AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವರಾಜ್​ ಸ್ವಾಮಿ ಬಿಜೆಪಿ ಅಥವಾ ಸಂಘ ಪರಿವಾರಕ್ಕೆ ಸಂಬಂಧಪಟ್ಟವನಲ್ಲ: ಡಿಸಿಎಂ ಸವದಿ

ನಮ್ಮದು ಸಾರ್ವಜನಿಕ ಜೀವನ..ಯಾರ್ಯಾರೋ ಮನೆಗೆ ಬರುತ್ತಾರೆ. ನಾನು ಬಿಜೆಪಿ ಕಾರ್ಯಕರ್ತ, ಸಂಘಪರಿವಾರದ ಮುಖಂಡ ಎಂದು ಪರಿಚಯ ಮಾಡಿಕೊಳ್ಳುತ್ತಾರೆ.

ಯುವರಾಜ್​ ಸ್ವಾಮಿ  ಬಿಜೆಪಿ ಅಥವಾ ಸಂಘ ಪರಿವಾರಕ್ಕೆ ಸಂಬಂಧಪಟ್ಟವನಲ್ಲ: ಡಿಸಿಎಂ ಸವದಿ
ಸಚಿವ ಲಕ್ಷ್ಮಣ್​ ಸವದಿ
Lakshmi Hegde
| Edited By: ಸಾಧು ಶ್ರೀನಾಥ್​|

Updated on:Jan 09, 2021 | 12:20 PM

Share

ಬೆಂಗಳೂರು: ವಿವಿಧ ರಾಜಕಾರಣಿಗಳ ಹೆಸರಲ್ಲಿ ಹಲವರಿಗೆ ವಂಚನೆ ಮಾಡಿ, ಇದೀಗ ಸಿಸಿಬಿ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಯುವರಾಜ್​ ಸ್ವಾಮಿಯಿಂದಾಗಿ ಸ್ಯಾಂಡಲ್​ವುಡ್​ ಸ್ವೀಟಿ ರಾಧಿಕಾ ಕುಮಾರಸ್ವಾಮಿಗೆ ಈಗಾಗಲೇ ಕಂಟಕ ಎದುರಾಗಿದೆ. ಯುವರಾಜ್​ ಖಾತೆಯಿಂದ ರಾಧಿಕಾರ ಅಕೌಂಟ್​ಗೆ ಹಣ ವರ್ಗಾವಣೆಯಾದ ಹಿನ್ನೆಲೆಯಲ್ಲಿ, ನಟಿಯನ್ನೂ ಸಿಸಿಬಿ ಪೊಲೀಸರು ವಿಚಾರಣೆ ಮಾಡಿದ್ದಾರೆ.

ಇನ್ನು ವಂಚಕ ಯುವರಾಜ್​ ಸ್ವಾಮಿ ಹಲವು ಗಣ್ಯರ ಜತೆ ಇರುವ ಫೋಟೋಗಳೂ ವೈರಲ್​ ಆಗುತ್ತಿದ್ದು, ಕುತೂಹಲ ಮೂಡಿಸಿದೆ. ಯುವರಾಜ್​ ಸ್ವಾಮಿ ಡಿಸಿಎಂ ಲಕ್ಷ್ಮಣ್​ ಸವದಿ, ಕೆ.ಸಿ.ವೇಣುಗೋಪಾಲ್​, ಸಚಿವ ವಿ.ಸೋಮಣ್ಣ, ಮುರುಗೇಶ್​ ನಿರಾಣಿ ಜತೆಗೆ ಇರುವ ಫೋಟೋಗಳೂ ಸಿಕ್ಕಾಪಟೆ ವೈರಲ್ ಆಗುತ್ತಿವೆ.

ಆತನ ಹಿನ್ನೆಲೆ  ನನಗೆ ಗೊತ್ತಿರಲಿಲ್ಲ.. ಇನ್ನು ಲಕ್ಷ್ಮಣ್​ ಸವದಿಗೆ ಯುವರಾಜ್ ಸನ್ಮಾನ ಮಾಡುತ್ತಿರುವ ಫೋಟೋ ವೈರಲ್​ ಆದ ಬೆನ್ನಲ್ಲೇ,  ಅಥಣಿಯಲ್ಲಿ ಲಕ್ಷ್ಮಣ್​ ಸವದಿ ಪ್ರತಿಕ್ರಿಯೆ ನೀಡಿದ್ದು, ಯುವರಾಜ್​ನ ಹಿನ್ನೆಲೆ ನನಗೆ ಮೊದಲು ಗೊತ್ತಿರಲಿಲ್ಲ. ನಮ್ಮದು ಸಾರ್ವಜನಿಕ ಜೀವನ..ಯಾರ್ಯಾರೋ ಮನೆಗೆ ಬರುತ್ತಾರೆ. ನಾನು ಬಿಜೆಪಿ ಕಾರ್ಯಕರ್ತ, ಸಂಘ ಪರಿವಾರದ ಮುಖಂಡ ಎಂದು ಪರಿಚಯ ಮಾಡಿಕೊಳ್ಳುತ್ತಾರೆ. ಹೀಗೆ ಹೇಳಿಕೊಂಡು ಸತ್ಕಾರ ಮಾಡಲು ಬರುವವರನ್ನು ತಿರಸ್ಕಾರ ಮಾಡಲು ಸಾಧ್ಯವಾಗುವುದಿಲ್ಲ. ಯುವರಾಜ್​ ಕೂಡ ಹಾಗೇ ಬಂದಿದ್ದ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದೀಗ ಯುವರಾಜ್​ ಸ್ವಾಮಿ ಪೊಲೀಸ್ ವಶದಲ್ಲಿದ್ದಾನೆ. ಅವನ ಬಗ್ಗೆ ನಾವು ಅನೇಕ ವಿಚಾರಗಳನ್ನು ತಿಳಿದುಕೊಂಡಿದ್ದೇವೆ. ಬಿಜೆಪಿಯೊಂದಿಗಾಗಲೀ, ಸಂಘ ಪರಿವಾರಕ್ಕಾಗಲೀ ಅವನು ಸಂಬಂಧಪಟ್ಟವನಲ್ಲ ಎಂದು ಹೇಳಿದ್ದಾರೆ.

ಚಿತ್ರದುರ್ಗದ ಮಠಕ್ಕೆ ಯುವರಾಜ್ ಸ್ವಾಮೀಜಿಯಾಗಿದ್ದ.. ಆದರೆ ಆತನನ್ನು ಅಲ್ಲಿಂದ ಹೊರಗೆ ಹಾಕಿದ್ರು -ಲಕ್ಷ್ಮಣ ಸವದಿ

Published On - 12:18 pm, Sat, 9 January 21

Follow Us
Lakshmi Hegde
Lakshmi Hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು