ಕುಸಿದ ವಿದ್ಯುತ್‌ ಉತ್ಪಾದನೆ; ಇಂಧನ ಇಲಾಖೆಯ ಅಧಿಕಾರಿಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ

ಇಂಧನ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದ ವಿದ್ಯುತ್‌ ಉತ್ಪಾದನೆ ಸ್ಥಾಪಿತ ಸಾಮರ್ಥ್ಯಕ್ಕಿಂತ ಕುಸಿದಿರುವುದಕ್ಕೆ ಅಧಿಕಾರಿಗಳ ವಿರುದ್ಧ ಗರಂ ಆಗಿದರು. ಅಲ್ಲದೆ, ನಮ್ಮ ಮೊದಲ ಅವಧಿಯ ಸರ್ಕಾರದಲ್ಲಿ ಉತ್ಪಾದನೆ ದುಪ್ಪಟ್ಟಾಗಿತ್ತು. ಸದ್ಯ 32,009 ಮೆಗಾವ್ಯಾಟ್‌ ಉತ್ಪಾದನೆಯಾಗುತ್ತಿದ್ದು, ಕಳೆದ 4 ವರ್ಷಗಳಲ್ಲಿ ಉತ್ಪಾದನೆ ಪ್ರಮಾಣ ಹೆಚ್ಚಳವಾಗಿಲ್ಲವೇಕೆ ಎಂದು ಪ್ರಶ್ನಿಸಿದ್ದಾರೆ.

ಕುಸಿದ ವಿದ್ಯುತ್‌ ಉತ್ಪಾದನೆ; ಇಂಧನ ಇಲಾಖೆಯ ಅಧಿಕಾರಿಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ
ಮುಖ್ಯಮಂತ್ರಿ ಸಿದ್ದರಾಮಯ್ಯ
Follow us
| Updated By: Rakesh Nayak Manchi

Updated on: Sep 22, 2023 | 4:21 PM

ಬೆಂಗಳೂರು, ಸೆ.22: ರಾಜ್ಯದ ವಿದ್ಯುತ್‌ ಉತ್ಪಾದನೆ ಸ್ಥಾಪಿತ ಸಾಮರ್ಥ್ಯಕ್ಕಿಂತ ಕುಸಿದಿರುವ ಹಿನ್ನೆಲೆ ಇಂಧನ ಇಲಾಖೆ (Power Department) ಅಧಿಕಾರಿಗಳ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಗರಂ ಆದರು. ಅಧಿಕಾರಿಗಳೊಂದಿಗಿನ ಸಭೆಯಲ್ಲಿ, ನಮ್ಮ ಮೊದಲ ಅವಧಿಯ ಸರ್ಕಾರದಲ್ಲಿ ಉತ್ಪಾದನೆ ದುಪ್ಪಟ್ಟಾಗಿತ್ತು. ಸದ್ಯ 32,009 ಮೆಗಾವ್ಯಾಟ್‌ ಉತ್ಪಾದನೆಯಾಗುತ್ತಿದ್ದು, ಕಳೆದ 4 ವರ್ಷಗಳಲ್ಲಿ ಉತ್ಪಾದನೆ ಪ್ರಮಾಣ ಹೆಚ್ಚಳವಾಗಿಲ್ಲವೇಕೆ ಎಂದು ಪ್ರಶ್ನಿಸಿದರು.

2013 -14ರಲ್ಲಿ 14,048 ಮೆಗಾವ್ಯಾಟ್‌ ಇದ್ದದ್ದು 2017-18ರ ವೇಳೆಗೆ 27,780 ಮೆಗಾವ್ಯಾಟ್​ಗೆ ಉತ್ಪಾದನೆ ಏರಿಕೆಯಾಗಿತ್ತು. ಸದ್ಯ ಕೇವಲ 32,009 ಮೆಗಾ ವ್ಯಾಟ್‌ ಉತ್ಪಾದನೆ ಆಗುತ್ತಿದೆ. ವಿವಿರ ನೀಡುವಂತೆ ಸಿದ್ದರಾಮಯ್ಯ ಅವರು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಕೇಂದ್ರದಿಂದ ರಾಜ್ಯಕ್ಕೆ ಹಂಚಿಕೆಯಾಗಿರುವ ಕಲ್ಲಿದ್ದಲಿನ ಗುಣಮಟ್ಟ ಉತ್ತಮವಾಗಿಲ್ಲ. ಅಗತ್ಯ ಗುಣಮಟ್ಟದಲ್ಲಿ ಇಲ್ಲದಿರುವುದರಿಂದ ವಿದ್ಯುತ್‌ ಉತ್ಪಾದನೆಯ ಪ್ರಮಾಣದ ಮೇಲೆ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಕೇಂದ್ರದ ಗಮನಕ್ಕೆ ತರಲಾಗಿದ್ದು, ಪ್ರತಿದಿನ ಎರಡು ರೇಕುಗಳಷ್ಟು ಹೆಚ್ಚುವರಿ ಕಲ್ಲಿದ್ದಲು ಹಂಚಿಕೆಗೆ ಕೋರಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ವಿರುದ್ಧದ ಚುನಾವಣಾ ತಕರಾರು ಅರ್ಜಿ: ವಿಚಾರಣೆ ಅ. 6ಕ್ಕೆ ಮುಂದೂಡಿದ ಹೈಕೋರ್ಟ್

ಇದಲ್ಲದೆ, ಕಲ್ಲಿದ್ದಲು ಆಮದು ಮಾಡಲು ಸಹ ಟೆಂಡರ್‌ ಕರೆಯಲಾಗಿದೆ ಎಂದು ಅಧಿಕಾರಿಗಳು ವಿವರಿಸಿದರು. ಮಾಹಿತಿ ಪಡೆದ ಸಿದ್ದರಾಮಯ್ಯ, ರಾಜ್ಯದ ಸ್ಥಾಪಿತ ಸಾಮರ್ಥ್ಯಕ್ಕೆ ಅನುಸಾರವಾಗಿ ವಿದ್ಯುತ್‌ ಉತ್ಪಾದನೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಉಷ್ಣ ವಿದ್ಯುತ್‌ ಸ್ಥಾವರಗಳಲ್ಲಿ ತೇವಗೊಂಡ ಕಲ್ಲಿದ್ದಲು ಬಳಕೆ ಮಾಡದಂತೆ ಸೂಚಿಸಿದ ಸಿಎಂ, ನೀರಾವರಿಗೆ ಸೌರ ವಿದ್ಯುತ್‌ ಪಂಪ್‌ ಸೆಟ್‌ಗಳ ಬಳಕೆಯನ್ನು ಉತ್ತೇಜಿಸುವ ಕುರಿತು ಚರ್ಚೆ ನಡೆಸಿದರು. ಗೃಹ ಜ್ಯೋತಿ ಯೋಜನೆಯಡಿ ಆಗಸ್ಟ್‌ ತಿಂಗಳಲ್ಲಿ 1.26 ಕೋಟಿ ಗ್ರಾಹಕರಿಗೆ ಹಾಗೂ ಸೆಪ್ಟೆಂಬರ್‌ ತಿಂಗಳಲ್ಲಿ 1.35 ಕೋಟಿ ಗ್ರಾಹಕರಿಗೆ ಶೂನ್ಯ ಮೊತ್ತದ ವಿದ್ಯುತ್‌ ಬಿಲ್‌ ನೀಡಲಾಗಿದೆ. ಇದಕ್ಕಾಗಿ 1400 ಕೋಟಿ ರೂ. ಒದಗಿಸಲಾಗಿದೆ ಎಂದರು.

ಎಸ್ಕಾಂಗಳ ಆರ್ಥಿಕ ಸ್ಥಿತಿಗತಿ ಕುರಿತೂ ಸಹ ಸಭೆಯಲ್ಲಿ ಚರ್ಚಿಸಲಾಯಿತು. ವಿದ್ಯುತ್‌ ಸೋರಿಕೆ ಕುರಿತಂತೆ ರಾಜ್ಯದ ಎಲ್ಲ ಎಸ್ಕಾಂಗಳೂ ಹೆಚ್ಚಿನ ಗಮನ ಹರಿಸುವಂತೆ ಸೂಚಿಸಿದ ಸಿಎಂ, ಅಗತ್ಯವಿರುವಲ್ಲಿ ಟ್ರಾನ್ಸ್‌ಫಾರ್ಮರ್‌ ಅಳವಡಿಕೆ ಹಾಗೂ ವಿದ್ಯುತ್‌ ಉಪಕೇಂದ್ರಗಳ ಸ್ಥಾಪನೆಗೆ ಕ್ರಮ ವಹಿಸುವಂತೆ ಸೂಚನೆ ನೀಡಿದರು.

ಪ್ರಸಕ್ತ ವರ್ಷದಲ್ಲಿ ವಿದ್ಯುತ್‌ ಉಪಕೇಂದ್ರಗಳ ಸ್ಥಾಪನೆಗಾಗಿ 2500 ಕೋಟಿ ರೂ. ಒದಗಿಸಲಾಗಿದೆ. ರಾಜ್ಯದ ಪ್ರಸಕ್ತ ವಿದ್ಯುತ್‌ ಪರಿಸ್ಥಿತಿ ಕುರಿತು ಹಾಗೂ ಆರ್ಥಿಕ ಸ್ಥಿತಿಗತಿ ಕುರಿತಂತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವುದು ಸೂಕ್ತ ಎಂದು ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ