AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್ ತಿಂಗಳಿನಲ್ಲಿ ಬೆಡ್, ಆಕ್ಸಿಜನ್ ಸಿಗದೆ 100 ಸೋಂಕಿತರು ಸಾವು; ಬಿಬಿಎಂಪಿ ನಡೆಸಿರುವ ಡೆತ್ ಆಡಿಟ್​ನಲ್ಲಿ ಬಯಲು

ಸರ್ಕಾರ ಮಾತ್ರ ಈ ಬಗ್ಗೆ ಹೆಚ್ಚು ಗಮನ ಹರಿಸುವಂತೆ ಕಾಣುತ್ತಿಲ್ಲ ಎಂದು ಮೃತ ಸಂಬಂಧಿಕರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ಬಿಬಿಎಂಪಿ ನಡೆಸಿರುವ ಡೆತ್ ಆಡಿಟ್​ನಲ್ಲಿ ಆಕ್ಸಿಜನ್ ಸಿಗದೆ ಸಾವನ್ನಪ್ಪಿರುವ ಅಂಶ ಬಯಲಾಗಿದೆ.

ಏಪ್ರಿಲ್ ತಿಂಗಳಿನಲ್ಲಿ ಬೆಡ್, ಆಕ್ಸಿಜನ್ ಸಿಗದೆ 100 ಸೋಂಕಿತರು ಸಾವು; ಬಿಬಿಎಂಪಿ ನಡೆಸಿರುವ ಡೆತ್ ಆಡಿಟ್​ನಲ್ಲಿ ಬಯಲು
ಬಿಬಿಎಂಪಿ ಮುಖ್ಯ ಕಚೇರಿ
sandhya thejappa
|

Updated on: May 04, 2021 | 9:01 AM

Share

ಬೆಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಹೊರತು ಇಳಿಮುಖವಾಗುವ ಹಾಗೆ ಕಂಡುಬರುತ್ತಿಲ್ಲ. ಕೆಲ ಸೋಂಕಿತರು ಸೂಕ್ತ ಚಿಕಿತ್ಸೆ ಸಿಗದೆ ಸಾವನ್ನಪ್ಪುತಿದ್ದರೆ, ಇನ್ನು ಕೆಲವರು ಆಕ್ಸಿಜನ್ ಕೊರತೆ ಹಾಗೂ ಬೆಡ್ಗ​ಳ ಕೊರತೆಯಿಂದ ಸಾವನ್ನಪ್ಪುತ್ತಿದ್ದಾರೆ. ಈ ಬಗ್ಗೆ ಪ್ರತಿದಿನ ಟಿವಿ9 ನಲ್ಲಿ ವರದಿಯಾಗುತ್ತಿದೆ. ಆದರೆ ಸರ್ಕಾರ ಮಾತ್ರ ಈ ಬಗ್ಗೆ ಹೆಚ್ಚು ಗಮನ ಹರಿಸುವಂತೆ ಕಾಣುತ್ತಿಲ್ಲ ಎಂದು ಮೃತ ಸಂಬಂಧಿಕರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ಬಿಬಿಎಂಪಿ ನಡೆಸಿರುವ ಡೆತ್ ಆಡಿಟ್​ನಲ್ಲಿ ಆಕ್ಸಿಜನ್ ಸಿಗದೆ ಸಾವನ್ನಪ್ಪಿರುವ ಅಂಶ ಬಯಲಾಗಿದೆ.

ಬೆಂಗಳೂರಿನಲ್ಲೂ ಆಕ್ಸಿಜನ್ ಸಿಗದೆ ಸೋಂಕಿತರು ಸದ್ದಿಲ್ಲದೆ ಸಾವನ್ನಪ್ಪುತ್ತಿದ್ದಾರೆ. ಕಳೆದ ಏಪ್ರಿಲ್ ತಿಂಗಳಿನಲ್ಲಿ ಹೋಮ್ ಐಸೋಲೇಶನ್​ನಲ್ಲಿದ್ದ ಸುಮಾರು 100 ಸೋಂಕಿತರು ಮೃತಪಟ್ಟಿದ್ದಾರೆ. ಏಪ್ರಿಲ್​ನಲ್ಲಿ ಒಟ್ಟು 1,907 ಜನ ಸೋಂಕಿತರು ಮೃತಪಟ್ಟಿದ್ದು, ಈ ಪೈಕಿ 100 ಜನ ಹೋಮ್ ಐಸೋಲೇಶನ್​ನಲ್ಲಿ ಮತ್ತು ದಾರಿ ಮಧ್ಯೆ ಮರಣ ಹೊಂದಿರುತ್ತಾರೆ. ಸಾಕಷ್ಟು ಸೋಂಕಿತರು ಏರುಸಿರು ಎಳೆಯುತ್ತಾ ಆಕ್ಸಿಜನ್ ನೀಡುವಂತೆ ಆಸ್ಪತ್ರೆಗೆ ಅಲೆದು ಅಲೆದು ಮರಣ ಹೊದಿರುತ್ತಾರೆ. ಕೊನೆಗೆ ಮನೆಯಲ್ಲೇ ಮೃತಪಟ್ಟಿದ್ದಾರೆ, ಇನ್ನೂ ಕೆಲವರು ಆಸ್ಪತ್ರೆಯ ಎದುರು ಸಾವನ್ನಪ್ಪಿದ್ದಾರೆಂದು ಬಿಬಿಎಂಪಿ ನಡೆಸಿರುವ ಡೆತ್ ಆಡಿಟ್​ನಲ್ಲಿ ತಿಳಿದುಬಂದಿದೆ.

ಇದನ್ನೂ ಓದಿ

24 ಸಾವು ಪ್ರಕರಣ: ಸಾವಿನ ಸಂಖ್ಯೆ ಮುಚ್ಚಿಡುತ್ತಿದ್ದಾರೆ; ಕಾಂಗ್ರೆಸ್ ಶಾಸಕ ಆರ್.ನರೇಂದ್ರ ಗಂಭೀರ ಆರೋಪ

ಈಗಲಾದರೂ ಮೌಢ್ಯದ ಪೊರೆ ಕಳಚಿ ಚಾಮರಾಜನಗರಕ್ಕೆ ಭೇಟಿ ನೀಡ್ತಾರಾ ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

(Death audit conducted by BBMP reveals that 100 infected people died in April without bed and oxygen in Bengaluru)

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ