AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಡ್​ಗಳು ಖಾಲಿ ಇದ್ದರೂ ರೋಗಿಗಳು ಏಕೆ ಬರುತ್ತಿಲ್ಲ? ಬಿಮ್ಸ್ ನಿರ್ದೇಶಕರಿಗೆ ಡಿಸಿಎಂ ಲಕ್ಷ್ಮಣ ಸವದಿ ತರಾಟೆ

ಈ ಮಾಹಿತಿ ತಿಳಿದು ಕೋಪಗೊಂಡ ಡಿಸಿಎಂ ಸವದಿ, ನೀವು ಜನರ ಜೀವ ತಿನ್ನುತ್ತೀರಲ್ರಿ.. ನಿಮಗೆ ದೊಡ್ಡ ನಮಸ್ಕಾರ. ನಿಮ್ಮಿಂದ ಸರ್ಕಾರಕ್ಕೆ ಒಳ್ಳೇ ಹೆಸರು ಬರ್ತಿದೆ ಎಂದು ವ್ಯಂಗ್ಯವಾಗಿ ಗರಂ ಆದರು.

ಬೆಡ್​ಗಳು ಖಾಲಿ ಇದ್ದರೂ ರೋಗಿಗಳು ಏಕೆ ಬರುತ್ತಿಲ್ಲ? ಬಿಮ್ಸ್ ನಿರ್ದೇಶಕರಿಗೆ ಡಿಸಿಎಂ ಲಕ್ಷ್ಮಣ ಸವದಿ ತರಾಟೆ
ಡಿಸಿಎಂ ಲಕ್ಷ್ಮಣ ಸವದಿ ಮತ್ತು ಬಿಮ್ಸ್ ಆಸ್ಪತ್ರೆ
Follow us
guruganesh bhat
|

Updated on: Apr 28, 2021 | 8:11 PM

ಬೆಳಗಾವಿ: ಬೆಳಗಾವಿಯಲ್ಲಿ ಕೊರೊನಾ ನಿರ್ವಹಣೆ ಕುರಿತು ಡಿಸಿಎಂ ಲಕ್ಷ್ಮಣ ಸವದಿ ಸಭೆ ನಡೆಸಿ ಬಿಮ್ಸ್​ ನಿರ್ದೇಶಕ ಬಿಮ್ಸ್ ನಿರ್ದೇಶಕ ವಿನಯ್​ ದಾಸ್ತಿಕೊಪ್ಪಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ಐಸಿಯು ಬೆಡ್, ಆಕ್ಸಿಜನ್ ಬೆಡ್‌ಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಗೆ ಬಿಮ್ಸ್ ನಿರ್ದೇಶಕ ವಿನಯ್​ ದಾಸ್ತಿಕೊಪ್ಪ ಆಸ್ಪತ್ರೆಯಲ್ಲಿ ಬೆಡ್‌ ಖಾಲಿ ಇರುವ ಬಗ್ಗೆ ಮಾಹಿತಿ ನೀಡಿದರು.

ಈ ಮಾಹಿತಿ ತಿಳಿದು ಕೋಪಗೊಂಡ ಡಿಸಿಎಂ ಸವದಿ, ನೀವು ಜನರ ಜೀವ ತಿನ್ನುತ್ತೀರಲ್ರಿ.. ನಿಮಗೆ ದೊಡ್ಡ ನಮಸ್ಕಾರ. ನಿಮ್ಮಿಂದ ಸರ್ಕಾರಕ್ಕೆ ಒಳ್ಳೇ ಹೆಸರು ಬರ್ತಿದೆ ಎಂದು ವ್ಯಂಗ್ಯವಾಗಿ ಗರಂ ಆದರು. ಬೆಡ್​ಗಳು ಖಾಲಿ ಇದ್ದರೂ ರೋಗಿಗಳು ಏಕೆ ಬರುತ್ತಿಲ್ಲ? ತಾಲೂಕು ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಬೆಡ್​ ಸಿಗುತ್ತಿಲ್ಲ. ಆದರೆ ಜಿಲ್ಲಾಸ್ಪತ್ರೆಗೆ ರೋಗಿಗಳು ಯಾಕೆ ಬರುತ್ತಿಲ್ಲ? ಬಿಮ್ಸ್ ಆಸ್ಪತ್ರೆ ಅಂದ್ರೆ ಅಸ್ತವ್ಯಸ್ತ ಆಸ್ಪತ್ರೆ ಅಂತಿದ್ದಾರೆ. ಬಿಮ್ಸ್​ಗೆ ಹೋದರೆ ಜೀವಂತವಾಗಿ ಬರಲ್ಲ ಅಂತಿದ್ದಾರೆ. ಬಿಮ್ಸ್​ ಆಸ್ಪತ್ರೆ ಬಗ್ಗೆ ಜನ ಈ ರೀತಿ ಮಾತಾಡ್ತಿದ್ದಾರೆ ಎಂದು ಪ್ರಶ್ನೆಗಳ ಸುರಿಮಳೆಗೈದರು.

ಕರ್ನಾಟಕ ಕೊರೊನಾ ಲೆಕ್ಕಾಚಾರ ಕರ್ನಾಟಕ ರಾಜ್ಯದಲ್ಲಿ ಕೊರೊನಾ ಸೋಂಕಿನ ಅಂಕಿಗಳು ಬುಧವಾರ ಮತ್ತೊಂದು ದಾಖಲೆ ಬರೆದಿವೆ. ರಾಜ್ಯದಲ್ಲಿ ಒಟ್ಟು 39,047 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, 229 ಜನರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ 22,596 ಜನರಿಗೆ ಸೋಂಕು ದೃಢಪಟ್ಟಿದ್ದು, 137 ಜನರು ಸಾವನ್ನಪ್ಪಿದ್ದಾರೆ.

ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 14,39,822ಕ್ಕೆ (14.39 ಲಕ್ಷ) ಏರಿಕೆಯಾಗಿದೆ. ಈ ಪೈಕಿ 10,95,883 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 229 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ ಮೃತಪಟ್ಟವರ ಒಟ್ಟು ಸಂಖ್ಯೆ 15,036ಕ್ಕೆ ಏರಿಕೆಯಾಗಿದೆ. 3,28,884 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಲ್ಲಿ ಇಂದು ಒಂದೇ ದಿನ 22,596 ಜನರಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಒಟ್ಟು ಸಂಖ್ಯೆ 7,10,347ಕ್ಕೆ ಏರಿಕೆಯಾಗಿದೆ. ಈ ಪೈಕಿ 4,80,055 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 137 ಜನರ ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ ಸತ್ತವರ ಒಟ್ಟು ಸಂಖ್ಯೆ 6,139ಕ್ಕೆ ಏರಿಕೆಯಾಗಿದೆ. 224152 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ರಾಜ್ಯದಲ್ಲಿಂದು ಹೊಸದಾಗಿ 39,047 ಜನರಿಗೆ ಕೊರೊನಾ ದೃಢಪಟ್ಟಿದೆ. ಈ ಪೈಕಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿಹೆಚ್ಚು, ಅಂದರೆ 22,596 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಉಳಿದಂತೆ 5 ಜಿಲ್ಲೆಗಳಲ್ಲಿ ಸಾವಿರಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಮೈಸೂರು 1759, ಕೋಲಾರ 1194, ತುಮಕೂರು 1174, ಬಳ್ಳಾರಿ 1106, ಹಾಸನ 1001 ಜನರಲ್ಲಿ ಸೋಂಕು ದೃಢಪಟ್ಟಿದೆ.

ಇದನ್ನೂ ಓದಿ: Covid-19 Karnataka Update: ಕರ್ನಾಟಕದಲ್ಲಿ ಇಂದು 39,047 ಜನರಿಗೆ ಕೊರೊನಾ ಸೋಂಕು, 137 ಸಾವು

Covid 19 Treatment in Bengaluru: ಬೆಂಗಳೂರಿನಲ್ಲಿ ತುರ್ತು ಕೊರೊನಾ ಆರೋಗ್ಯ ಸೇವೆಗಳಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ

(DCM Laxman Savadi arrogance about BIMS hospital Belagavi)

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ