AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧುಗಿರಿಯಲ್ಲಿ ಕಾಂಗ್ರೆಸ್ ಜನಧ್ವನಿ ಯಾತ್ರೆ; ಕಾಂಗ್ರೆಸ್ ನಾಯಕತ್ವ ಅನಿವಾರ್ಯವಾಗಿದೆ ಎಂದ ಜಿ.ಪರಮೇಶ್ವರ್

ಮಧುಗಿರಿಯಲ್ಲಿ ಕಾಂಗ್ರೆಸ್ ಜನಧ್ವನಿ ಯಾತ್ರೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ದೇಶದಲ್ಲಿರುವ ಬಡತನ ನಿರ್ಮೂಲನೆ ಆಗಬೇಕಾದರೆ, ಕಾಂಗ್ರೆಸ್ ನಾಯಕತ್ವ ಅನಿವಾರ್ಯವಾಗಿದೆ ಎಂದು ಮಾಜಿ ಡಿಸಿಎಂ ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.

ಮಧುಗಿರಿಯಲ್ಲಿ ಕಾಂಗ್ರೆಸ್ ಜನಧ್ವನಿ ಯಾತ್ರೆ; ಕಾಂಗ್ರೆಸ್ ನಾಯಕತ್ವ ಅನಿವಾರ್ಯವಾಗಿದೆ ಎಂದ  ಜಿ.ಪರಮೇಶ್ವರ್
ಮಾಜಿ ಡಿಸಿಎಂ ಜಿ.ಪರಮೇಶ್ವರ್
shruti hegde
| Edited By: ರಶ್ಮಿ ಕಲ್ಲಕಟ್ಟ|

Updated on: Mar 07, 2021 | 6:27 PM

Share

ತುಮಕೂರು: ಮಧುಗಿರಿಯಲ್ಲಿ ಕಾಂಗ್ರೆಸ್ ಜನಧ್ವನಿ ಯಾತ್ರೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ದೇಶದಲ್ಲಿರುವ ಬಡತನ ನಿರ್ಮೂಲನೆ ಆಗಬೇಕಾದರೆ, ಕಾಂಗ್ರೆಸ್ ನಾಯಕತ್ವ ಅನಿವಾರ್ಯವಾಗಿದೆ ಎಂದು ಮಾಜಿ ಡಿಸಿಎಂ ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಈ ಕುರಿತಂತೆ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದೇಶದಲ್ಲಿ 7 ವರ್ಷಗಳಿಂದ ಏನಾಗ್ತಿದೆ, ಬಿಜೆಪಿ ಏನ್ ಮಾಡ್ತಿದೆ? ಜನರ ಬಡತನ ನಿರ್ಮೂಲನೆ ಮಾಡುತ್ತಾರೆಂದು ನಂಬಿದ್ದರು. ಉದ್ಯೋಗ ಸೃಷ್ಟಿ ಮಾಡುತ್ತಾರೆಂದು ಕೂಡ ಭಾವಿಸಿದ್ದರು. ಆದರೆ ಈಗ ಏನಾಗಿದೆ? ವ್ಯವಸ್ಥೆಗೆ ಬೆಂಕಿ ಬಿದ್ದು ಹೋಗಿದೆ. ದೇಶದ ಅರ್ಥವ್ಯವಸ್ಥೆಯೂ ಕುಸಿದಿದೆ. ಇನ್ನು, ಪೆಟ್ರೋಲ್, ಡೀಸೆಲ್, ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಇಂಧನದ ಮೇಲೆ ಅತಿ ಹೆಚ್ಚು ತೆರಿಗೆ ಹಾಕ್ತಿದ್ದಾರೆ. ಇಡೀ ವಿಶ್ವದಲ್ಲೇ ಭಾರತದಲ್ಲಿ ಅತಿ ಹೆಚ್ಚು ತೆರಿಗೆ ವಿಧಿಸಲಾಗುತ್ತಿದೆ. ಶೇ. 69ರಷ್ಟು ತೆರಿಗೆ ಹಾಕುವ ಅಗತ್ಯವಿದೆಯಾ? ಎಂದು ಪರಮೇಶ್ವರ್ ಪ್ರಶ್ನಿಸಿದ್ದಾರೆ.

ಈ ಕುರಿತಂತೆ ಮಾತನಾಡಿದ ಅವರು, ತೆರಿಗೆ ರೂಪದಲ್ಲಿ ಸಂಗ್ರಹಿಸಿದ ಹಣ ಏನು ಮಾಡುತ್ತಿದ್ದಾರೆ. ಇವರು ಯಾವುದಾದರು ಹೊಸ ಯೋಜನೆ ತಂದಿದ್ದಾರಾ? ದೇಶದಲ್ಲಿ ಸಾಮಾನ್ಯ ಜನರು ಪರದಾಡುವ ಸ್ಥಿತಿ ಬಂದಿದೆ. ಅತ್ಯಂತ ಕೆಟ್ಟ ಸರ್ಕಾರ ಇದೆ ಅಂದರೆ ಅದು ಬಿಜೆಪಿ ಸರ್ಕಾರ. ಒಂದೆಡೆ ಪಾಕಿಸ್ತಾನ, ಚೀನಾ ದೇಶಗಳು ದಬ್ಬಾಳಿಕೆ ಮಾಡುತ್ತಿವೆ. ನಿಮ್ಮ ವಿದೇಶಾಂಗ ನೀತಿ ಏನಾಯ್ತು, ಅದನ್ನ ಸರಿಪಡಿಸಿದ್ದೀರಾ? ಕೇಂದ್ರ ಬಿಜೆಪಿ ಸರ್ಕಾರಕ್ಕೆ ನೇರ ಪ್ರಶ್ನೆ ಕೇಳಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಸಂವಿಧಾನದ ಬಗ್ಗೆ ಬದ್ಧತೆ ಗೌರವ ಇದೆ. ಬಿಜೆಪಿಗೆ ಸಂವಿಧಾನದ ಬಗ್ಗೆ ಗೌರವ ಬದ್ಧತೆ ಇಲ್ಲ. ಯಾಕೆಂದರೆ ಬಿಜೆಪಿಗೆ ಪ್ರಸ್ತುತ ವ್ಯವಸ್ಥೆಗೆ ಪೂರಕವಾಗಿದ್ದಾರೆ. ಬಡವರು ಬಡವರಾಗಿರೋದು ಜೊತೆಗೆ ಶ್ರೀಮಂತರು ಶ್ರೀಮಂತರಾಗಿರೋದು ಬಿಜೆಪಿಗೆ ಇಷ್ಟ. ಈ ಕುರಿತು ಬದಲಾವಣೆ ಅವರಿಗೆ ಇಷ್ಟ ಇಲ್ಲ. ‘ಏನ್ಲಾ ಇಷ್ಟು ಎತ್ತರಕ್ಕೆ ಬೆಳೆದು ಬಿಟ್ಟೆ’ ಎಂದು ಹಳ್ಳಿಗಳಲ್ಲಿ ಹೇಳುತ್ತಾರೆ. ಕೆಲವು ವರ್ಗದವರು ಬೆಳೆಯೋದು ಕೆಲವರಿಗೆ ಇಷ್ಟ ಇಲ್ಲ. ಅನಂತಕುಮಾರ್ ಹೆಗಡೆ ಸಂವಿಧಾನ ಬದಲಾವಣೆ ಮಾಡೋ ಮಾತಾಡುತ್ತಾರೆ. ಸಂವಿಧಾನಕ್ಕೆ ತದ್ವಿರುದ್ದವಾದವರು ದುರದೃಷ್ಟವಶಾತ್ ಎರಡೂ ಕಡೆ ಅಧಿಕಾರದಲ್ಲಿ ಇದ್ದಾರೆ. ಯಡಿಯೂರಪ್ಪ ಹಿಂಬಾಗಿಲಿನಿಂದ ಮುಖ್ಯಮಂತ್ರಿ ಆಗಿದ್ದಾರೆ ಎಂದಿದ್ದಾರೆ.

ಈ ಕುರಿತಂತೆ ಮಾತನಾಡುತ್ತಾ, ಜನರಿಂದ ಲೂಟಿ ಮಾಡಿರೋ ದುಡ್ಡಿನಿಂದ ಅವರು ಮುಖ್ಯಮಂತ್ರಿ ಆಗಿದ್ದಾರೆ. ಶಾಸಕರನ್ನು ಖರೀದಿ ಮಾಡಿದ್ರು. ಲಜ್ಜೆಗೆಟ್ಟು ಮುಖ್ಯಮಂತ್ರಿ ಆದವರಿಗೆ ಮಾನ ಮರ್ಯಾದೆ ಇರಲು ಸಾದ್ಯನಾ? ಬಡವರ ಅಭಿವೃದ್ಧಿ ಮಾಡಲು ಸಾಧ್ಯನಾ? ನಾನು ಅಕ್ಕಿಯನ್ನು ನನ್ನಪ್ಪನ ಮನೆಯಿಂದ ಕೊಟ್ಟಿಲ್ಲ. ನಿಮ್ಮ ದುಡ್ಡು ನಿಮಗೆ ಕೊಟ್ಟಿದ್ದೇನೆ. ಈಗ ಅನ್ನಭಾಗ್ಯ ಅಕ್ಕಿ 3 ಕೆಜಿಗೆ ಇಳಿಸ್ತೀನಿ ಅಂತಾರೆ ಎಂದಿದ್ದಾರೆ.

ಇದನ್ನೂ ಓದಿ: ದೂರು ಹಿಂಪಡೆದಂತೆ ಟಿವಿಯಲ್ಲಿ ಪ್ರಸಾರವಾಗಿದ್ದನ್ನು ಹಿಂಪಡೆಯಲು ಸಾಧ್ಯವೇ: ಸಿದ್ದರಾಮಯ್ಯ ವ್ಯಂಗ್ಯ

ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೋಡೆತ್ತುಗಳಲ್ಲ, ಗುದ್ದಾಡುವ ಹೋರಿಗಳು: ಬಿ.ಶ್ರೀರಾಮುಲು

Follow Us
shruti hegde
shruti hegde
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ