AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಪ್ರವಾಸ ಪೂರ್ವ ನಿಯೋಜಿತವಾಗಿತ್ತು: ಸವದಿ

ಬೆಂಗಳೂರು: ಏಕಾಏಕಿ ದೆಹಲಿ ಪ್ರವಾಸ ಮಾಡಿ ರಾಜ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿ ಇಂದು ಬೆಂಗಳೂರಿಗೆ ವಾಪಸ್ಸಾದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.ಈ ವೇಳೆ ಅವರು ತನ್ನ ದೆಹಲಿ ಪ್ರವಾಸ ಪೂರ್ವ ನಿಯೋಜಿತವಾಗಿತ್ತು ಎಂದರು. ನನ್ನ ಇಲಾಖೆಗೆ ಸಂಬಂಧಿಸಿದ ಕೆಲಸದ ಮೇಲೆ ದೆಹಲಿಗೆ ಹೋಗಿದ್ದೆ. ಎಲೆಕ್ಟ್ರಿಕ್ ಬಸ್​ಗಳ ವಿಚಾರವಾಗಿ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಅವರೊಂದಿಗೆ ಚರ್ಚಿಸಬೇಕಿತ್ತು. ಬೆಂಗಳೂರು ವಿಭಾಗಕ್ಕೆ 300, ಹುಬ್ಬಳ್ಳಿ-ಧಾರವಾಡ ವಿಭಾಗಕ್ಕೆ 50 ಎಲೆಕ್ಟ್ರಿಕ್ ಬಸ್​ಗಳನ್ನು ನೀಡಲು ನಮ್ಮ […]

ನನ್ನ ಪ್ರವಾಸ ಪೂರ್ವ ನಿಯೋಜಿತವಾಗಿತ್ತು: ಸವದಿ
ಆಯೇಷಾ ಬಾನು
|

Updated on: Jul 30, 2020 | 9:46 AM

Share

ಬೆಂಗಳೂರು: ಏಕಾಏಕಿ ದೆಹಲಿ ಪ್ರವಾಸ ಮಾಡಿ ರಾಜ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿ ಇಂದು ಬೆಂಗಳೂರಿಗೆ ವಾಪಸ್ಸಾದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.ಈ ವೇಳೆ ಅವರು ತನ್ನ ದೆಹಲಿ ಪ್ರವಾಸ ಪೂರ್ವ ನಿಯೋಜಿತವಾಗಿತ್ತು ಎಂದರು.

ನನ್ನ ಇಲಾಖೆಗೆ ಸಂಬಂಧಿಸಿದ ಕೆಲಸದ ಮೇಲೆ ದೆಹಲಿಗೆ ಹೋಗಿದ್ದೆ. ಎಲೆಕ್ಟ್ರಿಕ್ ಬಸ್​ಗಳ ವಿಚಾರವಾಗಿ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಅವರೊಂದಿಗೆ ಚರ್ಚಿಸಬೇಕಿತ್ತು. ಬೆಂಗಳೂರು ವಿಭಾಗಕ್ಕೆ 300, ಹುಬ್ಬಳ್ಳಿ-ಧಾರವಾಡ ವಿಭಾಗಕ್ಕೆ 50 ಎಲೆಕ್ಟ್ರಿಕ್ ಬಸ್​ಗಳನ್ನು ನೀಡಲು ನಮ್ಮ ಇಲಾಖೆ ನಿರ್ಧರಿಸಿದೆ ಎಂದು ಸವದಿ ಹೇಳಿದರು.

ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗೂ ಅಥಣಿ ಕ್ಷೇತ್ರದಲ್ಲಿ ರಸ್ತೆ ಕಾಮಗಾರಿಗಳ ವಿಷಯವಾಗಿ ಚರ್ಚಿಸಬೇಕಿತ್ತು ಎಂದು ಹೇಳಿದ ಸವದಿ, ನಿರ್ಭಯ ಯೋಜನೆಯಡಿ ರಾಜ್ಯಕ್ಕೆ ಸ್ವಲ್ಪ ಮಾತ್ರವೇ ಹಣ ಬಿಡುಗಡೆಯಾಗಿದೆ ಈ ವಿಷಯವಾಗಿಯೂ ಸಂಬಂಧಪಟ್ಟ ಇಲಾಖೆಯೊಂದಿಗೆ ಮಾತಾಡಿರುವುದಾಗಿ ತಿಳಿಸಿದ್ರು..

ನನ್ನ ದೆಹಲಿ ಪ್ರವಾಸದ ವಿಷಯದಲ್ಲಿ ಯಾಕೆ ಇಷ್ಟೆಲ್ಲ ಚರ್ಚೆಗಳಾಗುತ್ತಿವೆ ಅಂತ ಅರ್ಥವಾಗುತ್ತಿಲ್ಲ. ನಾನು ಮುಖ್ಯಮಂತ್ರಿಗಳ ಗಮನಕ್ಕೆ ತಂದೇ ಅಲ್ಲಿಗೆ ಹೋಗಿದ್ದು, ಪ್ರವಾಸ ಪೂರ್ವ ನಿಯೋಜಿತವಾಗಿತ್ತು ಎಂದು ಉಪ ಮುಖ್ಯಮಂತ್ರಿ ಹೇಳಿದ್ದಾರೆ.

ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್