AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವರಾಜ್​ ಸ್ವಾಮಿ ಬಿಜೆಪಿ ಅಥವಾ ಸಂಘ ಪರಿವಾರಕ್ಕೆ ಸಂಬಂಧಪಟ್ಟವನಲ್ಲ: ಡಿಸಿಎಂ ಸವದಿ

ನಮ್ಮದು ಸಾರ್ವಜನಿಕ ಜೀವನ..ಯಾರ್ಯಾರೋ ಮನೆಗೆ ಬರುತ್ತಾರೆ. ನಾನು ಬಿಜೆಪಿ ಕಾರ್ಯಕರ್ತ, ಸಂಘಪರಿವಾರದ ಮುಖಂಡ ಎಂದು ಪರಿಚಯ ಮಾಡಿಕೊಳ್ಳುತ್ತಾರೆ.

ಯುವರಾಜ್​ ಸ್ವಾಮಿ  ಬಿಜೆಪಿ ಅಥವಾ ಸಂಘ ಪರಿವಾರಕ್ಕೆ ಸಂಬಂಧಪಟ್ಟವನಲ್ಲ: ಡಿಸಿಎಂ ಸವದಿ
ಸಚಿವ ಲಕ್ಷ್ಮಣ್​ ಸವದಿ
Lakshmi Hegde
| Edited By: ಸಾಧು ಶ್ರೀನಾಥ್​|

Updated on:Jan 09, 2021 | 12:20 PM

Share

ಬೆಂಗಳೂರು: ವಿವಿಧ ರಾಜಕಾರಣಿಗಳ ಹೆಸರಲ್ಲಿ ಹಲವರಿಗೆ ವಂಚನೆ ಮಾಡಿ, ಇದೀಗ ಸಿಸಿಬಿ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಯುವರಾಜ್​ ಸ್ವಾಮಿಯಿಂದಾಗಿ ಸ್ಯಾಂಡಲ್​ವುಡ್​ ಸ್ವೀಟಿ ರಾಧಿಕಾ ಕುಮಾರಸ್ವಾಮಿಗೆ ಈಗಾಗಲೇ ಕಂಟಕ ಎದುರಾಗಿದೆ. ಯುವರಾಜ್​ ಖಾತೆಯಿಂದ ರಾಧಿಕಾರ ಅಕೌಂಟ್​ಗೆ ಹಣ ವರ್ಗಾವಣೆಯಾದ ಹಿನ್ನೆಲೆಯಲ್ಲಿ, ನಟಿಯನ್ನೂ ಸಿಸಿಬಿ ಪೊಲೀಸರು ವಿಚಾರಣೆ ಮಾಡಿದ್ದಾರೆ.

ಇನ್ನು ವಂಚಕ ಯುವರಾಜ್​ ಸ್ವಾಮಿ ಹಲವು ಗಣ್ಯರ ಜತೆ ಇರುವ ಫೋಟೋಗಳೂ ವೈರಲ್​ ಆಗುತ್ತಿದ್ದು, ಕುತೂಹಲ ಮೂಡಿಸಿದೆ. ಯುವರಾಜ್​ ಸ್ವಾಮಿ ಡಿಸಿಎಂ ಲಕ್ಷ್ಮಣ್​ ಸವದಿ, ಕೆ.ಸಿ.ವೇಣುಗೋಪಾಲ್​, ಸಚಿವ ವಿ.ಸೋಮಣ್ಣ, ಮುರುಗೇಶ್​ ನಿರಾಣಿ ಜತೆಗೆ ಇರುವ ಫೋಟೋಗಳೂ ಸಿಕ್ಕಾಪಟೆ ವೈರಲ್ ಆಗುತ್ತಿವೆ.

ಆತನ ಹಿನ್ನೆಲೆ  ನನಗೆ ಗೊತ್ತಿರಲಿಲ್ಲ.. ಇನ್ನು ಲಕ್ಷ್ಮಣ್​ ಸವದಿಗೆ ಯುವರಾಜ್ ಸನ್ಮಾನ ಮಾಡುತ್ತಿರುವ ಫೋಟೋ ವೈರಲ್​ ಆದ ಬೆನ್ನಲ್ಲೇ,  ಅಥಣಿಯಲ್ಲಿ ಲಕ್ಷ್ಮಣ್​ ಸವದಿ ಪ್ರತಿಕ್ರಿಯೆ ನೀಡಿದ್ದು, ಯುವರಾಜ್​ನ ಹಿನ್ನೆಲೆ ನನಗೆ ಮೊದಲು ಗೊತ್ತಿರಲಿಲ್ಲ. ನಮ್ಮದು ಸಾರ್ವಜನಿಕ ಜೀವನ..ಯಾರ್ಯಾರೋ ಮನೆಗೆ ಬರುತ್ತಾರೆ. ನಾನು ಬಿಜೆಪಿ ಕಾರ್ಯಕರ್ತ, ಸಂಘ ಪರಿವಾರದ ಮುಖಂಡ ಎಂದು ಪರಿಚಯ ಮಾಡಿಕೊಳ್ಳುತ್ತಾರೆ. ಹೀಗೆ ಹೇಳಿಕೊಂಡು ಸತ್ಕಾರ ಮಾಡಲು ಬರುವವರನ್ನು ತಿರಸ್ಕಾರ ಮಾಡಲು ಸಾಧ್ಯವಾಗುವುದಿಲ್ಲ. ಯುವರಾಜ್​ ಕೂಡ ಹಾಗೇ ಬಂದಿದ್ದ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದೀಗ ಯುವರಾಜ್​ ಸ್ವಾಮಿ ಪೊಲೀಸ್ ವಶದಲ್ಲಿದ್ದಾನೆ. ಅವನ ಬಗ್ಗೆ ನಾವು ಅನೇಕ ವಿಚಾರಗಳನ್ನು ತಿಳಿದುಕೊಂಡಿದ್ದೇವೆ. ಬಿಜೆಪಿಯೊಂದಿಗಾಗಲೀ, ಸಂಘ ಪರಿವಾರಕ್ಕಾಗಲೀ ಅವನು ಸಂಬಂಧಪಟ್ಟವನಲ್ಲ ಎಂದು ಹೇಳಿದ್ದಾರೆ.

ಚಿತ್ರದುರ್ಗದ ಮಠಕ್ಕೆ ಯುವರಾಜ್ ಸ್ವಾಮೀಜಿಯಾಗಿದ್ದ.. ಆದರೆ ಆತನನ್ನು ಅಲ್ಲಿಂದ ಹೊರಗೆ ಹಾಕಿದ್ರು -ಲಕ್ಷ್ಮಣ ಸವದಿ

Published On - 12:18 pm, Sat, 9 January 21

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ