ಎಂಪಿ ಪ್ರಕಾಶ್ ಪುತ್ರಿಗೆ ಕೊಲೆ ಬೆದರಿಕೆ: ಮಾಜಿ ಶಾಸಕನ ವಿರುದ್ಧ ಎಫ್​ಐಆರ್​

ಮೈಸೂರು: ಮಾಜಿ ಸಚಿವ ದಿವಂಗತ ಎಂ.‌ಪಿ.ಪ್ರಕಾಶ್ ಪುತ್ರಿಗೆ ಕೊಲೆ ಬೆದರಿಕೆ ಹಾಕಿರುವ ಆರೋಪದ ಮೇಲೆ ಮಾಜಿ ಶಾಸಕ ಹೆಚ್.ಪಿ.ಮಂಜುನಾಥ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮನೆಯ ಕೀ ಕೇಳಿದರೆ ಕೊಲೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಎಂ.‌ಪಿ.ಪ್ರಕಾಶ್ ಪುತ್ರಿ ಸುಮಾ ವಿಜಯ್ ವಿ.ವಿ.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. ಮನೆ ವಿವಾದ ಸಂಬಂಧ ಇದು ಮೂರನೇ ಎಫ್​ಐಆರ್ ದಾಖಲಾಗಿದೆ. ನನ್ನ ತಮ್ಮ, ಮಾಜಿ ಶಾಸಕ ಎಂ.ಪಿ.ರವೀಂದ್ರ ಹಾಗೂ ಹೆಚ್.ಪಿ.ಮಂಜುನಾಥ್ ಸ್ನೇಹಿತರಾಗಿದ್ದರು. ನನ್ನ ತಮ್ಮ ಮೈಸೂರಿನ ವಿವಿ ಮೊಹಲ್ಲಾದಲ್ಲಿ ಪೆಂಟ್ ಹೌಸ್ […]

ಎಂಪಿ ಪ್ರಕಾಶ್ ಪುತ್ರಿಗೆ ಕೊಲೆ ಬೆದರಿಕೆ: ಮಾಜಿ ಶಾಸಕನ ವಿರುದ್ಧ ಎಫ್​ಐಆರ್​
ಸಾಧು ಶ್ರೀನಾಥ್​

Updated on: Oct 25, 2019 | 12:08 PM

ಮೈಸೂರು: ಮಾಜಿ ಸಚಿವ ದಿವಂಗತ ಎಂ.‌ಪಿ.ಪ್ರಕಾಶ್ ಪುತ್ರಿಗೆ ಕೊಲೆ ಬೆದರಿಕೆ ಹಾಕಿರುವ ಆರೋಪದ ಮೇಲೆ ಮಾಜಿ ಶಾಸಕ ಹೆಚ್.ಪಿ.ಮಂಜುನಾಥ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಮನೆಯ ಕೀ ಕೇಳಿದರೆ ಕೊಲೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಎಂ.‌ಪಿ.ಪ್ರಕಾಶ್ ಪುತ್ರಿ ಸುಮಾ ವಿಜಯ್ ವಿ.ವಿ.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. ಮನೆ ವಿವಾದ ಸಂಬಂಧ ಇದು ಮೂರನೇ ಎಫ್​ಐಆರ್ ದಾಖಲಾಗಿದೆ.

ನನ್ನ ತಮ್ಮ, ಮಾಜಿ ಶಾಸಕ ಎಂ.ಪಿ.ರವೀಂದ್ರ ಹಾಗೂ ಹೆಚ್.ಪಿ.ಮಂಜುನಾಥ್ ಸ್ನೇಹಿತರಾಗಿದ್ದರು. ನನ್ನ ತಮ್ಮ ಮೈಸೂರಿನ ವಿವಿ ಮೊಹಲ್ಲಾದಲ್ಲಿ ಪೆಂಟ್ ಹೌಸ್ ಖರೀದಿಸಿದ್ದ. ಸ್ನೇಹಿತರಾಗಿದ್ದ ಕಾರಣಕ್ಕೆ ತಾತ್ಕಾಲಿಕವಾಗಿ ಉಳಿದುಕೊಳ್ಳಲು ಮಂಜುನಾಥ್‌ಗೆ ಬಿಟ್ಟುಕೊಟ್ಟಿದ್ದ. ಆದ್ರೆ, ಎಂ.ಪಿ.ರವೀಂದ್ರ ಮರಣಾನಂತರ ಮನೆಗೆ ಅತಿಕ್ರಮ ಪ್ರವೇಶ ಮಾಡಿದ್ದು, ಈಗ ಮನೆ ಖಾಲಿ ಮಾಡುತ್ತಿಲ್ಲ. ಮನೆಯ ಕೀ ಕೇಳಿದರೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಸುಮಾ ಆರೋಪಿಸಿದ್ದಾರೆ.

ಈಗಾಗಲೇ ಅತಿಕ್ರಮ ಪ್ರವೇಶ ಸಂಬಂಧ ದೂರು ದಾಖಲಾಗಿದ್ದು, ಇದೀಗ ಸುಮಾ ವಿಜಯ್ ಮತ್ತೊಂದು ದೂರು ದಾಖಲಿಸಿದ್ದಾಳೆ. ಅಲ್ಲದೆ, ಸುಮಾ ವಿರುದ್ಧವೂ ಮಾಜಿ ಶಾಸಕ ಹೆಚ್​.ಪಿ.ಮಂಜುನಾಥ್ ಪ್ರತಿ ದೂರು ದಾಖಲಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us