AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವರಾಜ್​ ಸ್ವಾಮಿ ಬಿಜೆಪಿ ಅಥವಾ ಸಂಘ ಪರಿವಾರಕ್ಕೆ ಸಂಬಂಧಪಟ್ಟವನಲ್ಲ: ಡಿಸಿಎಂ ಸವದಿ

ನಮ್ಮದು ಸಾರ್ವಜನಿಕ ಜೀವನ..ಯಾರ್ಯಾರೋ ಮನೆಗೆ ಬರುತ್ತಾರೆ. ನಾನು ಬಿಜೆಪಿ ಕಾರ್ಯಕರ್ತ, ಸಂಘಪರಿವಾರದ ಮುಖಂಡ ಎಂದು ಪರಿಚಯ ಮಾಡಿಕೊಳ್ಳುತ್ತಾರೆ.

ಯುವರಾಜ್​ ಸ್ವಾಮಿ  ಬಿಜೆಪಿ ಅಥವಾ ಸಂಘ ಪರಿವಾರಕ್ಕೆ ಸಂಬಂಧಪಟ್ಟವನಲ್ಲ: ಡಿಸಿಎಂ ಸವದಿ
ಸಚಿವ ಲಕ್ಷ್ಮಣ್​ ಸವದಿ
Lakshmi Hegde
| Edited By: |

Updated on:Jan 09, 2021 | 12:20 PM

Share

ಬೆಂಗಳೂರು: ವಿವಿಧ ರಾಜಕಾರಣಿಗಳ ಹೆಸರಲ್ಲಿ ಹಲವರಿಗೆ ವಂಚನೆ ಮಾಡಿ, ಇದೀಗ ಸಿಸಿಬಿ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಯುವರಾಜ್​ ಸ್ವಾಮಿಯಿಂದಾಗಿ ಸ್ಯಾಂಡಲ್​ವುಡ್​ ಸ್ವೀಟಿ ರಾಧಿಕಾ ಕುಮಾರಸ್ವಾಮಿಗೆ ಈಗಾಗಲೇ ಕಂಟಕ ಎದುರಾಗಿದೆ. ಯುವರಾಜ್​ ಖಾತೆಯಿಂದ ರಾಧಿಕಾರ ಅಕೌಂಟ್​ಗೆ ಹಣ ವರ್ಗಾವಣೆಯಾದ ಹಿನ್ನೆಲೆಯಲ್ಲಿ, ನಟಿಯನ್ನೂ ಸಿಸಿಬಿ ಪೊಲೀಸರು ವಿಚಾರಣೆ ಮಾಡಿದ್ದಾರೆ.

ಇನ್ನು ವಂಚಕ ಯುವರಾಜ್​ ಸ್ವಾಮಿ ಹಲವು ಗಣ್ಯರ ಜತೆ ಇರುವ ಫೋಟೋಗಳೂ ವೈರಲ್​ ಆಗುತ್ತಿದ್ದು, ಕುತೂಹಲ ಮೂಡಿಸಿದೆ. ಯುವರಾಜ್​ ಸ್ವಾಮಿ ಡಿಸಿಎಂ ಲಕ್ಷ್ಮಣ್​ ಸವದಿ, ಕೆ.ಸಿ.ವೇಣುಗೋಪಾಲ್​, ಸಚಿವ ವಿ.ಸೋಮಣ್ಣ, ಮುರುಗೇಶ್​ ನಿರಾಣಿ ಜತೆಗೆ ಇರುವ ಫೋಟೋಗಳೂ ಸಿಕ್ಕಾಪಟೆ ವೈರಲ್ ಆಗುತ್ತಿವೆ.

ಆತನ ಹಿನ್ನೆಲೆ  ನನಗೆ ಗೊತ್ತಿರಲಿಲ್ಲ.. ಇನ್ನು ಲಕ್ಷ್ಮಣ್​ ಸವದಿಗೆ ಯುವರಾಜ್ ಸನ್ಮಾನ ಮಾಡುತ್ತಿರುವ ಫೋಟೋ ವೈರಲ್​ ಆದ ಬೆನ್ನಲ್ಲೇ,  ಅಥಣಿಯಲ್ಲಿ ಲಕ್ಷ್ಮಣ್​ ಸವದಿ ಪ್ರತಿಕ್ರಿಯೆ ನೀಡಿದ್ದು, ಯುವರಾಜ್​ನ ಹಿನ್ನೆಲೆ ನನಗೆ ಮೊದಲು ಗೊತ್ತಿರಲಿಲ್ಲ. ನಮ್ಮದು ಸಾರ್ವಜನಿಕ ಜೀವನ..ಯಾರ್ಯಾರೋ ಮನೆಗೆ ಬರುತ್ತಾರೆ. ನಾನು ಬಿಜೆಪಿ ಕಾರ್ಯಕರ್ತ, ಸಂಘ ಪರಿವಾರದ ಮುಖಂಡ ಎಂದು ಪರಿಚಯ ಮಾಡಿಕೊಳ್ಳುತ್ತಾರೆ. ಹೀಗೆ ಹೇಳಿಕೊಂಡು ಸತ್ಕಾರ ಮಾಡಲು ಬರುವವರನ್ನು ತಿರಸ್ಕಾರ ಮಾಡಲು ಸಾಧ್ಯವಾಗುವುದಿಲ್ಲ. ಯುವರಾಜ್​ ಕೂಡ ಹಾಗೇ ಬಂದಿದ್ದ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದೀಗ ಯುವರಾಜ್​ ಸ್ವಾಮಿ ಪೊಲೀಸ್ ವಶದಲ್ಲಿದ್ದಾನೆ. ಅವನ ಬಗ್ಗೆ ನಾವು ಅನೇಕ ವಿಚಾರಗಳನ್ನು ತಿಳಿದುಕೊಂಡಿದ್ದೇವೆ. ಬಿಜೆಪಿಯೊಂದಿಗಾಗಲೀ, ಸಂಘ ಪರಿವಾರಕ್ಕಾಗಲೀ ಅವನು ಸಂಬಂಧಪಟ್ಟವನಲ್ಲ ಎಂದು ಹೇಳಿದ್ದಾರೆ.

ಚಿತ್ರದುರ್ಗದ ಮಠಕ್ಕೆ ಯುವರಾಜ್ ಸ್ವಾಮೀಜಿಯಾಗಿದ್ದ.. ಆದರೆ ಆತನನ್ನು ಅಲ್ಲಿಂದ ಹೊರಗೆ ಹಾಕಿದ್ರು -ಲಕ್ಷ್ಮಣ ಸವದಿ

Published On - 12:18 pm, Sat, 9 January 21

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!