AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸಹಾಯಕತೆ ವ್ಯಕ್ತಪಡಿಸಿದ ಡಿಸಿಎಂ ಗೋವಿಂದ ಕಾರಜೋಳ: ಆ ಕಡೆ ಗ್ರಾಮಸ್ಥರ ಸ್ವಯಂಕೃತ ಅಪರಾಧ, ಈ ಕಡೆ ಆರೋಗ್ಯ ಇಲಾಖೆ ನಿರ್ಲಕ್ಷ್ಯ

ಖಾನಾಪುರ ತಾಲೂಕಿನ ಗ್ರಾಮಗಳಲ್ಲಿ ಹೆಚ್ಚುತ್ತಿದೆ. ಗ್ರಾಮಸ್ಥರು ಎಚ್ಚೆತ್ತುಕೊಂಡಿಲ್ಲ, ಇನ್ನ ಆರೋಗ್ಯ ಇಲಾಖೆ ಕೂಡ ನಿರ್ಲಕ್ಷ್ಯವಹಿಸಿದೆ. ಖಾನಾಪುರ ತಾಲೂಕಿನ 9ಕ್ಕೂ ಹೆಚ್ಚು ಗ್ರಾಮಗಳು ಮೈಕ್ರೋ ಕಂಟೈನ್‌‌ಮೆಂಟ್ ಝೋನ್ ಗಳಾಗಿವೆ. ಥ್ರೋಟ್ ಸ್ವ್ಯಾಬ್ ವರದಿ ವಿಳಂಬದಿಂದಲೂ ಕೊರೊನಾ ಸೋಂಕು ಹೆಚ್ಚುತ್ತಿದೆ ಎಂಬುದು ಡಿಸಿಎಂ ಗೋವಿಂದ ಕಾರಜೋಳ ಅವರ ಅಳಲಾಗಿದೆ.

ಅಸಹಾಯಕತೆ ವ್ಯಕ್ತಪಡಿಸಿದ ಡಿಸಿಎಂ ಗೋವಿಂದ ಕಾರಜೋಳ: ಆ ಕಡೆ ಗ್ರಾಮಸ್ಥರ ಸ್ವಯಂಕೃತ ಅಪರಾಧ, ಈ ಕಡೆ ಆರೋಗ್ಯ ಇಲಾಖೆ ನಿರ್ಲಕ್ಷ್ಯ
ಗೋವಿಂದ ಕಾರಜೋಳ
ಸಾಧು ಶ್ರೀನಾಥ್​
|

Updated on: May 14, 2021 | 10:06 AM

Share

ಬೆಳಗಾವಿ: ಬೆಳಗಾವಿ ಜಿಲ್ಲಾ ನಗರ ಮತ್ತು ತಾಲೂಕು ಗ್ರಾಮಗಳಲ್ಲಿ ಮಹಾಮಾರಿ ಕೊರೊನಾ ಕಾಟ ತೀವ್ರವಾಗುತ್ತಿರುವುದರ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಕಳವಳ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಗೋವಿಂದ ಕಾರಜೋಳ ಅವರ ಸೋದರನ ಪುತ್ರ ಸಹ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾನೆ. ನಗರ ಪ್ರದೇಶ ಆಯ್ತು ಈಗ ಗ್ರಾಮೀಣ ಪ್ರದೇಶಗಳಲ್ಲಿಯೂ ಕೊರೊನಾ ಹೆಚ್ಚುತ್ತಿದೆ. ಪರಿಸ್ಥಿತಿ ಹೀಗಿರುವಾಗ ಒಂದೆಡೆ ಗ್ರಾಮಸ್ಥರ ಸ್ವಯಂಕೃತ ಅಪರಾಧ, ಮತ್ತೊಂದೆಡೆ ಆರೋಗ್ಯ ಇಲಾಖೆ ನಿರ್ಲಕ್ಷ್ಯ ಇದಕ್ಕೆ ಕಾರಣವಾಗುತ್ತಿದೆ ಎಂದು ಸಚಿವ ಗೋವಿಂದ ಕಾರಜೋಳ ಸೂಕ್ಷ್ಮವಾಗಿ ಹೇಳಿದ್ದಾರೆ.

ಮದುವೆ, ಅಂತ್ಯಕ್ರಿಯೆಯಲ್ಲಿ ಇಡೀ ಗ್ರಾಮಸ್ಥರು ಭಾಗವಹಿಸುತ್ತಿದ್ದಾರೆ ಎಂದು ಆತಂಕವ್ಯಕ್ತಪಡಿಸಿರುವ ಡಿಸಿಎಂ ಗೋವಿಂದ ಕಾರಜೋಳ ಗ್ರಾಮಗಳಲ್ಲಿ ಸೋಂಕು ಹೆಚ್ಚಳಕ್ಕೆ ವಲಸೆ ಕಾರ್ಮಿಕರು ಊರೊಳಗೆಯೇ ಸೇರಿಸಿಕೊಂಡಿರೋದು ಮತ್ತು ಮದುವೆ, ಮುಂಜಿ ಜಾತ್ರೆಯೂ ಕಾರಣವಾಗಿದೆ ಎಂದಿದ್ದಾರೆ. ಜಾತ್ರೆ ನಡೆಯುವ ಬಗ್ಗೆ ವಿಡಿಯೋಗಳನ್ನು ಕಳಿಸ್ತಾರೆ. ಮೃತರ ಅಂತ್ಯಕ್ರಿಯೆ ವೇಳೆ ಗ್ರಾಮಸ್ಥರು ನಿಯಮ ಪಾಲಿಸುತ್ತಿಲ್ಲ ಎಂದೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಕಳವಳಗೊಂಡಿದ್ದಾರೆ.

ಗ್ರಾಮಗಳಲ್ಲಿ ವಲಸಿಗರು, ಥ್ರೋಟ್ ಸ್ವ್ಯಾಬ್ ವರದಿ ವಿಳಂಬವೂ ಕಾರಣ:

ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಗ್ರಾಮಗಳಲ್ಲಿ ಹೆಚ್ಚುತ್ತಿದೆ. ಗ್ರಾಮಸ್ಥರು ಎಚ್ಚೆತ್ತುಕೊಂಡಿಲ್ಲ, ಇನ್ನ ಆರೋಗ್ಯ ಇಲಾಖೆ ಕೂಡ ನಿರ್ಲಕ್ಷ್ಯವಹಿಸಿದೆ. ಖಾನಾಪುರ ತಾಲೂಕಿನ 9ಕ್ಕೂ ಹೆಚ್ಚು ಗ್ರಾಮಗಳು ಮೈಕ್ರೋ ಕಂಟೈನ್‌‌ಮೆಂಟ್ ಝೋನ್ ಗಳಾಗಿವೆ. ಅಂಬೇವಾಡಿ ಗ್ರಾಮದಲ್ಲಿ 40ಕ್ಕೂ ಹೆಚ್ಚು ಜನರಿಗೆ ಕೊರೊನಾ ಕಾಣಿಸಿಕೊಂಡಿದೆ. ವಲಸಿಗರಿಂದಲೇ ಗ್ರಾಮಗಳಲ್ಲಿ ಡೆಡ್ಲಿ ಕೊರೊನಾ ಹೆಚ್ಚುತ್ತಿದೆ. ಖಾನಾಪುರ ತಾಲೂಕಿನ ಅಂಬೇವಾಡಿ, ನಂದಗಡ, ರುಮೇವಾಡಿ, ಹಲಕರ್ಣಿ, ಲೋಂಡಾ, ಅಶೋಕನಗರ, ಶಿರೋಲಿ, ಜಾಮಗಾಂವ ಗ್ರಾಮಗಳು ಮೈಕ್ರೋ ಕಂಟೈನ್‌ಮೆಂಟ್ ಝೋನ್ ಗಳಾಗಿ ಮಾರ್ಪಟ್ಟಿವೆ. ಆರೋಗ್ಯ ಇಲಾಖೆ ಸಕಾಲಕ್ಕೆ ಎಚ್ಚೆತ್ತುಕೊಂಡಿಲ್ಲ. ಥ್ರೋಟ್ ಸ್ವ್ಯಾಬ್ ವರದಿ ವಿಳಂಬದಿಂದಲೂ ಕೊರೊನಾ ಸೋಂಕು ಹೆಚ್ಚುತ್ತಿದೆ ಎಂಬುದು ಡಿಸಿಎಂ ಗೋವಿಂದ ಕಾರಜೋಳ ಅವರ ಅಳಲಾಗಿದೆ.

(DCM govind karjol lament on villagers and health department failure in containing coronavirus in belagavi district)

ನೂರು ವರ್ಷಗಳ ಸಮಸ್ಯೆಗಳನ್ನು ಮೋದಿ ಬಗೆಹರಿಸಿದ್ದಾರೆ, ಬೇರೆ ಯಾವ ಸಮಸ್ಯೆಗಳು ಉಳಿದಿವೆ: ಗೋವಿಂದ ಕಾರಜೋಳ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ