ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಫೂಟ್​ಪಾತ್​ ಬಳಿ ವ್ಯಕ್ತಿಯ ಶವ ಪತ್ತೆ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಫೂಟ್​ಪಾತ್​ನಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಅತಿಯಾದ ಮದ್ಯಸೇವನೆಯಿಂದ ವ್ಯಕ್ತಿ ಸಾವಿಗೀಡಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಫೂಟ್​ಪಾತ್​ ಬಳಿ ವ್ಯಕ್ತಿಯ ಶವ ಪತ್ತೆ
ವಿಕ್ಟೋರಿಯಾ ಆಸ್ಪತ್ರೆಯ ಫೂಟ್​ಪಾತ್​ ಬಳಿ ವ್ಯಕ್ತಿಯ ಶವ ಪತ್ತೆ; ತನಿಖೆ ನಡೆಸುತ್ತಿರುವ ಪೊಲೀಸರು

Updated on: May 07, 2021 | 3:26 PM

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ಫೂಟ್​ಪಾತ್​ ಬಳಿ ವ್ಯಕ್ತಿಯ ಶವ ಪತ್ತೆಯಾಗಿದೆ. ವ್ಯಕ್ತಿ ಈ ಹಿಂದೆ ಆಸ್ಪತ್ರೆಯಲ್ಲಿ ಲಿವರ್​ ಸಮಸ್ಯೆಯಿಂದ ದಾಖಲಾಗಿದ್ದರು. ಗುಣಮುಖರಾದ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಮಾಡಲಾಯಿತು. ಆ ಬಳಿಕ ಮದ್ಯ ಸೇವನೆ ಮಾಡಲು ಪ್ರಾರಂಭಿಸಿದ್ದಾರೆ. ಮದ್ಯಸೇವನೆ ಹೆಚ್ಚಳದಿಂದ ವ್ಯಕ್ತಿ ಸಾವಿಗೀಡಾಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಈ ಹಿಂದೆ ಇಪ್ಪತ್ತು ದಿನಗಳ ಹಿಂದೆ ಮೃತ ವ್ಯಕ್ತಿ, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆದ ಬಳಿಕ ಅತಿಯಾಗಿ ಮದ್ಯಸೇವನೆಗೆ ಮುಂದಾಗಿದ್ದಾರೆ. ಇದರಿಂದ ಸಾವಿಗೀಡಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಶವವನ್ನು ಪೋಲಿಸರ ಸಹಾಯದಿಂದ ಅದೇ ಆಸ್ಪತ್ರೆಯಲ್ಲಿ ಕೊವಿಡ್ ಟೆಸ್ಟ್​ಗೆ ಅಂಬುಲೆನ್ಸ್​ನಲ್ಲಿ ಕರೆದುಕೊಂಡು ಹೋಗಿದ್ದಾರೆ. ಈ ಕುರಿತಂತೆ ಪೋಲಿಸ್ ಇಲಾಖೆಯ ಉನ್ನತ ಮೂಲಗಳು ಮಾಹಿತಿ ಹಂಚಿಕೊಂಡಿದೆ.

ಕೊರೊನಾ ನಿಯಂತ್ರಿಸುವಲ್ಲಿ‌‌ ಕೇಂದ್ರ ಸರ್ಕಾರ ವಿಫಲ ಹಿನ್ನೆಲೆ ಬಾಗಲಕೋಟೆಯಲ್ಲಿ ಪ್ರತಿಭಟನೆ:

ಕೊರೊನಾ ನಿಯಂತ್ರಿಸುವಲ್ಲಿ‌‌ ಕೇಂದ್ರ ಸರ್ಕಾರ ವಿಫಲ ಹಿನ್ನೆಲೆಯಲ್ಲಿ ಕರವೇ ಜಿಲ್ಲಾಧ್ಯಕ್ಷರು ಪ್ರತಿಭಟನೆಗೆ ಮುಂದಾಗಿದ್ದಾರೆ. ಜಿಲ್ಲಾಧಿಕಾರಿ ಕಚೇರಿ‌ ಮುಂದೆ ಕರವೇ ಜಿಲ್ಲಾಧ್ಯಕ್ಷ ರಮೇಶ್ ಬದ್ನೂರು ಏಕವ್ಯಕ್ತಿ ಪ್ರತಿಭಟನೆ ನಡೆಸಿದ್ದಾರೆ. ಕೊರೊನಾದಿಂದ ದೇಶದಲ್ಲಿ ಜನರು ಬಲಿಯಾಗುತ್ತಿದ್ದಾರೆ. ಕೂಡಲೇ ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸುವಂತೆ ಆಗ್ರಹಿಸಿ, ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಪತ್ರ ಸಲ್ಲಿಸಲಾಗಿದೆ.
YouTube video player

ಇದನ್ನೂ ಓದಿ: ವಿಕ್ಟೋರಿಯಾ ಆಸ್ಪತ್ರೆ ಮುಂದೆ ಉಸಿರಾಡಲು ಮಹಿಳೆ ನರಳಾಟ.. ಪತಿ ಗೋಳಾಟ | ಕಣ್ಣೀರಿಗೂ ಕರಗದ ಸಿಬ್ಬಂದಿ

ಬಳ್ಳಾರಿಯ ವಿವಿಯಿಂದ ಕೊವಿಡ್ ಕೇರ್ ಸೆಂಟರ್; ಕೊರೊನಾ ಸೋಂಕಿತರ ನೆರವಿಗೆ ನಿಂತ ವಿಶ್ವವಿದ್ಯಾಲಯ

Published On - 3:24 pm, Fri, 7 May 21

Loading...
Unable to load recommendations.
Follow Us