AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವರಾಜ್​ ಸ್ವಾಮಿ ಬಿಜೆಪಿ ಅಥವಾ ಸಂಘ ಪರಿವಾರಕ್ಕೆ ಸಂಬಂಧಪಟ್ಟವನಲ್ಲ: ಡಿಸಿಎಂ ಸವದಿ

ನಮ್ಮದು ಸಾರ್ವಜನಿಕ ಜೀವನ..ಯಾರ್ಯಾರೋ ಮನೆಗೆ ಬರುತ್ತಾರೆ. ನಾನು ಬಿಜೆಪಿ ಕಾರ್ಯಕರ್ತ, ಸಂಘಪರಿವಾರದ ಮುಖಂಡ ಎಂದು ಪರಿಚಯ ಮಾಡಿಕೊಳ್ಳುತ್ತಾರೆ.

ಯುವರಾಜ್​ ಸ್ವಾಮಿ  ಬಿಜೆಪಿ ಅಥವಾ ಸಂಘ ಪರಿವಾರಕ್ಕೆ ಸಂಬಂಧಪಟ್ಟವನಲ್ಲ: ಡಿಸಿಎಂ ಸವದಿ
ಸಚಿವ ಲಕ್ಷ್ಮಣ್​ ಸವದಿ
Lakshmi Hegde
| Edited By: |

Updated on:Jan 09, 2021 | 12:20 PM

Share

ಬೆಂಗಳೂರು: ವಿವಿಧ ರಾಜಕಾರಣಿಗಳ ಹೆಸರಲ್ಲಿ ಹಲವರಿಗೆ ವಂಚನೆ ಮಾಡಿ, ಇದೀಗ ಸಿಸಿಬಿ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಯುವರಾಜ್​ ಸ್ವಾಮಿಯಿಂದಾಗಿ ಸ್ಯಾಂಡಲ್​ವುಡ್​ ಸ್ವೀಟಿ ರಾಧಿಕಾ ಕುಮಾರಸ್ವಾಮಿಗೆ ಈಗಾಗಲೇ ಕಂಟಕ ಎದುರಾಗಿದೆ. ಯುವರಾಜ್​ ಖಾತೆಯಿಂದ ರಾಧಿಕಾರ ಅಕೌಂಟ್​ಗೆ ಹಣ ವರ್ಗಾವಣೆಯಾದ ಹಿನ್ನೆಲೆಯಲ್ಲಿ, ನಟಿಯನ್ನೂ ಸಿಸಿಬಿ ಪೊಲೀಸರು ವಿಚಾರಣೆ ಮಾಡಿದ್ದಾರೆ.

ಇನ್ನು ವಂಚಕ ಯುವರಾಜ್​ ಸ್ವಾಮಿ ಹಲವು ಗಣ್ಯರ ಜತೆ ಇರುವ ಫೋಟೋಗಳೂ ವೈರಲ್​ ಆಗುತ್ತಿದ್ದು, ಕುತೂಹಲ ಮೂಡಿಸಿದೆ. ಯುವರಾಜ್​ ಸ್ವಾಮಿ ಡಿಸಿಎಂ ಲಕ್ಷ್ಮಣ್​ ಸವದಿ, ಕೆ.ಸಿ.ವೇಣುಗೋಪಾಲ್​, ಸಚಿವ ವಿ.ಸೋಮಣ್ಣ, ಮುರುಗೇಶ್​ ನಿರಾಣಿ ಜತೆಗೆ ಇರುವ ಫೋಟೋಗಳೂ ಸಿಕ್ಕಾಪಟೆ ವೈರಲ್ ಆಗುತ್ತಿವೆ.

ಆತನ ಹಿನ್ನೆಲೆ  ನನಗೆ ಗೊತ್ತಿರಲಿಲ್ಲ.. ಇನ್ನು ಲಕ್ಷ್ಮಣ್​ ಸವದಿಗೆ ಯುವರಾಜ್ ಸನ್ಮಾನ ಮಾಡುತ್ತಿರುವ ಫೋಟೋ ವೈರಲ್​ ಆದ ಬೆನ್ನಲ್ಲೇ,  ಅಥಣಿಯಲ್ಲಿ ಲಕ್ಷ್ಮಣ್​ ಸವದಿ ಪ್ರತಿಕ್ರಿಯೆ ನೀಡಿದ್ದು, ಯುವರಾಜ್​ನ ಹಿನ್ನೆಲೆ ನನಗೆ ಮೊದಲು ಗೊತ್ತಿರಲಿಲ್ಲ. ನಮ್ಮದು ಸಾರ್ವಜನಿಕ ಜೀವನ..ಯಾರ್ಯಾರೋ ಮನೆಗೆ ಬರುತ್ತಾರೆ. ನಾನು ಬಿಜೆಪಿ ಕಾರ್ಯಕರ್ತ, ಸಂಘ ಪರಿವಾರದ ಮುಖಂಡ ಎಂದು ಪರಿಚಯ ಮಾಡಿಕೊಳ್ಳುತ್ತಾರೆ. ಹೀಗೆ ಹೇಳಿಕೊಂಡು ಸತ್ಕಾರ ಮಾಡಲು ಬರುವವರನ್ನು ತಿರಸ್ಕಾರ ಮಾಡಲು ಸಾಧ್ಯವಾಗುವುದಿಲ್ಲ. ಯುವರಾಜ್​ ಕೂಡ ಹಾಗೇ ಬಂದಿದ್ದ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದೀಗ ಯುವರಾಜ್​ ಸ್ವಾಮಿ ಪೊಲೀಸ್ ವಶದಲ್ಲಿದ್ದಾನೆ. ಅವನ ಬಗ್ಗೆ ನಾವು ಅನೇಕ ವಿಚಾರಗಳನ್ನು ತಿಳಿದುಕೊಂಡಿದ್ದೇವೆ. ಬಿಜೆಪಿಯೊಂದಿಗಾಗಲೀ, ಸಂಘ ಪರಿವಾರಕ್ಕಾಗಲೀ ಅವನು ಸಂಬಂಧಪಟ್ಟವನಲ್ಲ ಎಂದು ಹೇಳಿದ್ದಾರೆ.

ಚಿತ್ರದುರ್ಗದ ಮಠಕ್ಕೆ ಯುವರಾಜ್ ಸ್ವಾಮೀಜಿಯಾಗಿದ್ದ.. ಆದರೆ ಆತನನ್ನು ಅಲ್ಲಿಂದ ಹೊರಗೆ ಹಾಕಿದ್ರು -ಲಕ್ಷ್ಮಣ ಸವದಿ

Published On - 12:18 pm, Sat, 9 January 21

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್