AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಪ್ರವಾಸ ಪೂರ್ವ ನಿಯೋಜಿತವಾಗಿತ್ತು: ಸವದಿ

ಬೆಂಗಳೂರು: ಏಕಾಏಕಿ ದೆಹಲಿ ಪ್ರವಾಸ ಮಾಡಿ ರಾಜ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿ ಇಂದು ಬೆಂಗಳೂರಿಗೆ ವಾಪಸ್ಸಾದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.ಈ ವೇಳೆ ಅವರು ತನ್ನ ದೆಹಲಿ ಪ್ರವಾಸ ಪೂರ್ವ ನಿಯೋಜಿತವಾಗಿತ್ತು ಎಂದರು. ನನ್ನ ಇಲಾಖೆಗೆ ಸಂಬಂಧಿಸಿದ ಕೆಲಸದ ಮೇಲೆ ದೆಹಲಿಗೆ ಹೋಗಿದ್ದೆ. ಎಲೆಕ್ಟ್ರಿಕ್ ಬಸ್​ಗಳ ವಿಚಾರವಾಗಿ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಅವರೊಂದಿಗೆ ಚರ್ಚಿಸಬೇಕಿತ್ತು. ಬೆಂಗಳೂರು ವಿಭಾಗಕ್ಕೆ 300, ಹುಬ್ಬಳ್ಳಿ-ಧಾರವಾಡ ವಿಭಾಗಕ್ಕೆ 50 ಎಲೆಕ್ಟ್ರಿಕ್ ಬಸ್​ಗಳನ್ನು ನೀಡಲು ನಮ್ಮ […]

ನನ್ನ ಪ್ರವಾಸ ಪೂರ್ವ ನಿಯೋಜಿತವಾಗಿತ್ತು: ಸವದಿ
ಆಯೇಷಾ ಬಾನು
|

Updated on: Jul 30, 2020 | 9:46 AM

Share

ಬೆಂಗಳೂರು: ಏಕಾಏಕಿ ದೆಹಲಿ ಪ್ರವಾಸ ಮಾಡಿ ರಾಜ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿ ಇಂದು ಬೆಂಗಳೂರಿಗೆ ವಾಪಸ್ಸಾದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.ಈ ವೇಳೆ ಅವರು ತನ್ನ ದೆಹಲಿ ಪ್ರವಾಸ ಪೂರ್ವ ನಿಯೋಜಿತವಾಗಿತ್ತು ಎಂದರು.

ನನ್ನ ಇಲಾಖೆಗೆ ಸಂಬಂಧಿಸಿದ ಕೆಲಸದ ಮೇಲೆ ದೆಹಲಿಗೆ ಹೋಗಿದ್ದೆ. ಎಲೆಕ್ಟ್ರಿಕ್ ಬಸ್​ಗಳ ವಿಚಾರವಾಗಿ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಅವರೊಂದಿಗೆ ಚರ್ಚಿಸಬೇಕಿತ್ತು. ಬೆಂಗಳೂರು ವಿಭಾಗಕ್ಕೆ 300, ಹುಬ್ಬಳ್ಳಿ-ಧಾರವಾಡ ವಿಭಾಗಕ್ಕೆ 50 ಎಲೆಕ್ಟ್ರಿಕ್ ಬಸ್​ಗಳನ್ನು ನೀಡಲು ನಮ್ಮ ಇಲಾಖೆ ನಿರ್ಧರಿಸಿದೆ ಎಂದು ಸವದಿ ಹೇಳಿದರು.

ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗೂ ಅಥಣಿ ಕ್ಷೇತ್ರದಲ್ಲಿ ರಸ್ತೆ ಕಾಮಗಾರಿಗಳ ವಿಷಯವಾಗಿ ಚರ್ಚಿಸಬೇಕಿತ್ತು ಎಂದು ಹೇಳಿದ ಸವದಿ, ನಿರ್ಭಯ ಯೋಜನೆಯಡಿ ರಾಜ್ಯಕ್ಕೆ ಸ್ವಲ್ಪ ಮಾತ್ರವೇ ಹಣ ಬಿಡುಗಡೆಯಾಗಿದೆ ಈ ವಿಷಯವಾಗಿಯೂ ಸಂಬಂಧಪಟ್ಟ ಇಲಾಖೆಯೊಂದಿಗೆ ಮಾತಾಡಿರುವುದಾಗಿ ತಿಳಿಸಿದ್ರು..

ನನ್ನ ದೆಹಲಿ ಪ್ರವಾಸದ ವಿಷಯದಲ್ಲಿ ಯಾಕೆ ಇಷ್ಟೆಲ್ಲ ಚರ್ಚೆಗಳಾಗುತ್ತಿವೆ ಅಂತ ಅರ್ಥವಾಗುತ್ತಿಲ್ಲ. ನಾನು ಮುಖ್ಯಮಂತ್ರಿಗಳ ಗಮನಕ್ಕೆ ತಂದೇ ಅಲ್ಲಿಗೆ ಹೋಗಿದ್ದು, ಪ್ರವಾಸ ಪೂರ್ವ ನಿಯೋಜಿತವಾಗಿತ್ತು ಎಂದು ಉಪ ಮುಖ್ಯಮಂತ್ರಿ ಹೇಳಿದ್ದಾರೆ.

ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?