AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

60% Signboards in Kannada: ಶೇ.60 ರಷ್ಟು ಕನ್ನಡ ಬೋರ್ಡ್ ಅಳವಡಿಕೆಗೆ ಇದ್ದ ಗಡುವು ವಿಸ್ತರಣೆ

ರಾಜ್ಯದ ಎಲ್ಲಾ ಮಳಿಗೆಗಳಿಗೆ ಅಳವಡಿಸುವ ಬೋರ್ಡ್​ಗಳಲ್ಲಿ ಶೇ.60 ರಷ್ಟು ಕನ್ನಡ ಇರಬೇಕು ಎಂಬ ನಿಯಮ ಜಾರಿಯಾಗಿದೆ. ಅದರಂತೆ, ಬೋರ್ಡ್​ಗಳ ಬದಲಾವಣೆಗೆ ನೀಡಲಾಗಿದ್ದ ಗಡುವು ನಿನ್ನೆಗೆ ಮುಕ್ತಾಯಗೊಂಡಿದೆ. ಈ ನಡುವೆ ಒಂದಷ್ಟು ವ್ಯಾಪಾರಸ್ತರು ಹಾಗೂ ಕಂಪನಿಗಳು ನಿಯಮಾನುಸಾರ ಬೋರ್ಡ್ ಅಳವಡಿಕೆಗೆ ಮತ್ತಷ್ಟು ಸಮಯಾವಕಾಶ ಕೇಳಿದ್ದರು. ಹೀಗಾಗಿ ಶೇ.60 ರಷ್ಟು ಕನ್ನಡದಲ್ಲಿ ನಾಮಫಲಕ ಅಳವಡಿಕೆಗೆ ಇದ್ದ ಗಡುವನ್ನು ವಿಸ್ತರಿಸಲಾಗಿದೆ.

60% Signboards in Kannada: ಶೇ.60 ರಷ್ಟು ಕನ್ನಡ ಬೋರ್ಡ್ ಅಳವಡಿಕೆಗೆ ಇದ್ದ ಗಡುವು ವಿಸ್ತರಣೆ
ಶೇ.60 ರಷ್ಟು ಕನ್ನಡ ಬೋರ್ಡ್ ಅಳವಡಿಕೆಗೆ ಇದ್ದ ಗಡುವು ಎರಡು ವಾರಗಳಿಗೆ ವಿಸ್ತರಣೆImage Credit source: PTI
ಪ್ರಸನ್ನ ಗಾಂವ್ಕರ್​
| Edited By: Rakesh Nayak Manchi|

Updated on: Feb 29, 2024 | 10:16 AM

Share

ಬೆಂಗಳೂರು, ಫೆ.29: ರಾಜ್ಯದ ಎಲ್ಲಾ ಮಳಿಗೆಗಳಿಗೆ ಅಳವಡಿಸುವ ಬೋರ್ಡ್​ಗಳಲ್ಲಿ (Kannada Signboards) ಶೇ.60 ರಷ್ಟು ಕನ್ನಡ ಇರಬೇಕು ಎಂಬ ನಿಯಮ ಜಾರಿಯಾಗಿದೆ. ಅದರಂತೆ, ಬೋರ್ಡ್​ಗಳ ಬದಲಾವಣೆಗೆ ನೀಡಲಾಗಿದ್ದ ಗಡುವು ನಿನ್ನೆಗೆ ಮುಕ್ತಾಯಗೊಂಡಿದೆ. ಈ ನಡುವೆ ಒಂದಷ್ಟು ವ್ಯಾಪಾರಸ್ತರು ಹಾಗೂ ಕಂಪನಿಗಳು ನಿಯಮಾನುಸಾರ ಬೋರ್ಡ್ ಅಳವಡಿಕೆಗೆ ಮತ್ತಷ್ಟು ಸಮಯಾವಕಾಶ ಕೇಳಿದ್ದರು. ಹೀಗಾಗಿ ಶೇ.60 ರಷ್ಟು ಕನ್ನಡದಲ್ಲಿ ನಾಮಫಲಕ ಅಳವಡಿಕೆಗೆ ಎರಡು ವಾರಗಳ ಕಾಲವಕಾಶ ನೀಡಲಾಗಿದೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಬೆಂಗಳೂರಿನ ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದಕಡೆ ಶೇ.60ರಷ್ಟು‌ ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು 2 ವಾರಗಳ‌ ಕಾಲ ವಿಸ್ತರಿಸಲಾಗಿದೆ ಎಂದರು.

ಇದನ್ನೂ ಓದಿ: ಶೇ.60 ರಷ್ಟು ಕನ್ನಡ ಬೋರ್ಡ್ ಹಾಕದ ಅಂಗಡಿಗಳ ಲೈಸೆನ್ಸ್ ರದ್ದು: ಬಿಬಿಎಂಪಿ ಎಚ್ಚರಿಕೆ

ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ, ಹಾಗಾಗಿ ನಮ್ಮ ಹೃದಯದ ಭಾಷೆಯನ್ನು ಎತ್ತಿ‌ಹಿಡಿಯುವುದು ಅತಿ ಮುಖ್ಯ. 2 ವಾರಗಳ‌ ನಂತರ ಎಲ್ಲರೂ ಕಾನೂನು ಪಾಲನೆ ಮಾಡುತ್ತಾರೆ‌ ಎಂದು ನಿರೀಕ್ಷಿಸಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಡಿಕೆ ಶಿವಕುಮಾರ್ ಟ್ವೀಟ್

ಕನ್ನಡ ನಾಮಫಲಕ ಹಾಕದಿದ್ದರೆ ಅಂಗಡಿಗಳನ್ನು ಬಂದ್ ಮಾಡುತ್ತೇವೆ. ಈಗಾಗಲೇ ಶೇಕಡಾ 90ರಷ್ಟು ಕನ್ನಡ ನಾಮಫಲಕ ಹಾಕಲಾಗಿದೆ. ಇನ್ನು ಉಳಿದಿರುವುದು 3 ಸಾವಿರ ನಾಮಫಲಕ ಮಾತ್ರ​. ಮತ್ತಷ್ಟು ಸಮಯ ನೀಡುವಂತೆ ಅಂತಾರಾಷ್ಟ್ರೀಯ ಕಂಪನಿಗಳು, SBI, ಕೆನರಾ ಬ್ಯಾಂಕ್ ಮನವಿ ನೀಡಿವೆ. ಈ ಬಗ್ಗೆ ಇಂದು ಸಂಜೆ ತೀರ್ಮಾನ ಮಾಡುತ್ತೇವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​ ಹೇಳಿದ್ದರು.

ಡೆಡ್​ಲೈನ್ ಮುಕ್ತಾಯ ಹಿನ್ನೆಲೆ ಇಂದು ನಾಮಫಲಕ ಪರಿಶೀಲನೆ ನಡೆಸಲು ಮುಂದಾದ ಪಾಲಿಕೆ ಅಧಿಕಾರಿಗಳು, ಶೇಕಡಾ 60ರಷ್ಟು ಕನ್ನಡ ನಾಮಫಲಕ ಅಳವಡಿಸದಿದ್ದರೆ ಪರವಾನಗಿ ರದ್ದು ಮಾಡಿ ಬೀಗ ಜಡಿಯುವುದಾಗಿ ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ವಿಕಾಸ್ ಕಿಶೋರ್ ಅವರು ಈಗಾಗಲೇ ಆದೇಶ ಹೊರಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ