ತು ಸ್ವೀಕಾರ; ಹೊಸ ಪರಿಕಲ್ಪನೆ ಜಾರಿಗೆ ಮುಂದಾಗಿದ್ದೇವೆ ಎಂದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
ಪ್ರಸನ್ನ ಗಾಂವ್ಕರ್​
| Edited By: |

Updated on: Aug 16, 2023 | 7:03 PM

Share

ಬೆಂಗಳೂರು, ಆಗಸ್ಟ್ 16: ಕಾರ್ಪೊರೇಟ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ಫಂಡ್​​ನಿಂದ (CSR Fund) ಸರ್ಕಾರಿ ಶಾಲೆ ಅಭಿವೃದ್ಧಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಖಾಸಗಿ ಶಾಲೆಗಳು ಒಂದೊಂದು ಸರ್ಕಾರಿ ಶಾಲೆಯನ್ನು ದತ್ತು ಪಡೆಯಬೇಕು. ಹೀಗೊಂದು ಹೊಸ ಪರಿಕಲ್ಪನೆ ಜಾರಿಗೆ ಮುಂದಾಗಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹೊಸ ಪರಿಕಲ್ಪನೆಯನ್ನು ಹೇಗೆ ಜಾರಿ ಮಾಡಬೇಕು ಎಂಬ ಬಗ್ಗೆ ಚರ್ಚೆ ಮಾಡಿದ್ದೇವೆ. ನಾನೂ ಕೂಡ ಮೂರು ಶಾಲೆಗಳ ಮಾಲೀಕ. ನಾನೂ ಪಂಚಾಯಿತಿ ಮಟ್ಟದಲ್ಲಿ 3 ಸರ್ಕಾರಿ ಶಾಲೆ ದತ್ತು ಪಡೆಯುವೆ ಎಂದು ಹೇಳಿದ್ದಾರೆ.

ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಬಿಡುಗಡೆ; ಡಿಕೆ ಶಿವಕುಮಾರ್ ಹೇಳಿದ್ದಿಷ್ಟು

ಕೆಆರ್​​ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ವಿಚಾರವಾಗಿ ಪ್ರತಿಪಕ್ಷಗಳು ಮಾಡಿರುವ ಟೀಕೆಗೆ ಪ್ರತಿಕ್ರಿಯಿಸಿದ ಅವರು, ಯಾಕೆ ನೀರು ಬಿಟ್ಟಿದ್ದೀರಿ ಎಂದು ನಮ್ಮನ್ನು ಪ್ರಶ್ನಿಸಲು ನಮ್ಮ ಬಳಿ ಡ್ಯಾಂನ ಬೀಗ ಇದೆಯಾ ಎಂದು ಮರು ಪ್ರಶ್ನೆ ಮಾಡಿದರು. ಕೆಆರ್​ಎಸ್ ಬೀಗ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಬಳಿ ಇದೆ, ಕೇಂದ್ರ ಸರ್ಕಾರದ ಬಳಿ‌ ಇದೆ ಎಂದು ಹೇಳಿದರು.

ರಾಜಕಾರಣವನ್ನು ಎಷ್ಟು ಮಾಡಬೇಕೋ ಅಷ್ಟೇ ಮಾಡಬೇಕು. ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೂ ಕಾನೂನು ಗೊತ್ತಿದೆ. ನೀರು ಯಾರ ನಿಯಂತ್ರಣದಲ್ಲಿ ಇದೆ? ಇದೆಲ್ಲ ಈಗ ಚರ್ಚೆ ಮಾಡಲ್ಲ. 30-40 ವರ್ಷಗಳಲ್ಲಿ ಈಗಲೇ ರಾಜ್ಯದಲ್ಲಿ ಮಳೆ‌ ಕೊರತೆ ಆಗಿರೋದು. ನೀರು ಬಿಡಬೇಡಿ ಅಂತಾ ನಮ್ಮ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ, ಕೋರ್ಟ್ ಕೇಳಬೇಕಲ್ಲ, ರೈತರೂ ಕೋರ್ಟ್​​ಗೆ ಅರ್ಜಿ ಹಾಕಲಿ ಎಂದು ಡಿಕೆ ಶಿವಕುಮಾರ್ ಹೇಳಿದರು.

ಇದನ್ನೂ ಓದಿ: Cauvery Water Dispute: ಕಾವೇರಿ ನೀರಿಗಾಗಿ ಮತ್ತೆ ಕ್ಯಾತೆ; ಸುಪ್ರೀಂ ಕೋರ್ಟ್ ಮೊರೆಹೋದ ತಮಿಳುನಾಡು

ಸರ್ಕಾರ ನಡೆಸಬೇಕಾದರೆ ಎಲ್ಲರ ವಿಚಾರ ಗಮನದಲ್ಲಿಟ್ಟುಕೊಳ್ಳಬೇಕು. ಕಾನೂನು ಸಲಹೆಗಾರರು ಏನ್ ಹೇಳುತ್ತಾರೆ ಎಂಬುದನ್ನೂ ಸಹ ಕೇಳಬೇಕಲ್ಲ. ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್​​ಗೆ ಅರ್ಜಿ ಸಲ್ಲಿಕೆ ಮಾಡಿದೆ. ತಮಿಳುನಾಡು ಸರ್ಕಾರ ಕೇಳಿದಷ್ಟು ನೀರು ನಾವು ಬಿಡ್ತಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ