AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ಕೊಡದೆ ನಿರ್ಗತಿಕರ ಹೊಟ್ಟೆ ತುಂಬಿಸಲು ಹೊಸ ಐಡಿಯಾ.. ‘ಡಿಎಫ್’ ಫುಡ್ ಕಾರ್ಡ್ ಕೊಟ್ಟರೆ ಊಟ ಉಚಿತ

ಇತ್ತೀಚಿನ ದಿನಗಳಲ್ಲಿ ಭಿಕ್ಷುಕರ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನೇ ಕೆಲವರು ಬಂಡವಾಳ ಮಾಡಿಕೊಂಡು ದಂಧೆಗೂ ಇಳಿದಿದ್ದಾರೆ. ಹೀಗಾಗಿ ಸಾಕಷ್ಟು ಜನ ಭಿಕ್ಷೆ ಹಾಕುವುದನ್ನೇ ಬಿಟ್ಟುಬಿಟ್ಟಿದ್ದಾರೆ. ಇದರಿಂದ ನಿಜವಾಗೂ ಹಸಿದವರು ಪರದಾಡುವಂತಾಗಿದೆ. ಇದನ್ನರಿತ ಅದೊಂದು ಯುವ ಪಡೆ ಹೊಸದೊಂದು ಐಡಿಯಾ ಮಾಡಿ ಹಸಿದವರಿಗೆ ಅನ್ನ ನೀಡುವ ಕೆಲಸ ಮಾಡ್ತಿದೆ.

ಹಣ ಕೊಡದೆ ನಿರ್ಗತಿಕರ ಹೊಟ್ಟೆ ತುಂಬಿಸಲು ಹೊಸ ಐಡಿಯಾ.. ‘ಡಿಎಫ್’ ಫುಡ್ ಕಾರ್ಡ್ ಕೊಟ್ಟರೆ ಊಟ ಉಚಿತ
‘ಡಿಎಫ್’ ಫುಡ್ ಕಾರ್ಡ್ ಪಡೆದು ಉಚಿತ ಊಟ ಸೇವಿಸಿದ ಮಹಿಳೆಯರು
ಆಯೇಷಾ ಬಾನು
ಆಯೇಷಾ ಬಾನು|

Updated on:Jan 29, 2021 | 7:06 AM

Share

ಬೆಳಗಾವಿ: ಈ ನಾಲ್ವರು ಯುವಕರ ತಂಡ ಭಿಕ್ಷುಕರ ಬಳಿ, ಅನಾಥರ ಬಳಿ ಹೋಗಿ ಹಣವನ್ನೋ ಅಥವಾ ಊಟವನ್ನೋ ಕೊಡುವುದನ್ನ ಬಿಟ್ಟು ಎಟಿಎಂ ಮಾದರಿಯ ಕಾರ್ಡ್ ಕೊಡ್ತಿದ್ದಾರೆ. ಈ ಕಾರ್ಡ್​ನಿಂದ ಊಟದ ಪ್ಯಾಕೆಟ್ ಅಥವಾ ಹಣ ಕೊಡುವುದು ತಪ್ಪಲಿದೆ. ಹಾಗೇ ಅಸಹಾಯಕರು ಹೋಟೆಲ್​ನಲ್ಲಿ ಬೇಕಾದ ತಿಂಡಿಯನ್ನ, ಯಾವಾಗ ಬೇಕಾದ್ರೂ ತಿನ್ನಲು ಅನುಕೂಲವಾಗುತ್ತಿದೆ.

ಇದೇ ಉದ್ದೇಶದಿಂದ ಡಿಎಫ್ ಪೌಂಡೇಷನ್ ಹೆಸರಿನ ಕಾರ್ಡ್ ಕೊಡ್ತಿದ್ದಾರೆ. ಕಾರ್ಡ್ ಹೆಸ್ರು ಡಿಯರ್ ಹುಡ್ ಪುಡ್ ಕಾರ್ಡ್ ಅಂತಾ. ಕಾರ್ಡ್ ಬೆಲೆ 10 ರೂಪಾಯಿ. ಕಾರ್ಡ್​ನ ಭಿಕ್ಷುಕರು, ವಯಸ್ಸಾದವರು ಹಾಗೂ ಊಟಕ್ಕೆ ಪರದಾಡುವವರಿಗೆ ನೀಡಲಾಗುತ್ತದೆ. ಹೀಗೆ ಕುಂದಾನಗರಿಯಲ್ಲಿ ಹಸಿದವರಿಗೆ ಹೊಟ್ಟೆ ತುಂಬಾ ಅನ್ನ ಸಿಗುತ್ತಿದೆ. ಹೊಸ ಬದಲಾವಣೆಗೆ ಈ ಯುವಪಡೆ ಇದೀಗ ನಾಂದಿ ಹಾಡಿದೆ.

ಭಿಕ್ಷುಕರ ಹೊಟ್ಟೆ ತುಂಬಿಸೋ ಕಾರ್ಡ್ ಜನವರಿ ಮೊದಲ ವಾರದಿಂದ ಕಾರ್ಡ್ ಸಿಸ್ಟಮ್ ಊಟ ವಿತರಣೆ ಆರಂಭವಾಗಿದೆ. ಬೆಳಗಾವಿಯ ಬಹುತೇಕ ಹೋಟೆಲ್​ಗಳೊಂದಿಗೆ ಟೈಯಪ್ ಆಗಿರುವ ಇವರು ಡಿಎಫ್ ಕಾರ್ಡ್ ತೆಗೆದುಕೊಂಡು ಬಂದರೆ ಅಂತವರಿಗೆ ಊಟ ನೀಡುವಂತೆ ಹೇಳಿದ್ದಾರೆ. ಗುರುತಿಗಾಗಿ ಹೋಟೆಲ್ ಮುಂಭಾಗದಲ್ಲಿ ತಮ್ಮದೊಂದು ಸ್ಟಿಕ್ಕರ್ ಅಂಟಿಸಿರುತ್ತಾರೆ. ಇಪ್ಪತ್ತು ಜನರಿರುವ ತಂಡ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುತ್ತಿದೆ.

ಬೇರೊಬ್ಬರಿಗೆ ಸಹಾಯ ಮಾಡುವ ಮನಸ್ಸಿದ್ದರೂ 1 ರೂಪಾಯಿ ಕೊಡಲು ಹಿಂದೆ ಮುಂದೆ ನೋಡುವ ಸ್ಥಿತಿ ಇದೆ. ಆದ್ರೆ ಸಹಾಯ ಮಾಡಲೇಬೇಕು ಅನ್ನುವವರು ಈ ರೀತಿ ಹೋಟೆಲ್​ಗೆ ಹೋಗಿ ಅಲ್ಲಿ ಕಾರ್ಡ್​ನ್ನ ಖರೀದಿಸಿ ನಂತರ ಭೀಕ್ಷುಕರಿಗೆ ಅದನ್ನ ನೀಡಬಹುದು. ಕಾರ್ಡ್ ಮೂಲಕ ಇಷ್ಟವಾದ ಆಹಾರವನ್ನ ಅವರು ತಿನ್ನುವಂತಾಗುತ್ತದೆ. ಒಟ್ನಲ್ಲಿ ಇದೊಂದು ಡಿಫರೆಂಟ್ ಐಡಿಯಾ ಆಗಿದ್ದು, ಈಗಾಗಲೇ ಕುಂದಾನಗರಿಯಲ್ಲಿ ಸಕ್ಸಸ್ ಕಾಣುತ್ತಿದೆ.

ಬಡ ವಿದ್ಯಾರ್ಥಿಗಳಿಗೆ ಮಿಡಿದ ವಿದ್ಯಾರ್ಥಿ ಜೀವ: 106 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯ

Published On - 7:03 am, Fri, 29 January 21

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ