AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್‌-19 ಕಾರ್ಯಪಡೆ ಪುನಾರಚನೆ: ಡಿಸಿಎಂ ಡಾ.ಅಶ್ವತ್ಥನಾರಾಯಣ ನೇತೃತ್ವ, ಆರೋಗ್ಯ ಸಚಿವ ಡಾ ಸುಧಾಕರ್​ಗೆ ಹಿನ್ನಡೆ

ರಾಜ್ಯ ಸರಕಾರ ಕೊವಿಡ್​ ಕಾರ್ಯಪಡೆಯನ್ನು ಪುನಾರಚಿಸಿದ್ದು ಡಾ. ಸಿ.ಎನ್​ ಅಶ್ವತ್ಥನಾರಾಯಣ ಅವರಿಗೆ ಈ ಜವಾಬ್ದಾರಿ ನೀಡಿ, ಆರೋಗ್ಯ ಸಚಿವ ಡಾ. ಸುಧಾಕರ್​ ಅವರಿಗೆ ಒಂದು ಕಠಿಣ ಸಂದೇಶವನ್ನು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ನೀಡಿದ್ದಾರೆ.

ಕೋವಿಡ್‌-19 ಕಾರ್ಯಪಡೆ ಪುನಾರಚನೆ: ಡಿಸಿಎಂ ಡಾ.ಅಶ್ವತ್ಥನಾರಾಯಣ ನೇತೃತ್ವ, ಆರೋಗ್ಯ ಸಚಿವ ಡಾ ಸುಧಾಕರ್​ಗೆ ಹಿನ್ನಡೆ
ಉಪ ಮುಖ್ಯಮಂತ್ರಿ, ಡಾ. ಸಿ.ಎನ್ ಅಶ್ವತ್ಥ್ ನಾರಾಯಣ (ಸಂಗ್ರಹ ಚಿತ್ರ)
ಡಾ. ಭಾಸ್ಕರ ಹೆಗಡೆ
| Edited By: |

Updated on: May 03, 2021 | 3:47 PM

Share

ಕೊರೋನಾ ನಿಯಂತ್ರಣದಲ್ಲಿ ರಾಜ್ಯದಲ್ಲಿ ಅತ್ಯುನ್ನತ ಮಟ್ಟದ ಸಮಿತಿಯಾದ ಕೋವಿಡ್‌ ಕಾರ್ಯಪಡೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಪುನಾರಚಿಸಿದ್ದು, ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರನ್ನು ಕಾರ್ಯಪಡೆ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ.

ಲೋಕೋಪಯೋಗಿ ಸಚಿವರೂ ಆದ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಈವರೆಗೂ ಈ ಕಾರ್ಯಪಡೆ ಅಧ್ಯಕ್ಷರಾಗಿದ್ದರು. ಪುನಾರಚನೆಗೊಂಡ ಈ ಕಾರ್ಯಪಡೆಯಲ್ಲಿ ಅಧ್ಯಕ್ಷರಾಗಿ ಡಾ.ಅಶ್ವತ್ಥನಾರಾಯಣ ಜತೆಯಲ್ಲಿ  ಸದಸ್ಯರಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್.‌ಸುರೇಶ್‌ ಕುಮಾರ್‌, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಖಾತೆ ಸಚಿವ ಸಿ.ಸಿ.ಪಾಟೀಲ್‌ ಹಾಗೂ ಆರೋಗ್ಯ & ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ.ಸುಧಾಕರ್‌ ಇದ್ದಾರೆ.

ಇಡೀ ರಾಜ್ಯದ ಕೋವಿಡ್ ಪರಿಸ್ಥಿತಿಯ ಉಸ್ತುವಾರಿ ಜತೆಗೆ‌, ಉನ್ನತ ಮಟ್ಟದ ನಿರ್ಧಾರಗಳನ್ನು ಕೈಗೊಳ್ಳುವ ಅಧಿಕಾರ ಈ ಕಾರ್ಯಪಡೆಗೆ ಇದೆ.

ಡಾ ಸುಧಾಕರ್​ಗೆ ಹಿನ್ನಡೆ?

ಕಳೆದ ವರ್ಷ ವೈದ್ಯಕೀಯ ಶಿಕ್ಷಣ ಖಾತೆಯನ್ನು ತೆಗೆದುಕೊಂಡು ಮಂತ್ರಿಗಿರಿಯನ್ನು ಪ್ರಾರಂಭಿಸಿದರು ಡಾ. ಕೆ. ಸುಧಾಕರ್​. ಆಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಬಿ. ಶ್ರೀರಾಮುಲು ಅವರ ಬಳಿ ಇತ್ತು. ಮೊದಲ ಅಲೆ ಬಂದಾಗ, ಶ್ರೀರಾಮುಲು ವಿಫಲರಾಗಿದ್ದರು ಎಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪನವರ ಮೇಲೆ ಒತ್ತಡ ಬಂತು. ಆಗ, ಅವರು ಡಾ. ಸುಧಾಕರ್​ ಅವರಿಗೆ ಈ ಜವಾಬ್ದಾರಿ ನೀಡಿದರು.

ಆ ನಂತರ, ಕರ್ನಾಟಕದಲ್ಲಿ ಕೊವಿಡ್​ ಎದುರಿಸುವಲ್ಲಿ ವಿಫಲವಾಗಿದೆ ಎಂಬ ಸಾಕ್ಷ್ಯಾಧಾರಗಳಿಲ್ಲದ ಆರೋಪ ಬಂದಿದ್ದರೂ, ಡಾ. ಸುಧಾಕರ್​ ಈ ಎಲ್ಲ ಟೀಕೆಗಳಿಂದ ಪಾರಾಗಿದ್ದರು. ಈಗ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಒಂದು ಕಠಿಣ ನಿರ್ಧಾರ ತೆಗೆದುಕೊಂಡು, ಕೊವಿಡ್​ ಕಾರ್ಯಪಡೆ ಪುನರಚಿಸಿದ್ದಾರೆ. ಪಕ್ಷದ ಮೂಲನಿವಾಸಿಯಾದ, ಡಾ ಸಿ.ಎನ್​. ಅಶ್ವತ್ಥನಾರಾಯಣ ಅವರಿಗೆ ಈ ಜವಾಬ್ದಾರಿ ವಹಿಸುವ ಮೂಲಕ ಡಾ ಸುಧಾಕರ್​ ಅವರಿಗೆ ಒಂದು ಸಂದೇಶ ನೀಡಿದ್ದಾರೆ. ಸರಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ ಮತ್ತು ಆರೋಗ್ಯ ಸಚಿವರಾಗಿ ಡಾ ಸುಧಾಕರ್​ ಅವರ ಕೆಲಸ  ಅಷ್ಟೇನು ಸಂತೃಪ್ತಿ ತಂದಿಲ್ಲ ಎಂಬ ಸಂದೇಶ ಡಾ. ಸುಧಾಕರ್​ಗೆ ಹೋಗಿದೆ ಎಂದು, ಹೆಸರು ಹೇಳಲಿಚ್ಚಿಸದ ಮಂತ್ರಿಯೋರ್ವರು ಟಿವಿ9 ಡಿಜಿಟಲ್​ಗೆ ತಿಳಿಸಿದ್ದಾರೆ.

ಇದನ್ನೂ ಓದಿ:

ಆಕ್ಸಿಜನ್ ವ್ಯತ್ಯಯ: 24 ಜನರೂ ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿಲ್ಲ ಎಂದ ಸಚಿವ ಸುರೇಶ್ ಕುಮಾರ್

ಹೊಟ್ಟೆ ನೋವಿನಿಂದ ಬಳಲುತ್ತಿರುವ ರೋಗಿಗೆ ಆಸ್ಪತ್ರೆಯಲ್ಲಿ ಬೆಡ್ ಇಲ್ಲ; 4 ದಿನದಿಂದ ತುಮಕೂರಿನ ವ್ಯಕ್ತಿ ಪರದಾಟ

(DCM Dr CN Ashwath Narayan appointed Karnataka Covid Task Force and CM BS Yediyurappa sent strongl signal to health minister Dr K Sudhakar)

Follow Us
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ