AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಣ್ಮಕ್ಕಳ ಸುರಕ್ಷತೆ ಬಗ್ಗೆ ಡಿಸಿಪಿ ಚೇತನ್ ಸಿಂಗ್ ರಾಥೋರ್ ರಿಯಾಲಿಟಿ ಚೆಕ್

ಬೆಂಗಳೂರು: ಹೈದರಾಬಾದ್​ನಲ್ಲಿ ದಿಶಾ ಗ್ಯಾಂಗ್​ ರೇಪ್, ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ಹೆಣ್ಣು ಮಕ್ಕಳ ಸುರಕ್ಷತೆ ಬಗ್ಗೆ ನಿನ್ನೆ ರಾತ್ರಿ ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋರ್ ರಿಯಾಲಿಟಿ ಚೆಕ್ ನಡೆಸಿದ್ದಾರೆ. ಚೇತನ್ ಸಿಂಗ್ ಯುಬಿ ಸಿಟಿ ರಸ್ತೆಯಲ್ಲಿ ರೌಂಡ್ಸ್ ಹೊರಟಿದ್ದ ವೇಳೆ ತಡರಾತ್ರಿ ಯುಬಿಸಿಟಿಯಲ್ಲಿ ಊಟಕ್ಕೆ ಬಂದಿದ್ದ ಓರ್ವ ಯುವತಿ ಹಾಗೂ ಆಕೆಯ ಇಬ್ಬರು ಸ್ನೇಹಿತರಿಗೆ ಡಿಸಿಪಿ ಸಲಹೆ ನೀಡಿದ್ದಾರೆ. ಸಹಾಯ ಬೇಕಿದ್ದರೆ ‘100’ಗೆ ಕರೆ ಮಾಡಲು ತಿಳಿಸಿದ್ದಾರೆ. ಅದಕ್ಕೆ ಆ ಯುವತಿಯರು ಹರಿಯಾಣದಲ್ಲಿ […]

ಹೆಣ್ಮಕ್ಕಳ ಸುರಕ್ಷತೆ ಬಗ್ಗೆ ಡಿಸಿಪಿ ಚೇತನ್ ಸಿಂಗ್ ರಾಥೋರ್ ರಿಯಾಲಿಟಿ ಚೆಕ್
ಸಾಧು ಶ್ರೀನಾಥ್​
|

Updated on: Dec 08, 2019 | 3:06 PM

Share

ಬೆಂಗಳೂರು: ಹೈದರಾಬಾದ್​ನಲ್ಲಿ ದಿಶಾ ಗ್ಯಾಂಗ್​ ರೇಪ್, ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ಹೆಣ್ಣು ಮಕ್ಕಳ ಸುರಕ್ಷತೆ ಬಗ್ಗೆ ನಿನ್ನೆ ರಾತ್ರಿ ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋರ್ ರಿಯಾಲಿಟಿ ಚೆಕ್ ನಡೆಸಿದ್ದಾರೆ.

ಚೇತನ್ ಸಿಂಗ್ ಯುಬಿ ಸಿಟಿ ರಸ್ತೆಯಲ್ಲಿ ರೌಂಡ್ಸ್ ಹೊರಟಿದ್ದ ವೇಳೆ ತಡರಾತ್ರಿ ಯುಬಿಸಿಟಿಯಲ್ಲಿ ಊಟಕ್ಕೆ ಬಂದಿದ್ದ ಓರ್ವ ಯುವತಿ ಹಾಗೂ ಆಕೆಯ ಇಬ್ಬರು ಸ್ನೇಹಿತರಿಗೆ ಡಿಸಿಪಿ ಸಲಹೆ ನೀಡಿದ್ದಾರೆ. ಸಹಾಯ ಬೇಕಿದ್ದರೆ ‘100’ಗೆ ಕರೆ ಮಾಡಲು ತಿಳಿಸಿದ್ದಾರೆ. ಅದಕ್ಕೆ ಆ ಯುವತಿಯರು ಹರಿಯಾಣದಲ್ಲಿ ಒಮ್ಮೆ ಇದೇ ರೀತಿ ಪ್ರಯತ್ನ ಮಾಡಿದ್ದೆವು. ಆದ್ರೆ ಅಲ್ಲಿ ನಮಗೆ ಯಾವುದೇ ರೀತಿ ಪ್ರಯೋಜನವಾಗಲಿಲ್ಲ. ಇದೆಲ್ಲ ಉಪಯೋಗಕ್ಕೆ ಬರುವುದಿಲ್ಲವೆಂದ ಉತ್ತರಿಸಿದ್ದಾರೆ.

100ಗೆ ಕರೆ ಮಾಡಿದ ಯುವತಿಯರು: ಆಗ ಡಿಸಿಪಿ ಅದು ಹರಿಯಾಣ, ಇದು ಬೆಂಗಳೂರು ಇಲ್ಲಿ ಒಮ್ಮೆ ಪ್ರಯತ್ನ ಮಾಡಿ ಎಂದು ಇಬ್ಬರು ಯುವತಿಯರಿಗೆ ಹೇಳಿದ್ದಾರೆ. ಡಿಸಿಪಿ ಮಾತಿನಂತೆ ಯುವತಿಯರು 100ಕ್ಕೆ ಕರೆ ಮಾಡಿದ್ದಾರೆ. ಮೊದಲು ಕರೆ ಮಾಡಿದಾಗ ಬ್ಯುಸಿ ಬಂದಿದೆ. ನಂತರ ಡಿಸಿಪಿ ತಮ್ಮ ಗನ್ ಮ್ಯಾನ್ ಮೊಬೈಲ್​ನಲ್ಲಿ ಮತ್ತೊಮ್ಮೆ ಡಯಲ್ ಮಾಡುವಂತೆ ತಿಳಿಸಿದ್ದಾರೆ. ಮತ್ತೆ ‘100’ಗೆ ಡಯಲ್ ಮಾಡಿದಾಗ ಸಂಪರ್ಕ ಸಿಕ್ಕಿದೆ. ಯುವತಿಯರಿಂದ ಮಾಹಿತಿ ಪಡೆದು 3 ನಿಮಿಷದಲ್ಲಿ ಹೊಯ್ಸಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಯುವತಿಯರ ಸಮಸ್ಯೆ ಆಲಿಸಿದ್ದಾರೆ.

ಯುವತಿಯರು ಪೊಲೀಸರ ಕರ್ತವ್ಯ ನಿಷ್ಠೆಯನ್ನ ಮಚ್ಚಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ ನಾವು ಮಂಗಳೂರು ಹಾಗೂ ಹರಿಯಾಣ ಮೂಲದ ಯುವತಿಯರು. ಹರಿಯಾಣದ ಸಚಿವರೊಬ್ಬರ ತಂಗಿ ಮಗಳು ಎಂದು ಓರ್ವ ಯುವತಿ ಪರಿಚಯಿಸಿಕೊಂಡು ಡಿಸಿಪಿ ಚೇತನ್ ಸಿಂಗ್ ಅವರ ಜೊತೆ ಸೆಲ್ಫಿ ತೆಗೆಸಿಕೊಂಡರು.

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್