Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಬಸ್​ಗಳಿಂದ ದುಪ್ಪಟ್ಟು ಹಣ ವಸೂಲಿ; ಮೂರು ದಿನಗಳಲ್ಲಿ 1.90 ಲಕ್ಷ ದಂಡ ವಿಧಿಸಿದ ಆರ್​ಟಿಓ ಅಧಿಕಾರಿಗಳು

ಹಬ್ಬದ ಹಿನ್ನೆಲೆ ದುಪ್ಪಟ್ಟು ಟಿಕೆಟ್ ದರ ವಸೂಲಿ ಮಾಡುತ್ತಿದ್ದ ಖಾಸಗಿ ಬಸ್​ಗಳ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ ಆರ್​ಟಿಓ ಅಧಿಕಾರಿಗಳು ಮೂರು ದಿನಗಳಲ್ಲಿ ಒಂದೂವರೆ ಲಕ್ಷಕ್ಕೂ ಅಧಿಕ ದಂಡ ವಸೂಲಿ ಮಾಡಿದ್ದಾರೆ.

ಖಾಸಗಿ ಬಸ್​ಗಳಿಂದ ದುಪ್ಪಟ್ಟು ಹಣ ವಸೂಲಿ; ಮೂರು ದಿನಗಳಲ್ಲಿ 1.90 ಲಕ್ಷ ದಂಡ ವಿಧಿಸಿದ ಆರ್​ಟಿಓ ಅಧಿಕಾರಿಗಳು
ಖಾಸಗಿ ಬಸ್​ಗಳಿಂದ ದುಪ್ಪಟ್ಟು ಹಣ ವಸೂಲಿ; ದಂಡ ವಿಧಿಸಿದ ಆರ್​ಟಿಓ ಅಧಿಕಾರಿಗಳುImage Credit source: ಸಾಂದರ್ಭಿಕ ಚಿತ್ರ
Follow us
TV9 Web
| Updated By: Rakesh Nayak Manchi

Updated on: Oct 23, 2022 | 4:26 PM

ದೀಪಾವಳಿ (Diwali 2022) ಹಬ್ಬಕ್ಕೆ ಒಂದು ಊರಿನಿಂದ ಮತ್ತೊಂದು ಊರಿಗೆ ಹೋಗುವವರ ಸಂಖ್ಯೆ ಹೆಚ್ಚು. ಹಬ್ಬಕ್ಕೆ ಸಾಲು ಸಾಲು ರಜೆಗಳು ಇರುವ ಹಿನ್ನೆಲೆ ಸಾಕಷ್ಟು ಜನರು ತಮ್ಮ ಸ್ವಂತ ಊರಿನತ್ತ ಹೋಗುತ್ತಿದ್ದಾರೆ. ಇದನ್ನೆ ಬಂಡವಾಳ ಮಾಡಿಕೊಂಡಿರುವ ಕೆಲ ಖಾಸಗಿ ಬಸ್ಸು (Private bus) ಗಳು ಟಿಕೆಟ್ ದರವನ್ನು ಡಬಲ್ ಪಡೆಯುತ್ತಿದ್ದಾರೆ. ಆದರೆ ಪ್ರಯಾಣಿಕರಿಂದ ಹಣ ವಸೂಲಿಗೆ ಇಲಿದ ಖಾಸಗಿ ಬಸ್​ಗಳ ವಿರುದ್ಧ ಅಖಾಡಕ್ಕಿಳಿದ ಆರ್​ಟಿಓ (RTO) ಅಧಿಕಾರಿಗಳು ಮೂರು ದಿನಗಳಲ್ಲಿ 1.90 ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದ್ದಾರೆ. ಇಂದು ಸಹ ಸಂಜೆ 5 ಗಂಟೆಯಿಂದ ಖಾಸಗಿ ಬಸ್ಸುಗಳ ಪರಿಶೀಲನೆ ಆರಂಭವಾಗಲಿದೆ.

ದೀಪಾವಳಿ ಹಬ್ಬಕ್ಕೆ ಖಾಸಗಿ ಬಸ್ಸುಗಳ ದರ ದುಪ್ಪಟ್ಟು ಏರಿಕೆ ಹಿನ್ನಲೆ ಮೂರು ದಿನಗಳಿಂದ ಫೀಲ್ಡ್​ಗೆ ಇಳಿದಿರುವ ಆರ್​ಟಿಓ ಅಧಿಕಾರಿಗಳು, ದುಪ್ಪಟ್ಟ ದರ ಕಂಡುಬಂದಂತಹ ಟ್ರಾವೆಲ್ಸ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸುತ್ತಿದ್ದಾರೆ. ಮೊದಲನೇ ದಿನ ಅಂದರೆ ಅ.20ರಂದು ದುಬಾರಿ ಟಿಕೆಟ್ ದರ ವಸೂಲಿ ಮಾಡುತ್ತಿದ್ದ 198 ಬಸ್​ಗಳನ್ನು ಹಿಡಿದು ಪ್ರಕರಣ ದಾಖಲಿಸಲಾಗಿದೆ. ಎರಡನೇ ದಿನ ಅಂದರೆ ಅ.21 ರಂದು 143 ಗಾಡಿಗಾಲನ್ನ ಹಿಡಿದು ಪ್ರಕರಣ ದಾಖಲಿಸಿದರೆ, ಮೂರನೇ ದಿನದಂದು ಅಂದರೆ ಅ.22 ರಂದು 109 ಗಾಡಿಗಳನ್ನ ಹಿಡಿದು ಪ್ರಕರಣ ದಾಖಲಿಸಲಾಗಿದೆ.

ಆರ್​ಟಿಓ ಅಧಿಕಾರಿಗಳು ಟ್ರಾವೆಲ್ಸ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿ ಇಟ್ಟು 1.90 ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದ್ದಾರೆ. ಇಂದು ಸಹ ಸಂಜೆ 5 ಗಂಟೆಯಿಂದ ಖಾಸಗಿ ಬಸ್ಸುಗಳ ಪರಿಶೀಲನೆಯನ್ನು ಅಧಿಕಾರಿಗಳು ನಡೆಸಲಿದ್ದು, ದುಪ್ಪಟ್ಟು ದಂಡ ವಸೂಲಿ ಮಾಡಿದರೆ ಬಸ್ ಮಾಲೀಕರ ವಿರುದ್ಧ ಕೇಸ್ ದಾಖಲಿಸಿ ದಂಡ ವಸೂಲಿ ಮಾಡಲಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಸತೀಶ್ ಜಾರಕಿಹೊಳಿ ದೆಹಲಿಗೆ ಯಾಕೆ ಹೋಗಿದ್ದು ಅಂತ ಗೊತ್ತಿಲ್ಲ: ರಾಜಣ್ಣ
ಸತೀಶ್ ಜಾರಕಿಹೊಳಿ ದೆಹಲಿಗೆ ಯಾಕೆ ಹೋಗಿದ್ದು ಅಂತ ಗೊತ್ತಿಲ್ಲ: ರಾಜಣ್ಣ
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?