AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಣ್ಮಕ್ಕಳ ಸುರಕ್ಷತೆ ಬಗ್ಗೆ ಡಿಸಿಪಿ ಚೇತನ್ ಸಿಂಗ್ ರಾಥೋರ್ ರಿಯಾಲಿಟಿ ಚೆಕ್

ಬೆಂಗಳೂರು: ಹೈದರಾಬಾದ್​ನಲ್ಲಿ ದಿಶಾ ಗ್ಯಾಂಗ್​ ರೇಪ್, ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ಹೆಣ್ಣು ಮಕ್ಕಳ ಸುರಕ್ಷತೆ ಬಗ್ಗೆ ನಿನ್ನೆ ರಾತ್ರಿ ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋರ್ ರಿಯಾಲಿಟಿ ಚೆಕ್ ನಡೆಸಿದ್ದಾರೆ. ಚೇತನ್ ಸಿಂಗ್ ಯುಬಿ ಸಿಟಿ ರಸ್ತೆಯಲ್ಲಿ ರೌಂಡ್ಸ್ ಹೊರಟಿದ್ದ ವೇಳೆ ತಡರಾತ್ರಿ ಯುಬಿಸಿಟಿಯಲ್ಲಿ ಊಟಕ್ಕೆ ಬಂದಿದ್ದ ಓರ್ವ ಯುವತಿ ಹಾಗೂ ಆಕೆಯ ಇಬ್ಬರು ಸ್ನೇಹಿತರಿಗೆ ಡಿಸಿಪಿ ಸಲಹೆ ನೀಡಿದ್ದಾರೆ. ಸಹಾಯ ಬೇಕಿದ್ದರೆ ‘100’ಗೆ ಕರೆ ಮಾಡಲು ತಿಳಿಸಿದ್ದಾರೆ. ಅದಕ್ಕೆ ಆ ಯುವತಿಯರು ಹರಿಯಾಣದಲ್ಲಿ […]

ಹೆಣ್ಮಕ್ಕಳ ಸುರಕ್ಷತೆ ಬಗ್ಗೆ ಡಿಸಿಪಿ ಚೇತನ್ ಸಿಂಗ್ ರಾಥೋರ್ ರಿಯಾಲಿಟಿ ಚೆಕ್
ಸಾಧು ಶ್ರೀನಾಥ್​
|

Updated on: Dec 08, 2019 | 3:06 PM

Share

ಬೆಂಗಳೂರು: ಹೈದರಾಬಾದ್​ನಲ್ಲಿ ದಿಶಾ ಗ್ಯಾಂಗ್​ ರೇಪ್, ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ಹೆಣ್ಣು ಮಕ್ಕಳ ಸುರಕ್ಷತೆ ಬಗ್ಗೆ ನಿನ್ನೆ ರಾತ್ರಿ ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋರ್ ರಿಯಾಲಿಟಿ ಚೆಕ್ ನಡೆಸಿದ್ದಾರೆ.

ಚೇತನ್ ಸಿಂಗ್ ಯುಬಿ ಸಿಟಿ ರಸ್ತೆಯಲ್ಲಿ ರೌಂಡ್ಸ್ ಹೊರಟಿದ್ದ ವೇಳೆ ತಡರಾತ್ರಿ ಯುಬಿಸಿಟಿಯಲ್ಲಿ ಊಟಕ್ಕೆ ಬಂದಿದ್ದ ಓರ್ವ ಯುವತಿ ಹಾಗೂ ಆಕೆಯ ಇಬ್ಬರು ಸ್ನೇಹಿತರಿಗೆ ಡಿಸಿಪಿ ಸಲಹೆ ನೀಡಿದ್ದಾರೆ. ಸಹಾಯ ಬೇಕಿದ್ದರೆ ‘100’ಗೆ ಕರೆ ಮಾಡಲು ತಿಳಿಸಿದ್ದಾರೆ. ಅದಕ್ಕೆ ಆ ಯುವತಿಯರು ಹರಿಯಾಣದಲ್ಲಿ ಒಮ್ಮೆ ಇದೇ ರೀತಿ ಪ್ರಯತ್ನ ಮಾಡಿದ್ದೆವು. ಆದ್ರೆ ಅಲ್ಲಿ ನಮಗೆ ಯಾವುದೇ ರೀತಿ ಪ್ರಯೋಜನವಾಗಲಿಲ್ಲ. ಇದೆಲ್ಲ ಉಪಯೋಗಕ್ಕೆ ಬರುವುದಿಲ್ಲವೆಂದ ಉತ್ತರಿಸಿದ್ದಾರೆ.

100ಗೆ ಕರೆ ಮಾಡಿದ ಯುವತಿಯರು: ಆಗ ಡಿಸಿಪಿ ಅದು ಹರಿಯಾಣ, ಇದು ಬೆಂಗಳೂರು ಇಲ್ಲಿ ಒಮ್ಮೆ ಪ್ರಯತ್ನ ಮಾಡಿ ಎಂದು ಇಬ್ಬರು ಯುವತಿಯರಿಗೆ ಹೇಳಿದ್ದಾರೆ. ಡಿಸಿಪಿ ಮಾತಿನಂತೆ ಯುವತಿಯರು 100ಕ್ಕೆ ಕರೆ ಮಾಡಿದ್ದಾರೆ. ಮೊದಲು ಕರೆ ಮಾಡಿದಾಗ ಬ್ಯುಸಿ ಬಂದಿದೆ. ನಂತರ ಡಿಸಿಪಿ ತಮ್ಮ ಗನ್ ಮ್ಯಾನ್ ಮೊಬೈಲ್​ನಲ್ಲಿ ಮತ್ತೊಮ್ಮೆ ಡಯಲ್ ಮಾಡುವಂತೆ ತಿಳಿಸಿದ್ದಾರೆ. ಮತ್ತೆ ‘100’ಗೆ ಡಯಲ್ ಮಾಡಿದಾಗ ಸಂಪರ್ಕ ಸಿಕ್ಕಿದೆ. ಯುವತಿಯರಿಂದ ಮಾಹಿತಿ ಪಡೆದು 3 ನಿಮಿಷದಲ್ಲಿ ಹೊಯ್ಸಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಯುವತಿಯರ ಸಮಸ್ಯೆ ಆಲಿಸಿದ್ದಾರೆ.

ಯುವತಿಯರು ಪೊಲೀಸರ ಕರ್ತವ್ಯ ನಿಷ್ಠೆಯನ್ನ ಮಚ್ಚಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ ನಾವು ಮಂಗಳೂರು ಹಾಗೂ ಹರಿಯಾಣ ಮೂಲದ ಯುವತಿಯರು. ಹರಿಯಾಣದ ಸಚಿವರೊಬ್ಬರ ತಂಗಿ ಮಗಳು ಎಂದು ಓರ್ವ ಯುವತಿ ಪರಿಚಯಿಸಿಕೊಂಡು ಡಿಸಿಪಿ ಚೇತನ್ ಸಿಂಗ್ ಅವರ ಜೊತೆ ಸೆಲ್ಫಿ ತೆಗೆಸಿಕೊಂಡರು.

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು