AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಬಸ್​ಗಳಿಂದ ದುಪ್ಪಟ್ಟು ಹಣ ವಸೂಲಿ; ಮೂರು ದಿನಗಳಲ್ಲಿ 1.90 ಲಕ್ಷ ದಂಡ ವಿಧಿಸಿದ ಆರ್​ಟಿಓ ಅಧಿಕಾರಿಗಳು

ಹಬ್ಬದ ಹಿನ್ನೆಲೆ ದುಪ್ಪಟ್ಟು ಟಿಕೆಟ್ ದರ ವಸೂಲಿ ಮಾಡುತ್ತಿದ್ದ ಖಾಸಗಿ ಬಸ್​ಗಳ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ ಆರ್​ಟಿಓ ಅಧಿಕಾರಿಗಳು ಮೂರು ದಿನಗಳಲ್ಲಿ ಒಂದೂವರೆ ಲಕ್ಷಕ್ಕೂ ಅಧಿಕ ದಂಡ ವಸೂಲಿ ಮಾಡಿದ್ದಾರೆ.

ಖಾಸಗಿ ಬಸ್​ಗಳಿಂದ ದುಪ್ಪಟ್ಟು ಹಣ ವಸೂಲಿ; ಮೂರು ದಿನಗಳಲ್ಲಿ 1.90 ಲಕ್ಷ ದಂಡ ವಿಧಿಸಿದ ಆರ್​ಟಿಓ ಅಧಿಕಾರಿಗಳು
ಖಾಸಗಿ ಬಸ್​ಗಳಿಂದ ದುಪ್ಪಟ್ಟು ಹಣ ವಸೂಲಿ; ದಂಡ ವಿಧಿಸಿದ ಆರ್​ಟಿಓ ಅಧಿಕಾರಿಗಳುImage Credit source: ಸಾಂದರ್ಭಿಕ ಚಿತ್ರ
TV9 Web
| Edited By: Rakesh Nayak Manchi|

Updated on: Oct 23, 2022 | 4:26 PM

Share

ದೀಪಾವಳಿ (Diwali 2022) ಹಬ್ಬಕ್ಕೆ ಒಂದು ಊರಿನಿಂದ ಮತ್ತೊಂದು ಊರಿಗೆ ಹೋಗುವವರ ಸಂಖ್ಯೆ ಹೆಚ್ಚು. ಹಬ್ಬಕ್ಕೆ ಸಾಲು ಸಾಲು ರಜೆಗಳು ಇರುವ ಹಿನ್ನೆಲೆ ಸಾಕಷ್ಟು ಜನರು ತಮ್ಮ ಸ್ವಂತ ಊರಿನತ್ತ ಹೋಗುತ್ತಿದ್ದಾರೆ. ಇದನ್ನೆ ಬಂಡವಾಳ ಮಾಡಿಕೊಂಡಿರುವ ಕೆಲ ಖಾಸಗಿ ಬಸ್ಸು (Private bus) ಗಳು ಟಿಕೆಟ್ ದರವನ್ನು ಡಬಲ್ ಪಡೆಯುತ್ತಿದ್ದಾರೆ. ಆದರೆ ಪ್ರಯಾಣಿಕರಿಂದ ಹಣ ವಸೂಲಿಗೆ ಇಲಿದ ಖಾಸಗಿ ಬಸ್​ಗಳ ವಿರುದ್ಧ ಅಖಾಡಕ್ಕಿಳಿದ ಆರ್​ಟಿಓ (RTO) ಅಧಿಕಾರಿಗಳು ಮೂರು ದಿನಗಳಲ್ಲಿ 1.90 ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದ್ದಾರೆ. ಇಂದು ಸಹ ಸಂಜೆ 5 ಗಂಟೆಯಿಂದ ಖಾಸಗಿ ಬಸ್ಸುಗಳ ಪರಿಶೀಲನೆ ಆರಂಭವಾಗಲಿದೆ.

ದೀಪಾವಳಿ ಹಬ್ಬಕ್ಕೆ ಖಾಸಗಿ ಬಸ್ಸುಗಳ ದರ ದುಪ್ಪಟ್ಟು ಏರಿಕೆ ಹಿನ್ನಲೆ ಮೂರು ದಿನಗಳಿಂದ ಫೀಲ್ಡ್​ಗೆ ಇಳಿದಿರುವ ಆರ್​ಟಿಓ ಅಧಿಕಾರಿಗಳು, ದುಪ್ಪಟ್ಟ ದರ ಕಂಡುಬಂದಂತಹ ಟ್ರಾವೆಲ್ಸ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸುತ್ತಿದ್ದಾರೆ. ಮೊದಲನೇ ದಿನ ಅಂದರೆ ಅ.20ರಂದು ದುಬಾರಿ ಟಿಕೆಟ್ ದರ ವಸೂಲಿ ಮಾಡುತ್ತಿದ್ದ 198 ಬಸ್​ಗಳನ್ನು ಹಿಡಿದು ಪ್ರಕರಣ ದಾಖಲಿಸಲಾಗಿದೆ. ಎರಡನೇ ದಿನ ಅಂದರೆ ಅ.21 ರಂದು 143 ಗಾಡಿಗಾಲನ್ನ ಹಿಡಿದು ಪ್ರಕರಣ ದಾಖಲಿಸಿದರೆ, ಮೂರನೇ ದಿನದಂದು ಅಂದರೆ ಅ.22 ರಂದು 109 ಗಾಡಿಗಳನ್ನ ಹಿಡಿದು ಪ್ರಕರಣ ದಾಖಲಿಸಲಾಗಿದೆ.

ಆರ್​ಟಿಓ ಅಧಿಕಾರಿಗಳು ಟ್ರಾವೆಲ್ಸ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿ ಇಟ್ಟು 1.90 ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದ್ದಾರೆ. ಇಂದು ಸಹ ಸಂಜೆ 5 ಗಂಟೆಯಿಂದ ಖಾಸಗಿ ಬಸ್ಸುಗಳ ಪರಿಶೀಲನೆಯನ್ನು ಅಧಿಕಾರಿಗಳು ನಡೆಸಲಿದ್ದು, ದುಪ್ಪಟ್ಟು ದಂಡ ವಸೂಲಿ ಮಾಡಿದರೆ ಬಸ್ ಮಾಲೀಕರ ವಿರುದ್ಧ ಕೇಸ್ ದಾಖಲಿಸಿ ದಂಡ ವಸೂಲಿ ಮಾಡಲಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ