Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಣ್ಮಕ್ಕಳ ಸುರಕ್ಷತೆ ಬಗ್ಗೆ ಡಿಸಿಪಿ ಚೇತನ್ ಸಿಂಗ್ ರಾಥೋರ್ ರಿಯಾಲಿಟಿ ಚೆಕ್

ಬೆಂಗಳೂರು: ಹೈದರಾಬಾದ್​ನಲ್ಲಿ ದಿಶಾ ಗ್ಯಾಂಗ್​ ರೇಪ್, ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ಹೆಣ್ಣು ಮಕ್ಕಳ ಸುರಕ್ಷತೆ ಬಗ್ಗೆ ನಿನ್ನೆ ರಾತ್ರಿ ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋರ್ ರಿಯಾಲಿಟಿ ಚೆಕ್ ನಡೆಸಿದ್ದಾರೆ. ಚೇತನ್ ಸಿಂಗ್ ಯುಬಿ ಸಿಟಿ ರಸ್ತೆಯಲ್ಲಿ ರೌಂಡ್ಸ್ ಹೊರಟಿದ್ದ ವೇಳೆ ತಡರಾತ್ರಿ ಯುಬಿಸಿಟಿಯಲ್ಲಿ ಊಟಕ್ಕೆ ಬಂದಿದ್ದ ಓರ್ವ ಯುವತಿ ಹಾಗೂ ಆಕೆಯ ಇಬ್ಬರು ಸ್ನೇಹಿತರಿಗೆ ಡಿಸಿಪಿ ಸಲಹೆ ನೀಡಿದ್ದಾರೆ. ಸಹಾಯ ಬೇಕಿದ್ದರೆ ‘100’ಗೆ ಕರೆ ಮಾಡಲು ತಿಳಿಸಿದ್ದಾರೆ. ಅದಕ್ಕೆ ಆ ಯುವತಿಯರು ಹರಿಯಾಣದಲ್ಲಿ […]

ಹೆಣ್ಮಕ್ಕಳ ಸುರಕ್ಷತೆ ಬಗ್ಗೆ ಡಿಸಿಪಿ ಚೇತನ್ ಸಿಂಗ್ ರಾಥೋರ್ ರಿಯಾಲಿಟಿ ಚೆಕ್
Follow us
ಸಾಧು ಶ್ರೀನಾಥ್​
|

Updated on: Dec 08, 2019 | 3:06 PM

ಬೆಂಗಳೂರು: ಹೈದರಾಬಾದ್​ನಲ್ಲಿ ದಿಶಾ ಗ್ಯಾಂಗ್​ ರೇಪ್, ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ಹೆಣ್ಣು ಮಕ್ಕಳ ಸುರಕ್ಷತೆ ಬಗ್ಗೆ ನಿನ್ನೆ ರಾತ್ರಿ ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋರ್ ರಿಯಾಲಿಟಿ ಚೆಕ್ ನಡೆಸಿದ್ದಾರೆ.

ಚೇತನ್ ಸಿಂಗ್ ಯುಬಿ ಸಿಟಿ ರಸ್ತೆಯಲ್ಲಿ ರೌಂಡ್ಸ್ ಹೊರಟಿದ್ದ ವೇಳೆ ತಡರಾತ್ರಿ ಯುಬಿಸಿಟಿಯಲ್ಲಿ ಊಟಕ್ಕೆ ಬಂದಿದ್ದ ಓರ್ವ ಯುವತಿ ಹಾಗೂ ಆಕೆಯ ಇಬ್ಬರು ಸ್ನೇಹಿತರಿಗೆ ಡಿಸಿಪಿ ಸಲಹೆ ನೀಡಿದ್ದಾರೆ. ಸಹಾಯ ಬೇಕಿದ್ದರೆ ‘100’ಗೆ ಕರೆ ಮಾಡಲು ತಿಳಿಸಿದ್ದಾರೆ. ಅದಕ್ಕೆ ಆ ಯುವತಿಯರು ಹರಿಯಾಣದಲ್ಲಿ ಒಮ್ಮೆ ಇದೇ ರೀತಿ ಪ್ರಯತ್ನ ಮಾಡಿದ್ದೆವು. ಆದ್ರೆ ಅಲ್ಲಿ ನಮಗೆ ಯಾವುದೇ ರೀತಿ ಪ್ರಯೋಜನವಾಗಲಿಲ್ಲ. ಇದೆಲ್ಲ ಉಪಯೋಗಕ್ಕೆ ಬರುವುದಿಲ್ಲವೆಂದ ಉತ್ತರಿಸಿದ್ದಾರೆ.

100ಗೆ ಕರೆ ಮಾಡಿದ ಯುವತಿಯರು: ಆಗ ಡಿಸಿಪಿ ಅದು ಹರಿಯಾಣ, ಇದು ಬೆಂಗಳೂರು ಇಲ್ಲಿ ಒಮ್ಮೆ ಪ್ರಯತ್ನ ಮಾಡಿ ಎಂದು ಇಬ್ಬರು ಯುವತಿಯರಿಗೆ ಹೇಳಿದ್ದಾರೆ. ಡಿಸಿಪಿ ಮಾತಿನಂತೆ ಯುವತಿಯರು 100ಕ್ಕೆ ಕರೆ ಮಾಡಿದ್ದಾರೆ. ಮೊದಲು ಕರೆ ಮಾಡಿದಾಗ ಬ್ಯುಸಿ ಬಂದಿದೆ. ನಂತರ ಡಿಸಿಪಿ ತಮ್ಮ ಗನ್ ಮ್ಯಾನ್ ಮೊಬೈಲ್​ನಲ್ಲಿ ಮತ್ತೊಮ್ಮೆ ಡಯಲ್ ಮಾಡುವಂತೆ ತಿಳಿಸಿದ್ದಾರೆ. ಮತ್ತೆ ‘100’ಗೆ ಡಯಲ್ ಮಾಡಿದಾಗ ಸಂಪರ್ಕ ಸಿಕ್ಕಿದೆ. ಯುವತಿಯರಿಂದ ಮಾಹಿತಿ ಪಡೆದು 3 ನಿಮಿಷದಲ್ಲಿ ಹೊಯ್ಸಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಯುವತಿಯರ ಸಮಸ್ಯೆ ಆಲಿಸಿದ್ದಾರೆ.

ಯುವತಿಯರು ಪೊಲೀಸರ ಕರ್ತವ್ಯ ನಿಷ್ಠೆಯನ್ನ ಮಚ್ಚಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ ನಾವು ಮಂಗಳೂರು ಹಾಗೂ ಹರಿಯಾಣ ಮೂಲದ ಯುವತಿಯರು. ಹರಿಯಾಣದ ಸಚಿವರೊಬ್ಬರ ತಂಗಿ ಮಗಳು ಎಂದು ಓರ್ವ ಯುವತಿ ಪರಿಚಯಿಸಿಕೊಂಡು ಡಿಸಿಪಿ ಚೇತನ್ ಸಿಂಗ್ ಅವರ ಜೊತೆ ಸೆಲ್ಫಿ ತೆಗೆಸಿಕೊಂಡರು.

ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್